ಕೋಟಿ ರೂ.ಸುಪಾರಿ ನೀಡಿ ತಂದೆಯನ್ನೇ ಕೊಂದ!


Team Udayavani, Feb 28, 2023, 12:40 PM IST

tdy-9

ಬೆಂಗಳೂರು: ಆಸ್ತಿಗಾಗಿ ತಂದೆಯನ್ನೇ ಹತ್ಯೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿ ಮೂವರು ಮಾರತ್ತಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಾವೇರಪ್ಪ ಬಡಾವಣೆಯ ಇಂದ್ರಪ್ರಸ್ತ ಅಪಾರ್ಟ್‌ಮೆಂಟ್‌ ನಿವಾಸಿ ಮಣಿಕಂಠ (30), ಆತನ ಸಹಚರರಾದ ಹೊಸಕೋಟೆಯ ಆದರ್ಶ ಅಲಿಯಾಸ್‌ ಬೆಂಕಿ (26), ಶಿವಕುಮಾರ್‌ ಅಲಿಯಾಸ್‌ ನಡುವತ್ತಿ ಶಿವ(24) ಬಂಧಿತರು. ಆರೋಪಿಗಳು ಫೆ.13ರಂದು ಅಪಾರ್ಟ್‌ಮೆಂಟ್‌ ಮುಂದೆಯೇ ನಾರಾಯಣ ಸ್ವಾಮಿ (70) ಎಂಬುವರನ್ನು ಹತ್ಯೆಗೈದಿದ್ದರು.

ಪ್ರಕರಣ ಬಳಿಕ ನಾರಾಯಣಸ್ವಾಮಿ ಪುತ್ರ ಮಣಿಕಂಠನ ವರ್ತನೆ ಆಧರಿಸಿ ವಿಚಾರಣೆ ನಡೆಸಿದಾಗ 1 ಕೋಟಿ ರೂ. ಸುಪಾರಿ ರಹಸ್ಯ ಬಾಯಿಬಿಟ್ಟಿದ್ದಾನೆ. ಬಳಿಕ ಇತರೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದ ನಾರಾಯಣ ಸ್ವಾಮಿ ಇಂದ್ರಪ್ರಸ್ತ ಅಪಾರ್ಟ್‌ಮೆಂಟ್‌ನಲ್ಲಿ 2 ಫ್ಲ್ಯಾಟ್‌ ಹೊಂದಿದ್ದು, ಈ ಪೈಕಿ ಒಂದು ಫ್ಲ್ಯಾಟ್‌ನಲ್ಲಿ ನಾರಾಯಣಸ್ವಾಮಿ ದಂಪತಿ, ಮತ್ತೂಂದು ಫ್ಲ್ಯಾಟ್‌ನಲ್ಲಿ ಆರೋಪಿ ಮಣಿಕಂಠ ವಾಸವಾಗಿದ್ದ. ದುಶ್ಚಟಗಳ ದಾಸನಾಗಿರುವ ಮಣಿಕಂಠ 2013ರಲ್ಲಿ ಮೊದಲ ಪತ್ನಿಯನ್ನು ಹತ್ಯೆಗೈದು ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಯಾದ ಬಳಿಕ ಅರ್ಚನಾ ಎಂಬಾಕೆ ಜತೆ 2ನೇ ಮದುವೆ ಆಗಿದ್ದ. ದಂಪತಿಗೆ ಒಂದು ಹೆಣ್ಣು ಮಗು ಇದೆ. ಆದರೂ ಆರೋಪಿ ಪರಸ್ತ್ರೀ ಜತೆ ಅಕ್ರಮ ಸಂಬಂಧ ಹೊಂದಿದ್ದ. ಅದರಿಂದ ಬೇಸತ್ತ ಆಕೆ ಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಜತೆಗೆ ವಿಚ್ಚೇಧನಕ್ಕೂ ಅರ್ಜಿ ಸಲ್ಲಿಸಿದ್ದರು. ಅದನ್ನು ತಡೆದಿದ್ದ ನಾರಾಯಣಸ್ವಾಮಿ, ಮತ್ತೂಮ್ಮೆ ಈ ರೀತಿ ನಡೆಯದಂತೆ ರಕ್ಷಣೆ ನೀಡುವುದಾಗಿ ಹೇಳಿ ನಗರದ ಕೆಲವೆಡೆ ತನ್ನ ಹೆಸರಿನಲ್ಲಿ 28 ಫ್ಲ್ಯಾಟ್‌ಗಳು ಮತ್ತು ಇತರೆ ಆಸ್ತಿಯನ್ನು ಸೊಸೆ ಅರ್ಚನಾ ಮತ್ತು ಮೊಮ್ಮಗಳ ಹೆಸರಿಗೆ ಬರೆಯುವುದಾಗಿ ಹೇಳಿದ್ದರು. ಇದರಿಂದ ಕೋಪಗೊಂಡ ಆರೋಪಿ ತಂದೆ ಜತೆ ಜಗಳ ಮಾಡಿದ್ದ. ಈ ಹಿನ್ನೆಲೆಯಲ್ಲಿ ಕೊಲೆ ಸಂಚು ರೂಪಿಸಿದ್ದನು ಎಂದು ಪೊಲೀಸರು ಹೇಳಿದರು.

