Arrested: ವರ್ಷದ ಬಳಿಕ ಬ್ರೈನ್ ಮ್ಯಾಪಿಂಗ್ನಲ್ಲಿ ಸಿಕ್ಕಿಬಿದ್ದ ಕಳ್ಳಿ!
Team Udayavani, Jul 17, 2024, 10:41 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಮಾಲೀಕರ ಮನೆ ಯಲ್ಲೇ ಚಿನ್ನಾಭರಣ ದೋಚಿದ್ದ ಕೆಲಸದಾಕೆಯನ್ನು ಒಂದು ವರ್ಷದ ಬಳಿಕ ಕೆಂಗೇರಿ ಠಾಣೆ ಪೊಲೀಸರು, ಆರೋಪಿತೆಗೆ ಬ್ರೈನ್ ಮ್ಯಾಪಿಂಗ್ ಮಾಡಿಸುವ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಡಿಪಾಳ್ಯ ನಿವಾಸಿ ಶಾರದಮ್ಮ(67) ಬಂಧಿತೆ. ಆಕೆಯಿಂದ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಕೋಡಿಪಾಳ್ಯ ವಿನಾಯಕ ಲೇಔಟ್ನ ರಿಯಲ್ ಎಸ್ಟೇಟ್ ಏಜೆಂಟ್ ಶಶಿಕಾಂತ್ ಎಂಬುವರ ಮನೆಯಲ್ಲಿ 2023ರ ಜುಲೈನಲ್ಲಿ ಶಾರದಮ್ಮ ಚಿನ್ನಾಭರಣ ಕಳವು ಮಾಡಿದ್ದರು ಎಂದು ಪೊಲೀಸರು ಹೇಳಿದರು.
ವಿನಾಯಕ ಲೇಔಟ್ನಲ್ಲಿ ನೆಲೆಸಿದ್ದ ಶಶಿಕಾಂತ್ರ ಪತ್ನಿ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುಶೂಷಕಿಯಾಗಿದ್ದು ಅವರ ಮನೆಯಲ್ಲಿ ಶಾರದಮ್ಮ 2023ರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ದಂಪತಿ ಕೆಲಸಕ್ಕೆ ಹೋದಾಗ, ಅವರು ಕೀ ಇಡುತ್ತಿದ್ದ ಸ್ಥಳವನ್ನು ಗಮನಿಸಿ, 583 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಳು. ಈ ಬಗ್ಗೆ ಮಾಲೀಕರು ಪ್ರಶ್ನಿಸಿದಾಗ, ಆಕೆ ಹಾರಿಕೆ ಉತ್ತರ ನೀಡಿದ್ದಳು. ಅಲ್ಲದೆ, ಕೆಲಸದಿಂದ ತೆಗೆದು ಹಾಕಿದ್ದರು. ಕೊನೆಗೆ ಕೆಂಗೇರಿ ಪೊಲೀಸ್ ಠಾಣೆಗೆ ಶಶಿಕಾಂತ್ ದೂರು ನೀಡಿದರು.
ಈ ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು, ಶಾರದಮ್ಮ ವಿಚಾರಣೆ ನಡೆಸಿದಾಗಲೂ ಆಕೆ ಬಾಯಿ ಬಿಟ್ಟಿರಲಿಲ್ಲ. ಆದರೆ ಘಟನಾ ಸ್ಥಳದ ಸಿಸಿ ಕ್ಯಾಮೆರಾ ಹಾಗೂ ಸ್ಥಳೀಯರ ಮಾಹಿತಿ ಪ್ರಕಾರ ಶಾರದಮ್ಮಳೇ ಕಳ್ಳತನ ಮಾಡಿದ್ದಾಳೆ ಎಂಬುದು ಪತ್ತೆಯಾಗಿತ್ತು. ಆದರೆ ಆಕೆ ಮಾತ್ರ ತಾನೂ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಳು. ಹೀಗಾಗಿ ಆಕೆಗೆ ಬ್ರೈನ್ ಮ್ಯಾಪಿಂಗ್ ಮಾಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, 2024 ಫೆಬ್ರವರಿಯಲ್ಲಿ ನ್ಯಾಯಾಲಯದಿಂದ ಅನುಮತಿ ಪಡೆದುಕೊಳ್ಳಲಾಯಿತು. ಬಳಿಕ ಆಕೆಗೆ ತಾನೂ ತಪ್ಪು ಮಾಡಿಲ್ಲವೆಂದಾದರೆ ತಾವೂ ನೀಡುವ ಪರೀಕ್ಷೆಗೆ ಒಳಪಡಬೇಕು ಎಂದಾಗ, ಆಕೆ ಕೂಡ ಒಪ್ಪಿಗೆ ನೀಡಿದ್ದು, ಫೆಬ್ರವರಿಯಲ್ಲಿ ಮಡಿವಾಳದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಿದಾಗ ಶಾರದಮ್ಮ ಸತ್ಯ ಬಾಯ್ಬಿಟ್ಟಿದ್ದಾಳೆ. ಈ ಆಧಾರದ ಮೇಲೆ ಆಕೆಯನ್ನು ಬಂಧಿಸಲಾಗಿದೆ. ಬಳಿಕ ಆಕೆಯ ಮನೆ ಹಾಗೂ ಇತರೆಡೆ ಇಟ್ಟಿದ್ದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.