ಭದ್ರತೆಗೆ 7.5 ಸಾವಿರ ಸಿಸಿ ಕ್ಯಾಮೆರಾ ಖರೀದಿಗೆ ಚಿಂತನೆ


Team Udayavani, Nov 13, 2019, 3:06 AM IST

bhadratege

ಬೆಂಗಳೂರು: ನಗರದ ಸುರಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಏಳೂವರೆ ಸಾವಿರ ಸಿಸಿ ಕ್ಯಾಮೆರಾ ಖರೀದಿಗೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಮಂಗಳವಾರ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿಂದ ಆಯೋಜಿಸಿದ್ದ ವಿಡಿಯೋ ಸಂಕಲನಕಾರರ ಸಮಾವೇಶದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಗರದಲ್ಲಿ ಸುರಕ್ಷತೆ ಕಾಪಾಡಲು ಹಣಕಾಸಿನ ನೆರವನ್ನೂ ನೀಡಿದೆ. ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ, ವಿನೂತನ ಯೋಜನೆಗಳ ಮೂಲಕ ಸಂಚಾರ, ಅಪರಾಧ ಸೇರಿ ಎಲ್ಲಾ ರೀತಿಯಲ್ಲಿಯೂ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಸದ್ಯ ಸ್ಮಾರ್ಟ್‌ಸಿಟಿ ಯೋಜನೆ ಅನುದಾನದಲ್ಲಿ ನಗರದ ಕಣ್ಗಾವಲಿಗೆ ಹೊಸದಾಗಿ ಕ್ಯಾಮರ ಖರೀದಿಸುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.

ತರಬೇತಿ ಕಾರ್ಯಾಗಾರ ನಡೆಸಿ: ಪೊಲೀಸರಿಗೆ ಪ್ರತಿಯೊಂದಕ್ಕೂ ದಾಖಲೆಗಳು ಮುಖ್ಯ. ಆ ಪೈಕಿ ಗುಣಮಟ್ಟದ ಛಾಯಾಚಿತ್ರ ಅತಿಮುಖ್ಯವಾಗಿದೆ. ನಗರದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಒಬ್ಬ ಛಾಯಾಗ್ರಾಹಕನ ಅಗತ್ಯವಿದೆ. ಪೊಲೀಸ್‌ ಇಲಾಖೆಯಲ್ಲಿನ ಕ್ಯಾಮೆರಾ ಬಳಕೆ ಸಂಬಂಧ ಪೊಲೀಸರಿಗೆ ತರಬೇತಿ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಘದಿಂದ ಆಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಫೋಟೋಗ್ರಫಿ ಸಂಬಂಧ 2 ದಿನ ತರಬೇತಿ ಕಾರ್ಯಾಗಾರ ನಡೆಸಬೇಕೆಂದರು.

ಕೌಶಲ್ಯ ಹೊಂದಿರುವವರು ಕಡಿಮೆ: ಛಾಯಾಚಿತ್ರಗಾರರು ಸೆರೆ ಹಿಡಿದ ಚಿತ್ರಗಳು ಎಂದಿಗೂ ಶಾಶ್ವತ. ಅವರು ಸೂರ್ಯನಂತೆಯೇ ನಿತ್ಯವೂ ಪ್ರಜ್ವಲಿಸುತ್ತಿರುತ್ತಾರೆ. ಛಾಯಾಗ್ರಹಣದಲ್ಲಿ ಸಾಕಷ್ಟು ಸಾಫ್ಟ್ವೇರ್‌, ತಂತ್ರಜ್ಞಾನ ಅಭಿವೃದ್ಧಿಯಾದರೂ ಕೌಶಲ್ಯ ಹೊಂದಿದ ಛಾಯಾಗ್ರಾಹಕ ಸೆರೆಹಿಡಿದ ನೈಜ ದೃಶ್ಯ, ಚಿತ್ರಕ್ಕೆ ಸಮನಲ್ಲ ಎಂದರು. ಸಂಘದ ಅಧ್ಯಕ್ಷ ಎಸ್‌.ಪರಮೇಶ್ವರ್‌, ಛಾಯಾಗ್ರಾಹಕರು ಹಲವಾರು ಸಂದರ್ಭದಲ್ಲಿ ಪೊಲೀಸರಿಂದ ವಿವಿಧ ರೀತಿಯ ಕಿರುಕುಳಕ್ಕೆ ಒಳಗಾಗುತ್ತಿರುವ ವರದಿಗಳು ಕಂಡು ಬಂದಿವೆ.

ಈ ಸಂಬಂಧ ಕ್ರಮ ಕೈಗೊಳ್ಳಬೇಕು. ಕಿರುಕುಳ ತಪ್ಪಿಸಬೇಕು ಹಾಗೂ ಅಧಿಕವಾಗುತ್ತಿರುವ ಕ್ಯಾಮೆರಾಗಳ ಕಳ್ಳತನ ತಡೆಯಬೇಕು ಎಂದು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದರು. ವಾರ್ತಾ ಮತ್ತು ಸಂಕರ್ಪ ಇಲಾಖೆ ಆಯುಕ್ತ ಎಸ್‌.ಎನ್‌.ಸಿದ್ದರಾಮಪ್ಪ, ಸಂಘದ ಉಪಾಧ್ಯಕ್ಷರಾದ ಮಹದೇವ, ರವಿಕುಮಾರ್‌, ಜಂಟಿ ಕಾರ್ಯದರ್ಶಿ ಎಚ್‌.ಕೆ.ವಸಂತ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.