ಯುವ ಪೀಳಿಗೆಗೆ ಸಾಧಕರ ಪರಿಚಯವಿಲ್ಲ


Team Udayavani, Jun 12, 2019, 3:04 AM IST

yuva

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮುಳುಗಿ ಹೋಗಿರುವ ಇಂದಿನ ಯುವ ಪೀಳಿಗೆಗೆ ತಮ್ಮ ಕುಟುಂಬದ ಹಿರಿಯ ಸಾಧಕರ ಸಾಧನೆ ಬಗ್ಗೆ ಅರಿವಿಲ್ಲದಿರುವುದು ಬೇಸರದ ಸಂಗತಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ನಾಡೋಜ ಎಂ.ಎಚ್‌.ಕೃಷ್ಣಯ್ಯ ಅಭಿಪ್ರಾಯಪಟ್ಟರು.

ಎಚ್‌ಎಎಲ್‌ ಕೇಂದ್ರೀಯ ಕನ್ನಡ ಸಂಘ, ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ರಾ.ನಂ.ಚಂದ್ರಶೇಖರ ಅವರ “ವಿಮಾನ ಮಾನ’, ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಂಪ್ಯೂಟರ್‌ ಮತ್ತು ಮೊಬೈಲ್‌ನಲ್ಲಿ ಮುಳುಗಿ ಹೋಗಿರುವ ಹಲವು ಮಕ್ಕಳಿಗೆ ತಮ್ಮ ಪೋಷಕರು ಎಷ್ಟೇ ಸಾಧನೆ ಮಾಡಿದರು.ಅವರ ಸಾಧನೆಯ ಬಗ್ಗೆ ಅರಿವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಎಚ್‌.ಎ.ಎಲ್‌ನಲ್ಲಿ ಕೆಲಸ ಮಾಡಿರುವ ಹಲವು ದಿಗ್ಗಜರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೂಡುಗೆ ನೀಡಿದ್ದಾರೆ.ಆದರೆ ಅವರ ಕುಟುಂಬದವರಿಗೆ ಈಗ ಅವರ ಸಾಧನೆ ಬಗ್ಗೆ ಮಾಹಿತಿಯೇ ಇಲ್ಲ.ಇದು ಸಾಧಕರ ಬಗ್ಗೆ ಮಾಹಿತಿ ಪಡೆಯಲು ಹೋದ ಲೇಖಕ ರಾ.ನಂ.ಚಂದ್ರಶೇಖರ ಅವರಿಗೆ ಅನುಭವವಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯದ ಜೊತೆಗೆ ನೆಲೆ, ಜಲದ ವಿಚಾರದಲ್ಲೂ ಎಚ್‌.ಎ.ಎಲ್‌ ನೌಕರರು ಹೋರಾಟ ಮಾಡಿದ್ದಾರೆ.ಅಂತವರ ಹೆಸರಿನಲ್ಲಿ “ವಿಮಾನ ಮಾನ’, ಪುಸ್ತಕ ಹೊರ ತಂದಿರುವುದು ಖುಷಿ ಪಡುವ ವಿಚಾರವಾಗಿದೆ. ವಿಜ್ಞಾನ-ತಂತ್ರಜ್ಞಾನದ ಸಂವೇದನೆ ಕೃತಿಯಲ್ಲಿ ಅಡಕವಾಗಿದೆ ಎಂದು ತಿಳಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, “ವಿಮಾನ ಮಾನ’, ಶ್ರೇಷ್ಠ ಕೃತಿಯಾಗಿ ಹೊರಹೊಮ್ಮಿದೆ. ಕನ್ನಡ ಸಾಹಿತ್ಯ ಲೋಕದ ಹಲವು ಸಾಧಕರು ಅಲ್ಲಿ ಕೆಲಸ ಮಾಡಿರುವುದು ಈ ಪುಸ್ತಕ ಓದಿನಿಂದ ತಿಳಿಯುತ್ತದೆ. ಇಂತಹ ಪುಸ್ತಕಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿ ಎಂದು ಆಶಿಸಿದರು.

ಇದೇ ವೇಳೆ ಎಚ್‌.ಎ.ಎಲ್‌ ನಲ್ಲಿ ಸೇವೆ ಸಲ್ಲಿಸಿದ ಸಾಹಿತಿ ಈಶ್ವರ ಚಂದ್ರ, ಕೆ.ಎ.ಭಗವಾನ್‌, ಪತ್ರಕರ್ತ ಚಿರಂಜೀವಿ, ವಿಜ್ಞಾನ ಬರಹಗಾರ ಸುಧೀಂದ್ರ ಹಾಲೊಡ್ಡೇರಿ, ಲೇಖಕಿ ನೇಮಿಚಂದ್ರಮ್ಮ, ರಾಮನ್‌ತಳಿ ಸುಧಾಕರನ್‌ ಅವರನ್ನು ಗೌರವಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ, ಲೇಖಕ ರಾ.ನಂ.ಚಂದ್ರಶೇಖರ, ಎಚ್‌.ಎ.ಎಲ್‌.ಸಿಇಒ ಡಿ.ದೀಪಕ್‌ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.