ಹಿಂದೆ ಇಬ್ಬರೂ ತೆಲುಗರು ಈಗ ತಮಿಳು ಮೇಯರ್‌?


Team Udayavani, Sep 20, 2017, 11:43 AM IST

bbmp2.jpg

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇತ್ತೀಚೆಗೆ ಕನ್ನಡ ಭಾಷೆ ಮತ್ತು ಕನ್ನಡ ಧ್ವಜದ ವಿಚಾರಗಳು ಭಾರಿ ಚರ್ಚೆಗೆ ಕಾರಣವಾಗಿದ್ದವು. ಮೆಟ್ರೋದಲ್ಲಿ ಕನ್ನಡದ ಜತೆಗೇ ಹಿಂದಿಯನ್ನು ಹೇರಿದ್ದರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದು ರಾಷ್ಟ್ರವೇ ನೋಡುವಂತಾಗಿತ್ತು. ಕನ್ನಡ ಪರ ಹೋರಾಟಕ್ಕೆ ಆಡಳಿತಾರೂಢ ಕಾಂಗ್ರೆಸ್‌ ಕೂಡ ಒತ್ತಾಸೆಯಾಗಿ ನಿಂತಿತ್ತು.

ಹೀಗಿರುವಾಗಲೇ ಕಾಂಗ್ರೆಸ್‌ ನೇತೃತ್ವದ ಬಿಬಿಎಂಪಿಯಲ್ಲಿ ವಿಚಿತ್ರ ಸನ್ನಿವೇಶವೊಂದು ಸೃಷ್ಟಿಯಾಗಿದೆ.  ಅದೇನೆಂದರೆ ರಾಜಧಾನಿಯ ಪ್ರಥಮ ಪ್ರಜೆ ಅಂದರೆ ಮೇಯರ್‌ ಕನ್ನಡಿಗರಲ್ಲದೇ ಬೇರೆ ಭಾಷಿಕರಾಗಿರುವುದು. ಈ ಎರಡು ಅವಧಿಯಲ್ಲಿ ತೆಲುಗರ ಕೈಲಿದ್ದ ಪಾಲಿಕೆ ಚುಕ್ಕಾಣಿ ಈ ಬಾರಿ ತಮಿಳು ಅಭ್ಯರ್ಥಿಯ ಕೈಗೆ ಹೋಗುತ್ತಿರುವುದು ಸದ್ಯ ಚರ್ಚಿತ ಸಂಗತಿಯಾಗಿದೆ. 

ನಗರದ ಆಡಳಿತ ಶಕ್ತಿ ಕೇಂದ್ರ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್‌ ಯಾರಾಗುತ್ತಾರೆ ಎಂಬ ಚರ್ಚೆ ಈಗ ಜೋರಾಗಿದೆ. ರಾಜಧಾನಿಯ ಪ್ರಥಮ ಪ್ರಜೆ ಆಯ್ಕೆ ಆಡಳಿತ ಪಕ್ಷ ಕಾಂಗ್ರೆಸ್‌ ಕೈಯಲ್ಲಿದ್ದು ಮೀಸಲಾತಿ ನಿಯಮಗಳ ಪ್ರಕಾರ ಮೇಯರ್‌ ಹುದ್ದೆ ಎಸ್ಸಿ ಸಮುದಾಯಕ್ಕೆ ಮೀಸಲಾಗಿದೆ. 

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ತಮಿಳು ಭಾಷಿಕರನ್ನು ಸೆಳೆಯಲು ರಾಜ್ಯ ಕಾಂಗ್ರೆಸ್‌ ತಮಿಳು ಭಾಷೆಯಲ್ಲಿಯೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಈಗ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಹಲವಾರು ತಂತ್ರಗಳನ್ನು ಹೆಣೆಯುತ್ತಿದ್ದು, ಈಗ ತಮಿಳು ಭಾಷಿಕರಿಗೆ ಮೇಯರ್‌ ಸ್ಥಾನ ನೀಡುವುದು ಕೂಡ ಅದರ ಒಂದು ಭಾಗವಾಗುವ ಸಾಧ್ಯತೆ ಇದೆ. 

