ವಿಧಾನಸೌಧದಲ್ಲೇ ಟಿಪ್ಪು ಜಯಂತಿ ಆಚರಣೆ
Team Udayavani, Nov 3, 2018, 12:16 PM IST
ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಣೆ ಆರಂಭಿಸಿದ್ದು, ಈ ವರ್ಷವೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲೇ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಪುನರುತ್ಛರಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳಿಂದ ಟಿಪು ಜಯಂತಿ ಆಚರಣೆ ಮಾಡುತ್ತಾ ಬಂದಿದೆ. ಸಮ್ಮಿಶ್ರ ಸರ್ಕಾರವೂ ನ.10ರಂದು ಟಿಪ್ಪು ಜಯಂತಿ ಆಚರಿಸಲು ನಿರ್ಧರಿಸಿದೆ ಎಂದು ಹೇಳಿದರು.
ಇದೇ ವೇಳೆ, ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗಿತ್ತು.
ಹಾವೇರಿ ಜಿಲ್ಲೆಯಲ್ಲಿ ನಕಲಿ ವೈದ್ಯರು ಇರುವ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈಗಾಗಲೇ ನಕಲಿ ವೈದ್ಯರ ಹಾವಳಿ ಕುರಿತು ತನಿಖೆ ನಡೆಯುತ್ತಿದೆ. ಹಾವೇರಿ ಜಿಲ್ಲೆಯ ನಕಲಿ ವೈದ್ಯರ ಪ್ರಕರಣದ ಮಾಹಿತಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.