Arrested: ನಗರದಲ್ಲಿ ಮೂವರು ಆನೆ ದಂತಚೋರರ ಬಂಧನ
Team Udayavani, Aug 18, 2024, 11:17 AM IST
ಬೆಂಗಳೂರು: ಬೆಂಗಳೂರಿನ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರು ಆನೆದಂತ ಚೋರರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 8.5 ಮತ್ತು 9 ಕೆ.ಜಿ ತೂಕದ ಬೆಲೆ ಬಾಳುವ 2 ದಂತಗಳನ್ನು ಜಪ್ತಿ ಮಾಡಲಾಗಿದೆ.
ಮೋಹನ್, ಆನಂದ್ ಹಾಗೂ ವಿನೋದ್ ಬಂಧಿತರು. ಆರೋಪಿಗಳು ಶನಿವಾರ ಆನೆಯ ದಂತಗಳನ್ನು ಮಾರಾಟಕ್ಕಾಗಿ ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ತರುತ್ತಿರುವ ಬಗ್ಗೆ ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿತ್ತು. ಬೆಂಗಳೂರು ಹಾಗೂ ಯಲಹಂಕ ವಲಯ ಅರಣ್ಯಾಧಿಕಾರಿಗಳನ್ನು ಒಳಗೊಂಡ 2 ಪ್ರತ್ಯೇಕ ತಂಡ ರಚಿಸಿಕೊಂಡು ರಾಜನುಕುಂಟೆ ಏರ್ಪೋರ್ಟ್ ರಸ್ತೆಯ ಸಾದರಹಳ್ಳಿ ಬಳಿ ಆರೋಪಿಗಳಿಗಾಗಿ ಕಾಯುತ್ತಿದ್ದರು. ಆರೋಪಿಗಳ ಕಾರಿನ ನಂಬರ್ ಮೊದಲೇ ಅರಿತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಅವರ ವಾಹನ ಬರುತ್ತಿದ್ದಂತೆ ಅಡ್ಡಗಟ್ಟಿ ಪರಿಶೀಲಿಸಿದ್ದಾರೆ. ಈ ವೇಳೆ ವಾಹನದಲ್ಲಿ 2 ಆನೆ ದಂತಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.