ಆಳುವವರೇ ಕನ್ನಡದ ವಿರುದ್ಧ ನಿಂತಿದ್ದಾರೆ


Team Udayavani, Jan 7, 2019, 6:56 AM IST

aluvavare.jpg

ಬೆಂಗಳೂರು: ಆಳುವ ಸರ್ಕಾರವೇ ಕನ್ನಡದ ವಿರುದ್ಧ ನಿಂತಿದ್ದು, ಮುಂಬರುವ ದಿನಗಳಲ್ಲಿ ಕನ್ನಡ ಮತ್ತು ಕನ್ನಡ ಕಲಿಸುವವರಿಗೆ ತುಂಬಾ ದಾರುಣ ಸ್ಥಿತಿ ಎದುರಾಗಲಿದೆ ಎಂದು ಕವಿ ಡಾ.ಎಚ್‌.ಎಸ್‌. ವೆಂಕಟೇಶಮೂರ್ತಿ ಕಳವಳ ವ್ಯಕ್ತಪಡಿಸಿದರು.

ನಗರದ ಶಿಕ್ಷಕರ ಸದನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಎಲ್ಲ ರೀತಿಯ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವ ಸಂದರ್ಭ ಇದು.

ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಜಾರಿ ಮಾಡಿಯೇ ತೀರುತ್ತೇವೆ ಎನ್ನುವ ಮೂಲಕ ಆಳುವ ಸರ್ಕಾರವೇ ಕನ್ನಡದ ವಿರುದ್ಧ ನಿಂತಿದೆ. ಈ ರೀತಿಯ ನಿಲುವು ಸರಿಯಲ್ಲ ಎಂಬುದನ್ನು ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಅತ್ಯಂತ ಕಠೊರವಾಗಿ ಹೇಳಿದರೂ, ನಮ್ಮ ಮಂತ್ರಿಮಾನ್ಯರಿಗೆ ಅದು ಅರ್ಥವಾಗುತ್ತಿಲ್ಲ. ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ.

ಆದರೆ, ಇದರಿಂದಾಗುವ ಪರಿಣಾಮಗಳ ಬಗ್ಗೆ ಕೂಲಂಕಷವಾಗಿ ಯೋಚಿಸುವ ಅಗತ್ಯವಿದೆ ಎಂದು ಹೇಳಿದರು. ಹಾಗೊಂದು ವೇಳೆ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಯಾದರೆ, ಕನ್ನಡ ಮತ್ತು ಕನ್ನಡಿಗರ ಪಾಲಿಗೆ ಭವಿಷ್ಯದ ದಿನಗಳು ದಾರುಣವಾಗಿರಲಿವೆ. ಅದರಲ್ಲೂ ಕನ್ನಡ ಶಿಕ್ಷಕರ ಮೌಲ್ಯ ಕುಸಿಯಲಿದ್ದು, ಕನ್ನಡ ಕಲಿಸುವವರ ಬಗ್ಗೆ ಉದಾಸೀನತೆ ಉಂಟಾಗಲಿದೆ ಎಂದು ಕವಿ ಆತಂಕ ವ್ಯಕ್ತಪಡಿಸಿದರು.

ಕನ್ನಡವನ್ನು ಇಂಗ್ಲಿಷ್‌ನಲ್ಲಿ ಹೇಳಬೇಕಿತ್ತು!: ಕನ್ನಡ ಶಿಕ್ಷಕರು ದೊಡ್ಡ ಪರಂಪರೆಯ ವಾರಸುದಾರರು. ಜ್ಞಾನಪೀಠ ಪಡೆದ ಎಂಟು ಜನರ ಪೈಕಿ ಐವರು ಶಿಕ್ಷಕರೇ ಆಗಿದ್ದಾರೆ. ಹಾಗಾಗಿ, ನಮ್ಮ ವೃತ್ತಿ ಬಗ್ಗೆ ಗೌರವ, ನಾವು ಕಲಿಸುವ ವಿಷಯ ಅಥವಾ ವಸ್ತು ಬಗ್ಗೆ ಗೌರವ ಮತ್ತು ವಿದ್ಯಾರ್ಥಿ ಪ್ರೀತಿ ಬೆಳೆಸಿಕೊಳ್ಳಬೇಕು. ಶಿಕ್ಷಕರು ಒಳ್ಳೆಯವರಾಗಿದ್ದರೆ ಶ್ರೇಷ್ಠ ವಿದ್ಯಾರ್ಥಿಗಳು ಹೊರಹೊಮ್ಮಲು ಸಾಧ್ಯ.

ನಾನು ಪಾಠ ಮಾಡುತ್ತಿದ್ದ ಕ್ರಿಶ್ಚಿಯನ್‌ ಕಾಲೇಜಿನಲ್ಲಿ ಕನ್ನಡವನ್ನು ಇಂಗ್ಲಿಷ್‌ನಲ್ಲಿ ಹೇಳಬೇಕಾದ ಸ್ಥಿತಿ ಇತ್ತು. ಇಂತಹ ವಾತಾವರಣದಲ್ಲಿ ನಾನು 30 ವರ್ಷ ವೃತ್ತಿ ಜೀವನ ಪೂರೈಸಿದ್ದೇನೆ. ಆ ಕಾಲೇಜಿಗೆ ಪುತಿನ, ಅನಂತಮೂರ್ತಿ, ಯಶವಂತ ಚಿತ್ತಾಲರಂತಹ ದಿಗ್ಗಜರು ಬರುವಂತೆ ಮಾಡಿದೆ. ಕನ್ನಡ ಸಂಘ ಕಟ್ಟಿದೆ. ಅಲ್ಲಿ ಸಂಪೂರ್ಣ ಕನ್ನಡದ ವಾತಾವರಣ ನಿರ್ಮಾಣವಾಯಿತು. ಹಾಗಾಗಿ, ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಶಿಕ್ಷಕರು ಹೀಗೆ ಕನ್ನಡ ಸಂಘ ಕಟ್ಟಲು ಮುಂದಾಗಿರುವುದು ಖುಷಿ ಕೊಟ್ಟಿದೆ. ಮೈಚಳಿ ಬಿಟ್ಟು ಈ ಶಿಕ್ಷಕರು ಹೊರಬರಬೇಕು. ಸಂಘಟನೆಯಲ್ಲಿ ಒಡಕು ಮೂಡದಂತೆ ಎಚ್ಚರವಹಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಸಚಿವ ಜಿ.ಟಿ.ದೇವೇಗೌಡ, ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್‌ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಟ್ಟೂರ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.