ಸಹಾಯ ದೂರುಗಳಿಗೆ ಕಾಲಮಿತಿಯಲ್ಲೇ ಪರಿಹಾರ


Team Udayavani, Oct 16, 2019, 3:09 AM IST

bbmp2

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ “ಸಹಾಯ ಆ್ಯಪ್‌’ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ.

ಮುಖ್ಯವಾಗಿ ಘನತ್ಯಾಜ್ಯ ನಿರ್ವಹಣೆಯ ಸಮಸ್ಯೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಾಲಮಿತಿಯ ಒಳಗೆ ಪರಿಹರಿಸುವುದಕ್ಕೆ ಬಿಬಿಎಂಪಿಯ ಸಹಾಯ ಆ್ಯಪ್‌ಗೆ ಸರ್ವಿಸ್‌ ಲೆವೆಲ್‌ ಅಗ್ರಿಮೆಂಟ್‌ ಎನ್ನುವ ಸಾಫ್ಟ್ವೇರ್‌ ಅಳವಡಿಸುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು 12 ಗಂಟೆಗಳ ಒಳಗೆ ಮುಗಿಸಬೇಕು ಎನ್ನುವ ನಿಯಮವಿದೆ. ಬಿಬಿಎಂಪಿ ಸಹಾಯ ಆ್ಯಪ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಹರಿಸುತ್ತಿದೆಯಾದರೂ, ಕಾಲಮಿತಿಯ ಒಳಗೆ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ. ಇದೇ ಕಾರಣಕ್ಕೆ ಕಳೆದ ವರ್ಷ ನಡೆದ ಸ್ವಚ್ಛ ಸರ್ವೇಯಲ್ಲಿ ನಿಗದಿತ ವಿಷಯದಲ್ಲಿ ಬಿಬಿಎಂಪಿ ಸೊನ್ನೆ ಸುತ್ತಿತ್ತು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿಯು ಸಮಸ್ಯೆಗಳನ್ನು ಕಾಲಮಿತಿಯ ಒಳಗಾಗಿ ಪರಿಹರಿಸುವುದಕ್ಕೆ ಆದ್ಯತೆ ನೀಡಲು ಮುಂದಾಗಿದೆ. ಇದರ ಜತೆಗೆ ಯಾವ ಸಮಸ್ಯೆಗಳು ಹೆಚ್ಚು ದಾಖಲಾಗುತ್ತಿವೆ, ಯಾವ ಕಾರಣಕ್ಕೆ ಈ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಬಗ್ಗೆಯೂ ಪರಿಶೀಲನೆ ನಡೆಸಲು ಮುಂದಾಗಿದೆ.

ಗಣನೀಯ ಪ್ರಮಾಣದಲ್ಲಿ ದೂರು ದಾಖಲು: ಬಿಬಿಎಂಪಿಯ ಸಹಾಯ ಆ್ಯಪ್‌ನಲ್ಲಿ ಈ ವರ್ಷ ಜನವರಿಯಿಂದ ಅ.14ರ ವರೆಗೆ ಒಟ್ಟು 93,232 ದೂರುಗಳು ದಾಖಲಾಗಿದ್ದು, ಇದರಲ್ಲಿ 53,360 ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಇನ್ನು 23,958 ದೂರುಗಳು ಪ್ರಗತಿ ಹಂತದಲ್ಲಿವೆ. ದಿರ್ಘಾವಧಿಯಲ್ಲಿ ಪರಿಹರಿಸ ಬೇಕಾಗಿರುವ 1,911 ದೂರುಗಳಿವೆ ಎಂದು ಗುರುತಿಸಲಾಗಿದೆ.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ದೂರುಗಳೇ ಹೆಚ್ಚು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ದೂರುಗಳು ಹೆಚ್ಚು ದಾಖಲಾಗುತ್ತಿವೆ. ಬ್ಲಾಕ್‌ಸ್ಪಾಟ್‌ಗಳ ನಿರ್ಮಾಣ, ರಸ್ತೆ ಬದಿಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ತ್ಯಾಜ್ಯ ವಿಲೇವಾರಿಗೆ ವಾಹನಗಳು ಬರದೆ ಇರುವ ಬಗ್ಗೆಯೂ ದೂರುಗಳು ದಾಖಲಾಗುತ್ತಿವೆ.

ಈ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಫ್ಟ್ವೇರ್‌ ಅಭಿವೃದ್ಧಿ ಮಾಡಲಾಗುತ್ತಿದೆ. ಉಳಿದಂತೆ ಶಿಕ್ಷಣಕ್ಕೆ ಸಂಬಂಧಿಸಿದಂತೆ 21 ದೂರು, ನಗರ ಯೋಜನೆಗೆ ಸಂಬಂಧಿಸಿ 62, ಆರೋಗ್ಯ 136, ತೋಟಗಾರಿಕೆ 437, ಹಣಕಾಸು 1,142 ಹಾಗೂ ಕಲ್ಯಾಣ ವಿಭಾಗ 22 ಮಾರುಕಟ್ಟೆಯಲ್ಲಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ 84 ದೂರುಗಳು ದಾಖಲಾಗಿವೆ.

ಆಯುಕ್ತರ ಖಾತೆಯಲ್ಲೂ ದೂರುಗಳ ಸುರಿಮಳೆ!: ಬಿಬಿಎಂಪಿಯ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ಸಾರ್ವಜನಿಕರು ಇಲ್ಲೂ ದೂರುಗಳನ್ನು ಸಲ್ಲಿಸುತ್ತಿದ್ದಾರೆ! ಆಯುಕ್ತರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳಲ್ಲೂ ಸಾರ್ವಜನಿಕರು ಚಿತ್ರ ಸಹಿತ ದೂರು ದಾಖಲಿಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದರಲ್ಲಿ ಕೆಲವು ದೂರುಗಳಿಗೆ ಆಯುಕ್ತರು ಸ್ಪಂದಿಸಿದ್ದಾರೆ.

ಸಾರ್ವಜನಿಕರು ದಾಖಲಿಸುವ ದೂರುಗಳನ್ನು ಕಾಲಮಿತಿಯ ಒಳಗೆ ಪರಿಹರಿಸಲು ಆದ್ಯತೆ ನೀಡಲಾಗುತ್ತಿದೆ. ಸಮಸ್ಯೆ ಸರ್ಮಪಕವಾಗಿ ಪರಿಹಾರವಾಗದಿದ್ದರೆ ಮತ್ತೆ ದೂರು ದಾಖಲಿಸಬಹುದು. ಈ ರೀತಿ ಎರಡನೇ ಬಾರಿ ದಾಖಲಾಗುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ.
-ಲೋಕೇಶ್‌, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

ವಿಭಾಗ ನಿಗದಿ ಪ್ರಗತಿ ಪರಿಹಾರ ಒಟ್ಟು
ಜಾಹೀರಾತು 1 22 92 116
ಪ್ರಾಣಿಗಳ ಸಮಸ್ಯೆ 1,353 3062 3803 8,294
ಒತ್ತುವರಿ 6 63 54 125
ಎಂಜಿನಿಯರಿಂಗ್‌ 6,431 14036 25,707 49,105
ಅರಣ್ಯ ಇಲಾಖೆ 471 1,408 1920 3,809
ಕೆರೆ 7 13 450 528
ಘನತ್ಯಾಜ್ಯ ನಿರ್ವಹಣೆ 3,309 4,547 19,448 28,288

* ಹಿತೇಶ್‌ ವೈ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.