Bengaluru: ನಮ್ಮಲ್ಲೇ ಔಷಧ ಖರೀದಿಸಿ ಎಂದು ಡಿಸಿಪಿಗೆ ಧಮ್ಕಿ; ಸಿಬ್ಬಂದಿ ವಿರುದ್ಧ ಕೇಸ್‌


Team Udayavani, Sep 12, 2024, 10:36 AM IST

3

ಬೆಂಗಳೂರು: ತಮ್ಮ ವೈದ್ಯರು ಬರೆದಿರುವ ಔಷಧಿಯನ್ನು ತಮ್ಮ ಮೆಡಿಕಲ್‌ ಸ್ಟೋರ್‌ನಲ್ಲೇ ಖರೀದಿಸಬೇಕು ಎಂದು ಡಿಸಿಪಿಗೆ ಬೆದರಿಕೆ ಹಾಕಿದ ಖಾಸಗಿ ಆಸ್ಪತ್ರೆಯ ಮೆಡಿಕಲ್‌ ಸ್ಟೋರ್‌ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಪಿ ಪರವಾಗಿ ವಿವಿಐಪಿ ಭದ್ರತೆ ವಿಭಾಗದ ಆರ್‌ಎಸ್‌ಐ ಭೈರಯ್ಯ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ಸೆ. 6 ರಂದು ಆಸ್ಪತ್ರೆ ಒಳರೋಗಿಯಾಗಿ ವಿವಿಐಪಿ ಭದ್ರತೆ ಡಿಸಿಪಿ ಮಂಜುನಾಥ್‌ ದಾಖಲಾಗಿದ್ದರು. ಈ ವೇಳೆ ಅಲ್ಲಿನ ವೈದ್ಯರು ಸಲಹಾ ಚೀಟಿ (ಪ್ರಿಸ್ಕ್ರಿಪ್ಷನ್‌)ಯಲ್ಲಿ 3 ರೀತಿಯ ಮಾತ್ರೆಗಳನ್ನು ಬಿಡಿ ಬಿಡಿಯಾಗಿ ತೆಗೆದುಕೊಳ್ಳುವಂತೆ ಬರೆದಿದ್ದರು. ಅದನ್ನು ಆಸ್ಪತ್ರೆ ಮೆಡಿಕಲ್ ಸ್ಟೋರ್‌ನಲ್ಲಿ ಡಿಸಿಪಿ ಅವರು ಕೇಳಿದ್ದು, ಈ ವೇಳೆ ಪೂರ್ತಿ ಮಾತ್ರೆಯ ಶೀಟ್‌ ಕೊಳ್ಳಲು ಅಲ್ಲಿನ ಸಿಬ್ಬಂದಿ ನಾಗರಾಜ್‌ ತಿಳಿಸಿದ್ದ. ಆಗ ಪೂರ್ತಿ ಶೀಟ್‌ ಕೊಳ್ಳಲು ಡಿಸಿಪಿ ನಿರಾಕರಿಸಿದಾಗ ನಮ್ಮ ವೈದ್ಯರು ಬರೆದಿರುವ ಮಾತ್ರೆ ಬೇರೆಡೆ ಸಿಗುವುದಿಲ್ಲ. ನೀವು ಇಲ್ಲೇ ಬಂದು ಖರೀದಿಸಬೇಕಾಗುತ್ತದೆ ಎಂದು ಹೆದರಿಸಿ, ನಾನು ಕೊಟ್ಟಷ್ಟು ಮಾತ್ರೆಗಳನ್ನು ತೆಗೆದುಕೊಂಡು ಹೋಗಬೇಕೆಂದಿದ್ದಾನೆ. ಅಲ್ಲದೇ ಇದು ನಮ್ಮ ಆಸ್ಪತ್ರೆಯ ರೂಲ್ಸ್‌ ಎಂದು ಧಮ್ಕಿ ಹಾಕಿದ್ದ.

ವೈದ್ಯರು ಸೂಚಿಸಿದ ಸಂಖ್ಯೆಯ ಮಾತ್ರೆಗಳನ್ನು ನೀಡದೇ ಪೂರ್ತಿ ಶೀಟ್‌ ಮಾತ್ರೆಗಳನ್ನು ತೆಗೆದುಕೊಂಡು ಹೋಗ ಬೇಕೆಂದು ಲಾಭ ಗಳಿಸುವ ಉದ್ದೇಶ ದಿಂದ ರೋಗಿಗಳಿಗೆ ಮೋಸ ಮಾಡಿರುವ ಮೆಡಿಕಲ್‌ ಸಿಬ್ಬಂದಿ ನಾಗರಾಜ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದ್ದು, ದೂರಿನನ್ವಯ ಮೆಡಿಕಲ್‌ ಸಿಬ್ಬಂದಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಈತ ಈ ಹಿಂದೆಯೂ ಹಲವು ಪೊಲೀಸ್‌ ಸಿಬ್ಬಂದಿಗೆ ಪೂರ್ತಿ ಶೀಟ್‌ನ ಮಾತ್ರೆಗಳನ್ನು ತೆಗೆದುಕೊಂಡು ಹೋಗಬೇಕೆಂದು ಸೂಚಿಸಿ ಮೋಸ ಮಾಡಿದ್ದಾನೆ ಎಂದು ಹೇಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.