ಬಹುಮಹಡಿ ನಿವಾಸಿಗಳ ಚಿತ್ತ ಪ್ರಣಾಳಿಕೆಯತ್ತ


Team Udayavani, Apr 21, 2018, 11:56 AM IST

bahu-mahadi.jpg

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳ ಚಿತ್ತ ಈಗ ವಿವಿಧ ಪಕ್ಷಗಳು ಬಿಡುಗಡೆ ಮಾಡಲಿರುವ ಚುನಾವಣಾ ಪ್ರಣಾಳಿಕೆಯತ್ತ ನೆಟ್ಟಿದ್ದು, ತಮ್ಮ ಸಮಸ್ಯೆಗಳನ್ನು ನಿವಾರಿಸುವ ಭರವಸೆ ನೀಡುವವರ ಬೆಂಬಲಿಸಲು ಮುಂದಾಗಿದ್ದಾರೆ.

ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಉಂಟಾದಾಗೆಲ್ಲಾ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳಲ್ಲಿ ನಡುಕ ಹುಟ್ಟುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ಯಾವುದೇ ನೆರವು ತಮಗೆ ಸಿಗುತ್ತಿಲ್ಲ. ಇದರಿಂದ ಕಂಗೆಟ್ಟ ಅಪಾರ್ಟ್‌ಮೆಂಟ್‌ ನಿವಾಸಿಗಳು, ಚುನಾವಣೆಯನ್ನು ಅಸ್ತ್ರವಾಗಿ ಬಳಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅಡಿ ಒಗ್ಗಟ್ಟಾಗಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ನಿರ್ಧರಿಸಿದ್ದಾರೆ. 

ಕೊಳಚೆನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಅಳವಡಿಕೆಯಲ್ಲಿರುವ ಗೊಂದಲ ಈಗಲೂ ಮುಂದುವರಿದಿದೆ. ಇದಕ್ಕೊಂದು ಸರಿಯಾದ ಮಾರ್ಗಸೂಚಿ ಇಲ್ಲ. ಈ ಎಸ್‌ಟಿಪಿಗೆ ಬಳಸಲಾಗುವ ವಿದ್ಯುತ್‌ಗೆ “ವಾಣಿಜ್ಯ ಉದ್ದೇಶ’ದ ದರ ವಿಧಿಸಲಾಗುತ್ತಿದೆ. ನೀರಿನ ಬಳಕೆ ಶುಲ್ಕ ಸಾಮಾನ್ಯ ಬಳಕೆದಾರರಿಗಿಂತ ಮೂರುಪಟ್ಟು ಹೆಚ್ಚು ವಸೂಲು ಮಾಡಲಾಗುತ್ತಿದೆ.

ಇಂತಹ ಹತ್ತುಹಲವು ಸಮಸ್ಯೆಗಳನ್ನು ಬೆಂಗಳೂರು ಅಪಾರ್ಟ್‌ಮೆಂಟ್‌ಗಳು ಎದುರಿಸುತ್ತಿವೆ. ಈ ಸಮಸ್ಯೆಗಳನ್ನು ಪ್ರಸ್ತಾಪಿಸುವ ಪ್ರಣಾಳಿಕೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳು ಎದುರುನೋಡುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡುವಂತಹ ಪಕ್ಷಗಳ ಪರವಾಗಿ ನಿಲ್ಲಲು ಚಿಂತನೆ ನಡೆಸಿದ್ದಾರೆ. 

