ವೃದ್ಧೆ ಕೊಂದು ನಗನಾಣ್ಯ ದೋಚಿದ್ದ ನೇಪಾಳಿ ಗ್ಯಾಂಗ್‌


Team Udayavani, Aug 20, 2022, 1:31 PM IST

ವೃದ್ಧೆ ಕೊಂದು ನಗನಾಣ್ಯ ದೋಚಿದ್ದ ನೇಪಾಳಿ ಗ್ಯಾಂಗ್‌

ಬೆಂಗಳೂರು: ಒಂಟಿ ವೃದ್ಧೆಯ ಮನೆಗೆ ನುಗ್ಗಿ ಹತ್ಯೆ ಮಾಡಿ ಚಿನ್ನಾಭರಣ, ನಗದು ದೋಚಿದ್ದ ಖತರ್ನಾಕ್‌ ನೇಪಾಳಿ ಗ್ಯಾಂಗ್‌ನ 6 ಮಂದಿ ಎಚ್‌ ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನೇಪಾಳ ಮೂಲದ ಖಡಕ್‌ ಸಿಂಗ್‌, ಮುಖೇಶ್‌ ಕಡ್ಕಾ, ಕಮಲ್ ಕೇಶವ ಭೂಡ, ಗಜೇಂದ್ರ ಹಾಗೂ ಶಿಬು ಕಟಾಯತ್‌ ಬಂಧಿತರು.

ಎಚ್‌ಎಸ್‌ ಆರ್‌ ಲೇಔಟ್‌ನ ನಿವಾಸಿ ಜಯಶ್ರೀ (83) ಕೊಲೆಯಾದ ವೃದ್ಧೆ.

ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಜಯಶ್ರೀ ಒಂಟಿಯಾಗಿ ವಾಸಿಸುತ್ತಿದ್ದರು. ಇವರ ಮನೆಯ ಸಮೀಪದಲ್ಲಿ ಖಡಕ್‌ ಸಿಂಗ್‌ ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡುತ್ತಿದ್ದ. ಜಯಶ್ರೀ ಒಂಟಿಯಾಗಿ ವಾಸಿಸುತ್ತಿರುವುದನ್ನು ಅರಿತಿದ್ದ ಖಡಕ್‌ ಸಿಂಗ್‌ ಸಹಚರರ ಜತೆಗೆ ಸೇರಿ ಇವರ ಮನೆಗೆ ಕನ್ನ ಹಾಕಲು ಸಂಚು ರೂಪಿಸಿದ್ದ. ನಗರದಲ್ಲೇ ಸೆಕ್ಯೂರಿಟಿ ಗಾರ್ಡ್‌ ಆಗಿರುವ ಇಬ್ಬರು ಸ್ನೇಹಿತರು ಹಾಗೂ ನೇಪಾಳದಿಂದ ಕೃತ್ಯ ಎಸಗಲೆಂದೆ ಕರೆಸಿದ್ದ ಮೂವರು ಸಹಚರರ ಬಳಿ ದರೋಡೆ ಮಾಡುವ ಬಗ್ಗೆ ಚರ್ಚಿಸಿದ್ದ. 6 ಮಂದಿ ಜತೆಯಾಗಿ ಆ.13ರಂದು ಜಯಶ್ರೀ ಮನೆಗೆ ಕನ್ನ ಹಾಕಲು ಸಿದ್ಧತೆ ನಡೆಸಿದ್ದರು. ಸೆಕ್ಯೂರಿಟಿಗಾರ್ಡ್‌ ಬೇಕಾಗಿದ್ದಾರಾ ಎಂದು ಕೇಳುವ ನೆಪದಲ್ಲಿ ಆ.13ರಂದು ರಾತ್ರಿ ಜಯಶ್ರೀ ಮನೆಗೆ ಖಡಕ್‌ ಸಿಂಗ್‌ ಹೋಗಿದ್ದ. ಅವರ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ದೃಢಪಡಿಸಿಕೊಂಡು ತನ್ನ ಐವರು ಸಹಚರರಿಗೆ ಈ ಬಗ್ಗೆ ಸಿಗ್ನಲ್‌ ಕೊಟ್ಟಿದ್ದ. ನಂತರ 6 ಮಂದಿ ಸಹಚರರ ಜತೆಗೆ ಜಯಶ್ರೀ ಮನೆಗೆ ನುಗ್ಗಿದ್ದ. ಪ್ರತಿರೋಧ ತೋರಿದ ಜಯಶ್ರೀಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಅವರ ಮೈ-ಮೇಲಿದ್ದ ಚಿನ್ನಾಭರಣ, ಮನೆಯಲ್ಲಿದ್ದ 120 ಗ್ರಾಂ ಚಿನ್ನಾಭರಣ, 2.5 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು. \

ಸಿಕ್ಕಿ ಬಿದ್ದಿದ್ದು ಹೇಗೆ? : ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು. ನೇಪಾಳದ ಗಡಿ, ಲಕ್ನೋ, ಪುಣೆಗೆ ತೆರಳಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು. ಇತ್ತ ಆರೋಪಿಗಳು ಕೃತ್ಯ ಎಸಗಿದ ಬಳಿಕ ಲಕ್ನೋ ಮೂಲಕ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದರೆ ತಮ್ಮ ಸಹಚರರು ಬಾರದ ಹಿನ್ನಲೆ ಕಾನ್ಪುರದಲ್ಲಿ ಉಳಿದಿದ್ದರು. ಪೊಲೀಸ್‌ ಕಾರ್ಯಾಚರಣೆ ವೇಳೆ ಲೈವ್‌ ಲೋಕೇಷನ್‌ ಪರಿಶೀಲಿಸಿದಾಗ ಆರೋಪಿಗಳು ಕಾನ್ಪುರದಲ್ಲಿ ಇರುವ ಸುಳಿವು ಸಿಕ್ಕಿತ್ತು. ಕೂಡಲೇ ಕಾನ್ಪುರಕ್ಕೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ನಗರಕ್ಕೆ ಕರೆ ತಂದಿದೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹೆಚ್ಚುವರಿ ಪೊಲೀಸ್‌ ಆಯುಕ್ತ ಸುಬ್ರಮಣ್ಯೇಶ್ವರ ರಾವ್‌ 30 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ. ಭಾರತದ ಗಡಿ ದಾಟಿದ್ದರೆ ಆರೋಪಿಗಳನ್ನು ಬಂಧಿಸುವುದು ಸುಲಭವಿರಲಿಲ್ಲ. ಅಲ್ಲದೆ, ಅವರು ದರೋಡೆ ಮಾಡಿದ ಚಿನ್ನಾಭರಣ ಜಪ್ತಿ ಮಾಡುವುದು ಕಷ್ಟವಾಗುತ್ತಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.