ಚಾಲಕನ ಕೊಂದ ಮೂವರ ಬಂಧನ


Team Udayavani, Nov 30, 2018, 11:42 AM IST

arrest2.jpg

ಬೆಂಗಳೂರು: ತಲಘಟ್ಟಪುರ 80 ಅಡಿ ರಸ್ತೆಯಲ್ಲಿ ನಡೆದಿದ್ದ ಲಾರಿಚಾಲಕನ ಕೊಲೆಪ್ರಕರಣವನ್ನು ಭೇದಿಸುವಲ್ಲಿ ಸಫ‌ಲರಾಗಿರುವ ಪೊಲೀಸರು, ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.ತೌಹೀದ್‌ ಅಲಿಯಾಸ್‌ ವರ್ದಾ, ಮುದಾಸೀರ್‌, ಸಲ್ಮಾನ್‌ ಬಂಧಿತರು.

ನ.3ರಂದು ಲಾರಿಚಾಲಕ ಭಾಸ್ಕರ್‌ ಕೊಲೆ ಪ್ರಕರಣದ ಜಾಡು ಹಿಡಿದ ತಲಘಟ್ಟಪುರ ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದ ತಂಡ”ಲಾರಿ ಚಾಲಕರ’ ಸೋಗಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ವಿಶೇಷ.ಮೂವರು ಆರೋಪಿಗಳ ಬಂಧನದಿಂದ ಕುಮಾರಸ್ವಾಮಿ ಲೇಔಟ್‌ ಠಾಣಾ ವ್ಯಾಪ್ತಿಯ ಎರಡು ದರೋಡೆ ಪ್ರಕರಣಗಳೂ ಬೆಳಕಿಗೆ ಬಂದಿವೆ. 

ಖಾಸಗಿ ಕಂಪೆನಿಗೆ ಕಬ್ಬಿಣದ ಸಾಮಾಗ್ರಿಗಳನ್ನು ಪೂರೈಸುವ ಲಾರಿ ಚಾಲಕನಾಗಿದ್ದ ಆನೇಕಲ್‌ ಮೂಲದ ಭಾಸ್ಕರ್‌ ನ.3ರಂದು ರಾತ್ರಿ 80 ಅಡಿ ರಸ್ತೆಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು. ಈ ವೇಳೆ ದರೋಡೆಗೆ ಬಂದ ಮೂವರು ಆರೋಪಿಗಳು ಆತನ ಬಳಿ ಹಣ ಕೇಳಿದ್ದಾರೆ. ಇದಕ್ಕೊಪ್ಪದಿದ್ದಾಗ ಆತನ ತಲೆಗೆ ಹಲ್ಲೆ ನಡೆಸಿ ಕೊಲೈಗೈದು 2.500 ರೂ. ಹಣ ದೋಚಿ ಪರಾರಿಯಾಗಿದ್ದರು.

ಮೂರು ದಿನಗಳ ಬಳಿಕ ಸ್ಥಳೀಯರೊಬ್ಬರು ಲಾರಿಯಲ್ಲಿ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ಪೊಲೀಸರು ತೆರಳಿ ನೋಡಿದಾಗ ಭಾಸ್ಕರ್‌ ಶವ ಬಹುತೇಕ ಕೊಳೆತ ಸ್ಥಿತಿಯಲ್ಲಿತ್ತು. ಈ ಪ್ರಕರಣವನ್ನು ಹಲವು ಆಯಾಮಗಳಲ್ಲಿ ನಡೆಸಿದರೂ ಸಣ್ಣಸುಳಿವು ಲಭ್ಯವಾಗಲಿಲ್ಲ. ಭಾಸ್ಕರ್‌ ಕೊಲೆ ನಡೆದ ಕೆಲ ದಿನಗಳ ಬಳಿಕ ಅದೇ ಜಾಗದಲ್ಲಿ ಇಬ್ಬರು ಲಾರಿಚಾಲಕರಿಂದ ಹಣ ಸುಲಿಗೆ ಮಾಡಿದ ಪ್ರಕರಣಗಳು ವರದಿಯಾಗಿದ್ದವು. 

ಈ ಸುಳಿವಿನ ಮೇರೆಗೆ ವಿಶೇಷ ತಂಡ ಲಾರಿಚಾಲಕರಾಗಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಶುರುಮಾಡಿತ್ತು. ರಸ್ತೆಬದಿ ಲಾರಿ ನಿಲ್ಲಿಸಿಕೊಂಡು ಚಾಲಕರಾಗಿದ್ದ ಪೊಲೀಸರ ಬಳಿಯೇ ಬಂದ ಆರೋಪಿಗಳು ಬೆದರಿಸಿ ಹಣ ಪಡೆಯಲು ಶುರುಮಾಡಿದ್ದರು. ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳಿಸಿದಾಗ ಭಾಸ್ಕರ್‌ ಕೊಲೆ ಕೃತ್ಯದ ಬಗ್ಗೆ ಬಾಯ್ಬಿಟ್ಟರು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.