ಈ ಕುರಿತು ಚರ್ಚಿಸಲು ಏಪ್ರಿಲ್‌ 22ರಂದು ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ಮುಖಂಡರನ್ನು ಆಹ್ವಾನಿಸಿದ್ದು, ಅಲ್ಲಿ ನಮ್ಮ ಸಮಸ್ಯೆಗಳನ್ನು ಆ ನಾಯಕರ ಮುಂದಿಡಲಾಗುವುದು. ನಂತರ ಯಾವ್ಯಾವ ಪಕ್ಷಗಳು ಏನು ಭರವಸೆ ನೀಡಿವೆ ಎಂಬುದನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ತಿಳಿಸಲಾಗುವುದು. ಅದನ್ನು ಆಧರಿಸಿ ಸ್ವತಃ ನಿವಾಸಿಗಳು ಯಾರನ್ನು ಬೆಂಬಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ ಎಂದು ಬೆಂಗಳೂರು ಅಪಾರ್ಟ್‌ಮೆಮಟ್‌ ಫೆಡರೇಷನ್‌ (ಬಿಎಎಫ್) ಕಾರ್ಯದರ್ಶಿ ಕೆ.ವಿ. ಪ್ರಸನ್ನ “ಉದಯವಾಣಿ’ಗೆ ತಿಳಿಸಿದರು. 

ಹಠಕ್ಕೆ ಬಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು: ಎಸ್‌ಟಿಪಿ ಸೇರಿದಂತೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಅನೇಕ ಬಾರಿ ಸ್ಥಳೀಯ ಕಾರ್ಪೋರೇಟರ್‌, ಶಾಸಕರ ಬಳಿ ಹೋಗಿದ್ದೇವೆ. ಆದರೆ, ಅವರೆಲ್ಲರಿಂದ “ನೀವು (ಅಪಾರ್ಟ್‌ಮೆಂಟ್‌ ನಿವಾಸಿಗಳು) ವೋಟು ಹಾಕುವುದೇ ಇಲ್ವಲ್ಲಾ’ ಎಂಬ ಉತ್ತರ ಬರುತ್ತಿತ್ತು. ಆಗ, ನಮ್ಮ ಮತದಾನದ ಹಕ್ಕಿನ ಬಗ್ಗೆ ಮನದಟ್ಟಾಯ್ತು.

ಇದೇ ಕಾರಣಕ್ಕೆ ಹಠಕ್ಕೆ ಬಿದ್ದು, ಮತದಾರರ ನೋಂದಣಿ ಮಾಡಿಸಿದ್ದೇವೆ. ಇದರ ಫ‌ಲವಾಗಿ ಸುಮಾರು 25 ಸಾವಿರಕ್ಕೂ ಅಧಿಕ ಮತದಾರರು ಸೇರ್ಪಡೆಯಾಗಿದ್ದಾರೆ. ತಮ್ಮ ಊರುಗಳಲ್ಲಿರುವ ಮತದಾರರ ಗುರುತಿನ ಚೀಟಿ ರದ್ದುಪಡಿಸಿ, ಬೆಂಗಳೂರಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲದೆ, ಗರಿಷ್ಠ ಮತದಾನಕ್ಕೆ ಪಣತೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮತ ಚಲಾಯಿಸುವಂತೆ ಮನವಿ ಮಾಡಲಾಗುತ್ತಿದೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಈ ಸಂಬಂಧದ ಹೋಲ್ಡಿಂಗ್‌ ಹಾಕಲಾಗಿದೆ. ವಾಯುವಿಹಾರಕ್ಕೆ ಸಿಕ್ಕಲ್ಲಿ ಮತ ಹಾಕುವಂತೆ ಕೋರುವುದು ಸೇರಿದಂತೆ ಹಲವು ರೀತಿಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರಸನ್ನ ಮಾಹಿತಿ ನೀಡಿದರು. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಈ ಅಪಾರ್ಟ್‌ಮೆಂಟ್‌ ನಿವಾಸಿಗಳ ಮತದಾನದ ಪ್ರಮಾಣ ಶೇ. 20ಕ್ಕಿಂತ ಕಡಿಮೆ ಇರುತ್ತದೆ. ಈ ಸಲ ಇದನ್ನು ಶೇ. 80ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದರು. 

