ಸಾವಿರಾರು ಇರುವೆ ಕಚ್ಚಿದರಷ್ಟೇ ಸರ್ಕಾರವೆಂಬ ಆನೆಗೆ ನಾಟುವುದು


Team Udayavani, Nov 28, 2017, 12:19 PM IST

saviraru-ant.jpg

ಬೆಂಗಳೂರು: “ಅಕ್ರಮ ಗಣಿಗಾರಿಕೆ ಸೇರಿದಂತೆ ಕಳೆದ ಐದಾರು ವರ್ಷಗಳಲ್ಲಿ ಒಂದಿಲ್ಲೊಂದು ಅಕ್ರಮ ಸಂಗತಿಗಳು ಬೆಳಕಿಗೆಬರುತ್ತಲೇ ಇವೆ. ಆದರೆ, ಅವೆಲ್ಲವೂ ಸರ್ಕಾರ ಎಂಬ ಆನೆಗೆ ಇರುವೆ ಕಚ್ಚಿದಂತಾಗಿದೆ ಅಷ್ಟೇ ಎಂದು ನಿತ್ಯೋತ್ಸವ ಕವಿ ಪ್ರೊ.ನಿಸಾರ್‌ ಅಹಮ್ಮದ್‌ ಹೇಳಿದರು.

ನಗರದ ಚಿತ್ರಕಲಾ ಪರಿಷತ್‌ನಲ್ಲಿ ಸೋಮವಾರ ಛಾಯಾಗ್ರಾಹಕ ಸುಧೀರ್‌ ಶೆಟ್ಟಿ ಅವರು ಹಮ್ಮಿಕೊಂಡಿದ್ದ “ಕುಮಾರಸ್ವಾಮಿ ದೇವಸ್ಥಾನದ 2 ಕಿ.ಮೀ ವ್ಯಾಪ್ತಿಯಲ್ಲಿ ಇದ್ದ ಗಣಿಗಾರಿಕೆ ನಿಷೇಧವನ್ನು 300 ಮೀ.ಗೆ ಇಳಿಸಿದ ಸರ್ಕಾರದ ಅಧಿಸೂಚನೆ ಮತ್ತು ಇದರಿಂದ ಆಗಬಹುದಾದ ಪರಿಣಾಮಗಳು’ ಕುರಿತ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ನಂತರ ಅವರು ಮಾತನಾಡಿದರು.

“ಸಂಡೂರಿನ ಕುಮಾರಸ್ವಾಮಿ ಬೆಟ್ಟದ ಸುತ್ತಲಿನ ಗಣಿಗಾರಿಕೆ ಕುರಿತ ಚಿತ್ರಗಳು ಮನಸ್ಸಿಗೆ ನಾಟುತ್ತವೆ. ಇಂತಹ ವಿಚಾರಗಳ ಬಗ್ಗೆ ಸರ್ಕಾರಕ್ಕೆ ಎಷ್ಟೇ ಹೇಳಿದರೂ ಆನೆಗೆ ಒಂದು ಇರುವೆ ಕಚ್ಚಿದಂತಷ್ಟೇ. ಆದ್ದರಿಂದ ಸಾರ್ವಜನಿಕರು ಈ ನಿಟ್ಟಿನಲ್ಲಿ ಜಾಗೃತರಾಗಬೇಕು. ಸಹಸ್ರಾರು ಇರುವೆಗಳು ಸೇರಿ ಸರ್ಕಾರವೆಂಬ ಆನೆಗೆ ಕಚ್ಚಿದಾಗ ಸ್ವಲ್ಪಮಟ್ಟಿಗಾದರೂ ನೋವು ತಟ್ಟುತ್ತದೆ. ಆ ಮೂಲಕವಾದರೂ ಆಡಳಿತ ಎಚ್ಚೆತ್ತುಕೊಳ್ಳುವ ಸಾಧ್ಯತೆ ಇದೆ,’ ಎಂದು ಸೂಚ್ಯವಾಗಿ ಹೇಳಿದರು.

ಸುಧೀರ್‌ ಶೆಟ್ಟಿ ಅವರು ತೆಗೆದ ಚಿತ್ರಗಳು ಭೂಮಿತಾಯಿಯ ಮೇಲೆ ಮನುಷ್ಯ ನಡೆಸುತ್ತಿರುವ ಅತ್ಯಾಚಾರಕ್ಕೆ ಕನ್ನಡಿ ಹಿಡಿಯುತ್ತವೆ. “ಮನುಷ್ಯರಾಗಿದ್ದರೆ, ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದು ಸ್ವತಃ ಚಿತ್ರಗಳು ಸಾರುತ್ತಿವೆ. ಜನ ಮತ್ತು ಆಡಳಿತದಲ್ಲಿ ಪರಿಸರದ ಬಗ್ಗೆ ಜಾಗೃತರಾಗದಿದ್ದರೆ ಕರ್ನಾಟಕ ಕೂಡ ಮತ್ತೂಂದು ರಾಜಸ್ತಾನ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. 

“ಕುಮಾರಸ್ವಾಮಿ ಬೆಟ್ಟದ ಸುತ್ತಲಿನ ಜನರನ್ನು ಸರ್ಕಾರ “ಮತದಾರರು’ ಎಂದು ಪರಿಗಣಿಸುತ್ತದೆ. ಜನಗಣತಿ ವೇಳೆ ಅಲ್ಲಿನ ಜನರನ್ನೂ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ. ಆದರೆ, ಆ ಜನರನ್ನು ಬದುಕಲು ಬಿಡುತ್ತಿಲ್ಲ. ಇದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಜನರಿಗೆ ಮಾಡಿದ ದ್ರೋಹ: ಸಮಾಜ ಪರಿವರ್ತನಾ ವೇದಿಕೆ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಮಾತನಾಡಿ, 2013-14ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಲ್ಲದೆ, ಪಾದಯಾತ್ರೆ ಕೂಡ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ 2 ಕಿ.ಮೀ. ಇದ್ದ ನಿರ್ಬಂಧವನ್ನು 300 ಮೀ.ಗೆ ಇಳಿಸಿರುವುದು ಪುರಾತನ ದೇವಸ್ಥಾನಕ್ಕೆ ಗಂಡಾಂತರ ಮಾತ್ರವಲ; ಜನರಿಗೆ ಮಾಡಿದ ದ್ರೋಹ ಕೂಡ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1978ರಲ್ಲಿ ದೇವರಾಜ ಅರಸು ಅವರು ಕುಮಾರಸ್ವಾಮಿ ದೇವಸ್ಥಾನ ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದ್ದರು. ಆದರೆ, ಮತ್ತೂಬ್ಬ ದೇವರಾಜ ಅರಸು ಎಂದು ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಆ ಅಧಿಸೂಚನೆ ವಾಪಸ್‌ ಪಡೆದು, 300 ಮೀ.ಗೆ ಇಳಿಸಿದ್ದಾರೆ. ಇದರಿಂದ ಪುರಾತನ ದೇವಾಲಯಗಳಿಗೆ ಗಂಡಾಂತರ ಬಂದೊದಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಛಾಯಾಗ್ರಹಕ ಸುಧೀರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.