ಸಂಚಾರ ತೊಡಕೇ ಸರ್ವರ ಸಮಸ್ಯೆ


Team Udayavani, Aug 25, 2019, 3:09 AM IST

sanchara

ಬೆಂಗಳೂರು: “ನಗರದ ಹೃದಯ ಭಾಗದಲ್ಲಿರುವ ಶಾಲೆ, ಕಾಲೇಜುಗಳ ವಾಹನಗಳನ್ನು ರಸ್ತೆ ಬದಿ ನಿಲ್ಲಿಸುತ್ತಾರೆ. ಕೇಳಿದರೆ “ಪೊಲೀಸ್ರೇ ಕೇಳಲ್ಲ ನೀವು ಯಾರು ಕೇಳ್ಳೋಕೆ?’ ಎಂದು ಗದರುತ್ತಾರೆ’. “ಕೆಲವೆಡೆ ರಸ್ತೆ ಕಾಮಗಾರಿ ನೆಪದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ, ನೋ ಪಾರ್ಕಿಂಗ್‌ ಸ್ಥಳದಲ್ಲೇ ವಾಹನ ನಿಲ್ಲಿಸುತ್ತಾರೆ. ರಾತ್ರಿ ವೀಲ್ಹಿಂಗ್‌ ಮಾಡುವವರ ಕಾಟ ಹೆಚ್ಚಾಗಿದೆ. ಕುಡಿದು ವಾಹನ ಚಾಲನೆ ಮಾಡುವವರು ಪೊಲೀಸರಿಂದ ತಪ್ಪಿಸಿಕೊಳ್ಳಲು ವಾಟ್ಸ್‌ಆ್ಯಪ್‌ ಗ್ರೂಪ್‌ ತೆರಿದ್ದಾರೆ!’

ಇದು, ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ಆಯೋಜಿಸಿದ್ದ “ಸಾರ್ವಜನಿಕ ಜನಸ್ಪಂದನ ಸಭೆ’ಯಲ್ಲಿ ಪಾಲ್ಗೊಂಡಿದ್ದ ಸಂಘ- ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ನಗರ ಪೊಲೀಸ್‌ ಆಯುಕ್ತರಿಗೆ ಸಲ್ಲಿಸಿದ ದೂರುಗಳ ಪಟ್ಟಿ. ಸಾರಿಗೆ, ಬಿಬಿಎಂಪಿ, ಬಿಡಿಎ, ಮೆಟ್ರೋ ಅಧಿಕಾರಿಗಳ ಸಮ್ಮುಖದಲ್ಲಿ ನಗರದ ಸಂಚಾರ ದಟ್ಟಣೆ, ಅಪರಾಧ ಮತ್ತಿತರ ಸಮಸ್ಯೆ ಹೇಳಿಕೊಂಡರು. ನಗರದ ಬಹಳಷ್ಟು ಕಡೆ ಅನಗತ್ಯವಾಗಿ ರಸ್ತೆ ವಿಭಜಕ ನಿರ್ಮಿಸಲಾಗಿದ್ದು, ಎಲ್ಲೆಂದರಲ್ಲಿ ಯೂಟರ್ನ್ ನೀಡಲಾಗಿದೆ.

ಇದರಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕೆಲವಡೆ ನೋಪಾರ್ಕಿಂಗ್‌ ಸ್ಥಳದಲ್ಲಿ ವಾಹನ ನಿಲ್ಲಿಸುತ್ತಾರೆ, ಶಾಲೆಗಳೆದುರು ರಸ್ತೆಗಳಲ್ಲೇ ಶಾಲಾ ವಾಹನಗಳನ್ನು ನಿಲ್ಲಿಸುತ್ತಾರೆ. ಬಿಟಿಎಂ ಲೇಔಟ್‌ ಸೇರಿ ಕೆಲವಡೆ ಗಾಂಜಾ ಮಾರಾಟ ಹೆಚ್ಚಾಗಿದೆ. ಚಿಕ್ಕಪೇಟೆ, ಸುಲ್ತಾನ್‌ಪೇಟೆ ಹಾಗೂ ಗಾಂಧಿನಗರದ ಹಲವೆಡೆ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ರಸ್ತೆಗಳನ್ನು ಅಗೆದು ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ದೂರಿದರು.