ಕಾಂಗ್ರೆಸ್‌ನಲ್ಲಿ ಈಗಿರುವ ಕಾರ್ಪೊರೇಟರ್‌ಗಳ ಪೈಕಿ ದೇವರ ಜೀವನಹಳ್ಳಿ ವಾರ್ಡ್‌ ಸಂಪತ್‌ ರಾಜ್‌ ಹಾಗೂ ಸುಭಾಶ್‌ನಗರ ವಾರ್ಡ್‌ನ ಗೋವಿಂದ ರಾಜ್‌ ನಡುವೆ ಪೈಪೋಟಿ ನಡೆದಿದೆ. ಬಿಬಿಎಂಪಿಯಲ್ಲಿ 2015 ರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಆಡಳಿತ ನಡೆಯುತ್ತಿದ್ದು, ಈಗಾಗಲೇ ಇಬ್ಬರು ಮೇಯರ್‌ ಆಗಿ ಅಧಿಕಾರ ಅನುಭವಿಸಿದ್ದು, ಮೊದಲ ಅವಧಿಯಲ್ಲಿ ಮೇಯರ್‌ ಆಗಿದ್ದ ಮಂಜುನಾಥ ರೆಡ್ಡಿ, ಹಾಲಿ ಮೇಯರ್‌ ಪದ್ಮಾವತಿ ಇಬ್ಬರೂ ತೆಲಗು ಭಾಷಿಕರಾಗಿದ್ದಾರೆ. 

ಈಗ ಪೈಪೋಟಿಯಲ್ಲಿರುವ ದೇವರ ಜೀವನ್‌ ಹಳ್ಳಿ ವಾರ್ಡ್‌ ಕಾರ್ಪೊರೇಟರ್‌ ಸಂಪತ್‌ ರಾಜ್‌ ತಮಿಳು ಭಾಷಿಕರಾಗಿದ್ದು, ಮೂಲ ತಮಿಳುನಾಡಿನ ತಿರುನಾಲ್ವೆಲಿಯಿಂದ ಬೆಂಗಳೂರಿಗೆ ವಲಸೆ ಬಂದವರಾಗಿದ್ದಾರೆ. ಮೇಯರ್‌ ಗಾದಿಗಾಗಿ ಅವರೂ ಸಾಕಷ್ಟು ಪೈಪೋಟಿ ನಡೆಸುತ್ತಿದ್ದು, ವಿಶೇಷವಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸಂಪತ್‌ ರಾಜ್‌ ಬೆನ್ನಿಗೆ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಪತ್‌ ರಾಜ್‌ ಎಂಜನೀಯರ ಪದವೀಧರರಾಗಿದ್ದು ಗೋವಿಂದ್‌ ರಾಜ್‌ ಅವರಿಗಿಂತ ಹೆಚ್ಚು ಕ್ರಿಯಾಶೀಲರಾಗಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ, ಈಗಾಗಲೇ ಇಬ್ಬರೂ ತೆಲಗು ಭಾಷಿಕರು ಮಂಜುನಾಥ ರೆಡ್ಡಿ ಹಾಗೂ ಬಲಿಜ ಸಮಾಜದ ಪದ್ಮಾವತಿ ಅಧಿಕಾರ ನಡೆಸಿದ್ದಾರೆ. ಸಂಪತ್‌ ರಾಜ್‌ ಮೇಯರ್‌ ಆಗಿ ಆಯ್ಕೆಯಾದರೆ ತೆಲುಗರಿಂದ ತಮಿಳರ ಕೈಗೆ ಅಧಿಕಾರ ಕೊಟ್ಟಂತಾಗುತ್ತದೆ ಎಂಬ ಮಾತುಗಳು ಕೆಪಿಸಿಸಿ ಪಡಸಾಲೆಯಲ್ಲಿ ಚರ್ಚಿತವಾಗುತ್ತಿವೆ. 