1 ಕೋಟಿ ರೂ. ಸುಪಾರಿ: ಮೊದಲ ಪತ್ನಿ ಹತ್ಯೆ ಪ್ರಕರಣದಲ್ಲಿ ಮಣಿಕಂಠ ಜೈಲು ಸೇರಿದ್ದ ಸಂದರ್ಭದಲ್ಲಿ ಆದರ್ಶ ಮತ್ತು ಶಿವಕುಮಾರ್‌ ಪರಿಚಯವಾಗಿದ್ದರು. ಬಿಡುಗಡೆ ನಂತರವೂ ಸಂಪರ್ಕದಲ್ಲಿದ್ದರು. ತಂದೆ, ಎಲ್ಲಾ ಆಸ್ತಿಯನ್ನು ಪತ್ನಿ, ಮಗಳ ಹೆಸರಿಗೆ ಬರೆಯುತ್ತಾರೆ ಎಂದು ಆಕ್ರೋಶಗೊಂಡಿದ್ದ ಮಣಿ ಕಂಠ ಸ್ನೇಹಿತರ ಜತೆ ಸೇರಿ ತಂದೆ ಹತ್ಯೆಗೆ ಸಂಚು ರೂಪಿಸಿದ್ದ. ಆದರಂತೆ ಫೆ.13ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೆ.ಆರ್‌.ಪುರಂ ಸಬ್‌ರಿಜಿಸ್ಟ್ರಾರ್‌ ಕಚೇರಿಗೆ ಹೋಗುವ ಮಾಹಿತಿಯನ್ನು ಮಣಿಕಂಠನೇ ತನ್ನ ಸಹಚರರಿಗೆ ನೀಡಿದ್ದ. ಅದರಂತೆ ಬೈಕ್‌ನಲ್ಲಿ ಬಂದ ಆರೋಪಿಗಳು ನಾರಾಯಣಸ್ವಾಮಿ ಯನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ಬಳಿಕ ಮಣಿಕಂಠ ಕೂಡ ತನಗೆ ಏನು ಗೊತ್ತಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದ ಎಂದು ಪೊಲೀಸರು ಹೇಳಿದರು.

ಸಿಕ್ಕಿಬಿದ್ದಿದ್ದು ಹೇಗೆ? : ಕೊಲೆ ಪ್ರಕರಣದ ತನಿಖೆ ವೇಳೆ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದರೂ ನಾರಾಯಣಸ್ವಾಮಿಗೆ ಯಾರು ಶತ್ರುಗಳು ಇರಲಿಲ್ಲ. ಬೇರೆ ವಾಜ್ಯ ಕೂಡ ಇರಲಿಲ್ಲ. ಈ ಮಧ್ಯೆ ಮಣಿಕಂಠ ಕೆಲವರ ಬಳಿ ಇನ್ಮುಂದೆ ಇಡೀ ಆಸ್ತಿ ತನಗೆ ಸೇರಿದ್ದು ಎಂದು ಹೇಳಿಕೊಂಡು ಓಡಾಡುತ್ತಿದ್ದ. ಜತೆಗೆ ಆತನ ಈ ಹಿಂದಿನ ಅಪರಾಧ ಪ್ರಕರಣಗಳನ್ನು ಪರಿಗಣಿಸಿದಾಗ ಕೆಲವೊಂದು ಅನುಮಾನ ಮೂಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಸುಪಾರಿ ರಹಸ್ಯ ಬಾಯಿಬಿಟ್ಟಿದ್ದಾನೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.