ಫೆಬ್ರವರಿಗೆ ಟೆಂಡರ್‌ಶ್ಯೂರ್‌ ಪೂರ್ಣಗೊಳಿಸಲು ಸೂಚನೆ


Team Udayavani, Jan 12, 2017, 12:09 PM IST

mayor-visiting.jpg

ಬೆಂಗಳೂರು: ನಗರದ ಮೋದಿ ಆಸ್ಪತ್ರೆ ರಸ್ತೆಯಲ್ಲಿ 10.5 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಟೆಂಡರ್‌ ಶ್ಯೂರ್‌ ರಸ್ತೆ ಕಾಮಗಾರಿಯನ್ನು ಫೆಬ್ರುವರಿ ಅಂತ್ಯದ ವೇಳೆಗೆ ಪೂರ್ಣಗೊಳಿಸುವಂತೆ ಮೇಯರ್‌ ಜಿ. ಪದ್ಮಾವತಿ ಸೂಚನೆ ನೀಡಿದ್ದಾರೆ.

ಕಾಮಗಾರಿ ವಿಳಂಬ ಗತಿಯಲ್ಲಿ ನಡೆಯುತ್ತಿದೆ ಎಂಬ ಕುರಿತು ನಾಗರಿಕರ ದೂರಿನ ಹಿನ್ನೆಲೆಯಲ್ಲಿ ಟೆಂಡರ್‌ಶ್ಯೂರ್‌ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ ಅವರು ಟೆಂಡರ್‌ಶ್ಯೂರ್‌ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಕುರುಬರಹಳ್ಳಿಯಿಂದ ವೆಸ್ಟ್‌ ಆಫ್ ಕಾರ್ಡ್‌ ರಸ್ತೆವರೆಗೆ ನಡೆಯುತ್ತಿರುವ ಕಾಮಗಾರಿ ವೇಳೆ ಪಾದಚಾರಿ ಮಾರ್ಗ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ನಿವಾಸಿಗಳು ಮನವಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಂಡರ್‌ ಶ್ಯೂರ್‌ ಕಾಮಗಾರಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಜಲಮಂಡಳಿ ಕೊಳವೆ ಮಾರ್ಗ ಹಾಗೂ ಓಎಫ್ಸಿ ಕೇಬಲ್‌ ಅಳವಡಿಸಿದ ಬಳಿಕ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯಲಿದೆ ಎಂದರು. ಕೆಎಚ್‌ಬಿ ಕಾಲೋನಿ ಬಳಿ ನಿರ್ಮಾಣವಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಪರಿಶೀಲಿಸಿ ಮಂದಗತಿಯಲ್ಲಿ ನಡೆದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಕೆಳಸೇತುವೆ ಕಾಮಗಾರಿಯಲ್ಲಿ ಸಿಮೆಂಟ್‌ ಕ್ಯೂರಿಂಗಿಗಾಗಿ ಸಾಕಸ್ಟು ಸಮಯ ಹಿಡಿಯಲಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಲು ಮುಂದಾದರು. ಇದರಿಂದ ಮತ್ತಷ್ಟು ಸಿಟ್ಟಾದ ಮೇಯರ್‌, ಈಗಾಗಲೇ ಕಾಮಗಾರಿ ವಿಳಂಬವಾಗಿದ್ದು ಮಾರ್ಚ್‌ ಒಳಗಾಗಿ ಕಾಮಗಾರಿ ಸಾರ್ವಜನಿಕರ ಸೇವೆಗೆ ಮುಕ್ತವಾಗಬೇಕು ಎಂದರು ಹೇಳಿದರು. ಆಡಳಿತ ಪಕ್ಷದ ನಾಯಕ ಮಹಮ್ಮದ್‌ ರಿಜ್ವಾನ್‌ ನವಾಬ್‌, ಪಾಲಿಕೆ ಮುಖ್ಯ ಇಂಜಿನಿಯರ್‌ ಕೆ.ಟಿ. ನಾಗರಾಜ್‌ ಮತ್ತಿತರರು ಹಾಜರಿದ್ದರು.

ಅಧಿಕಾರಯುತ ಸಮಿತಿ ರದ್ದತಿಗೆ ಆಗ್ರಹ: ಬಿಬಿಎಂಪಿಯ ಅಧಿಕಾರವನ್ನು ಕಿತ್ತುಕೊಂಡು ಕಾಮಗಾರಿಗಳ ಅನುಮೋದನೆಗೆ ನಗರಾಭಿವೃದ್ಧಿ ಇಲಾಖೆ ಅಡಿ ಅಧಿಕಾರಯುತ ಸಮಿತಿ ರಚನೆ ವಿರುದ್ಧ ಜೆಡಿಎಸ್‌ ಮತ್ತೂಮ್ಮೆ ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ವಾರ್ಡ್‌ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಭದ್ರೇಗೌಡ ಸಮಿತಿ ರದ್ದುಪಡಿಸುವಂತೆ ಕಾಮಗಾರಿ ಪರಿಶೀಲನೆ ವೇಳೆ ಮೇಯರ್‌ಗೆ ಒತ್ತಾಯಿಸಿದರು.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

12-bng-crime

Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ

11-bng

Bengaluru: ಮೆಡಿಕಲ್‌ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.