ನಿರ್ಣಾಯಕ ಆಗುವ ಸಾಧ್ಯತೆ: ನಗರದಲ್ಲಿ 100ಕ್ಕೂ ಅಧಿಕ ಫ್ಲ್ಯಾಟ್‌ಗಳಿರುವ 4-5 ಸಾವಿರ ಅಪಾರ್ಟ್‌ಮೆಂಟ್‌ಗಳೂ ಸೇರಿ ಒಟ್ಟಾರೆ 10 ಸಾವಿರಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿದ್ದು, ಇದರಲ್ಲಿ ಸುಮಾರು ಎರಡು ಲಕ್ಷ ಮತದಾರರು ಇದ್ದಾರೆ. ಬೊಮ್ಮನಹಳ್ಳಿ, ಹೆಬ್ಟಾಳ, ಸಿ.ವಿ. ರಾಮನ್‌ನಗರ, ಮಹದೇವಪುರ, ಬೆಂಗಳೂರು ದಕ್ಷಿಣ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.

ಅಲ್ಲೆಲ್ಲಾ ಅಂದುಕೊಂಡಂತೆ ಗರಿಷ್ಠ ಪ್ರಮಾಣದಲ್ಲಿ ಮತ ಚಲಾಯಿಸಿದರೆ, ಈ ಅಪಾರ್ಟ್‌ಮೆಂಟ್‌ ನಿವಾಸಿಗಳು ನಿರ್ಣಾಯಕ ಆಗುವ ಸಾಧ್ಯತೆ ಇದೆ ಎಂದು ಯುವ ಮತದಾರ ನೋಂದಣಿ ಮತ್ತು ಜಾಗೃತಿ ಅಭಿಯಾನ ಕಾರ್ಯಕರ್ತ ಡಿ.ವಿ. ಆನಂದ್‌ ಅಭಿಪ್ರಾಯಪಡುತ್ತಾರೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳಲ್ಲಿ ಈ ಬಾರಿ ಆಸಕ್ತಿ ಇದೆ. ಮತ ಚಲಾಯಿಸಲು ಅವರೆಲ್ಲಾ ಉತ್ಸುಕರಾಗಿದ್ದಾರೆ. ಸಾವಿರಾರು ಮತದಾರರನ್ನು ಸ್ವತಃ ನಾನೇ ನೋಂದಣಿ ಮಾಡಿಸಿದ್ದೇನೆ ಎಂದೂ ಆನಂದ್‌ ತಿಳಿಸುತ್ತಾರೆ. 

ಬೇಡಿಕೆಗಳು: ಕೊಳಚೆನೀರು ಸಂಸ್ಕರಣಾ ಘಟಕಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು. ನೀರಿನ ಶುಲ್ಕ ಸಾಮಾನ್ಯವಾಗಿರಬೇಕು. ಘನತ್ಯಾಜ್ಯ ಸಂಗ್ರಹಕ್ಕೆ ಸೆಸ್‌ ಪಡೆಯಲಾಗುತ್ತಿದೆ. ಆದರೆ, ಅದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಿಲ್ಲ. ಇದನ್ನು ಪೂರೈಸಬೇಕು. ವಿನಾಕಾರಣ ಅಪಾರ್ಟ್‌ಮೆಂಟ್‌ಗಳನ್ನು ಟಾರ್ಗೆಟ್‌ ಮಾಡಬಾರದು. 

-10 ಸಾವಿರ ನಗರದಲ್ಲಿರುವ ಅಂದಾಜು ಅಪಾರ್ಟ್‌ಮೆಂಟ್‌ಗಳು
-2 ಲಕ್ಷ ಅಪಾರ್ಟ್‌ಮೆಂಟ್‌ಗಳಲ್ಲಿರುವ ಮತದಾರರು
-25 ಸಾವಿರ ಅಪಾರ್ಟ್‌ಮೆಂಟ್‌ಗಳಿಂದ ಹೊಸದಾಗಿ ಸೇರ್ಪಡೆಗೊಂಡ ಮತದಾರರು
-250 ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ನಲ್ಲಿರುವ ಗ್ರೂಪ್‌ಗ್ಳು

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.