ಕಾಂಗ್ರೆಸ್‌ ಮೂಲಗಳ ಪ್ರಕಾರ  ಕಳೆದ ಹತ್ತು ಹದಿನೈದು ವರ್ಷಗಳ ಬಿಬಿಎಂಪಿ ಇತಿಹಾಸವನ್ನು ಗಮನಿಸಿದರೆ, ತೆಲಗು, ತಮಿಳು ಭಾಷಿಕರೇ ಹೆಚ್ಚಿನ ಅವಧಿಗೆ ಬಿಬಿಎಂಪಿಯಲ್ಲಿ ಮೇಯರ್‌ ಹುದ್ದೆ ಅಲಂಕರಿಸಿದ್ದು, ಕನ್ನಡ ಮಾತೃಭಾಷೆಯವರು ಮೇಯರ್‌ಗಳಾಗಿದ್ದು ತೀರಾ ಕಡಿಮೆ. ಈಗಾಗಲೇ ರಾಜಧಾನಿಯಲ್ಲಿ ಕನ್ನಡಕ್ಕೆ  ಪ್ರಾಧಾನ್ಯತೆ ಸಿಗುತ್ತಿಲ್ಲ ಎಂಬ ಕೂಗು ಜೋರಾಗಿದ್ದು, ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರುದ್ಧ ಸ್ವತ ರಾಜ್ಯ ಸರ್ಕಾರವೇ ಪ್ರತಿರೋಧ ಒಡ್ಡಿತ್ತು.

ಅಲ್ಲದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕು ಎನ್ನುವ ಕುರಿತಂತೆಯೂ ರಾಜ್ಯ ಸರ್ಕಾರ ಪ್ರಯತ್ನ ನಡೆಸಿತ್ತು. ಆದರೆ, ರಾಜಧಾನಿ ಪ್ರಥಮ ಪ್ರಜೆಯ ಸ್ಥಾನವನ್ನು ಮಾತ್ರ ಅನ್ಯಭಾಷಿಕರ ಕೈಗೆ ಕೊಟ್ಟು ಕೈ ಕಟ್ಟಿ ಕುಳಿತುಕೊಳ್ಳುತ್ತಿದೆ ಎಂಬ ಆರೋಪದ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ರಾಜಧಾನಿಯಲ್ಲಿ ಕನ್ನಡ ಭಾಷಿಕರ ಸಂಖ್ಯೆ ಕುಸಿಯುತ್ತಿದೆ ಎಂಬ ಮಾತು ಕೇಳಿ ಬರುತ್ತಿವೆ.

ಆದರೆ, ರಾಜಧಾನಿ ಪ್ರಥಮ ಪ್ರಜೆಗಳು ಮಾತ್ರ ಅನ್ಯ ಭಾಷಿಕರೇ ಆಗುತ್ತಿರುವುದು ಮುಂದುವರೆದಿದೆ. ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಅನ್ಯ ಭಾಷಿಕರನ್ನು ಸೆಳೆಯಲು ತಮಿಳು ಮತ್ತು ಹಿಂದಿ ಭಾಷಿಕರಿಗಾಗಿ ಅವರ ಭಾಷೆಯಲ್ಲಿಯೇ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿತ್ತು. ಅನ್ಯ ಭಾಷಿಕರನ್ನು ಸೆಳೆಯಲು ತಮ್ಮ ಪಕ್ಷಗಳಲ್ಲಿ ಪ್ರತ್ಯೇಕ ಭಾಷಾವಾರು ಘಟಕಗಳನ್ನು ಮಾಡಿಕೊಳ್ಳುತ್ತಿರುವುದು ಮತ ರಾಜಕಾರಣದ ಒಂದು ಭಾಗವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. 

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.