ಕ್ರಮದ ಭರವಸೆ: ಸುಮಾರು ಒಂದೂವರೆ ಗಂಟೆಗಳ ಕಾಲ ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಚಾರ ತಜ್ಞರು ಅಭಿಪ್ರಾಯ, ಸಲಹೆ ಸೂಚನೆಗಳನ್ನು ಆಲಿಸಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬದಿ ವಾಹನ ನಿಲ್ಲಿಸುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. 14 ವರ್ಷ ಮೇಲ್ಪಟ್ಟ ಬಾಲಕ ಮತ್ತು ಬಾಲಕಿಯರನ್ನು ಪ್ರತ್ಯೇಕ ವಾಹನಗಳಲ್ಲಿ ಕರೆದೊಯ್ಯಬೇಕು.

ಶಾಲಾ ಆವರಣದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಳ್ಳುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗುವುದು. ಜತೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ಸೂಚಿಸುವ ನಿಯಮಗಳನ್ನು ಪಾಲಿಸದ ಶಾಲಾ ವಾಹನಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಜಲಮಂಡಳಿ, ಬಿಬಿಎಂಪಿ, ಸಾರಿಗೆ, ಮೆಟ್ರೋ, ಬಿಡಿಎ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿ ಸಂಬಂಧಿತ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು.

ಸಭೆಯಲ್ಲಿ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಡಾ.ಬಿ.ಆರ್‌.ರವಿಕಾಂತೇಗೌಡ, ಡಿಸಿಪಿಗಳಾದ ಕೆ.ಜಗದೀಶ್‌, ಸೌಮ್ಯಲತಾ, ಸಾರಾ ಫಾತೀಮಾ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಜ್ಞಾನೇಂದ್ರಕುಮಾರ್‌, ವಿಶೇಷ ಆಹ್ವಾನಿತರಾಗಿ ಐಐಬಿಎಂನ ಡಾ.ಭಟ್ಟಾಚಾರ್ಯ, ಐಆರ್‌ಟಿಇ ನವದೆಹಲಿಯ ಹರಿಷಿ, ಟಿಟಿಐಸಿ ಸಂಜೀವ್‌, ಐಐಎಸ್‌ಸಿ ಪ್ರೋಫೆಸರ್‌ ಆಶಿಶ್‌ ವರ್ಮಾ, ನಿವೃತ್ತ ಪೊಲೀಸ್‌ ಅಧಿಕಾರಿಗಳು, ಟ್ರಾಫಿಕ್‌ ವಾರ್ಡ್‌ನ್‌ಗಳು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರ ಸಲಹೆ: ಸಂಚಾರ ತಜ್ಞರು, ಸಾರ್ವಜನಿಕರು, ಆ್ಯಂಬುಲೆನ್ಸ್‌ ಮತ್ತು ತುರ್ತುವಾಹನಗಳು ಓಡಾಡಲು ಪ್ರತ್ಯೇಕ ದಾರಿ ಮಾಡಬೇಕು. ರಸ್ತೆ ಬದಿಗಳಲ್ಲಿ ನಿಲ್ಲಿಸುವ ಶಾಲಾ ವಾಹನಗಳಿಗೆ ದಂಡ ವಿಧಿಸಬೇಕು, ನಿಯಮ ಉಲ್ಲಂ ಸುವ ಆ್ಯಪ್‌ ಆಧರಿದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕರೆದ ಕಡೆ ಬಾರದ ಆಟೋ ಚಾಲಕರಿಗೆ ದಂಡ ವಿಧಿಸಬೇಕು.

ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಸೂಚನಾ ಫ‌ಲಕಗಳನ್ನು ಅಳವಡಿಸಬೇಕು, ಬಸ್‌ ನಿಲ್ದಾಣದಲ್ಲೇ ಬಿಎಂಟಿಸಿ ಬಸ್‌ಗಳನ್ನು ನಿಲ್ಲಿಸುವಂತೆ ಸೂಚಿಸಬೇಕು. ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನಗಳ ನಿಲುಗಡೆಗೆ ಅವಕಾಶ ನೀಡಬೇಕು. ಕರ್ಕಶ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು

ಕುಡುಕ ಚಾಲಕರಿಗೊಂದು ವಾಟ್ಸ್‌ಆ್ಯಪ್‌ ಗ್ರೂಪ್‌!: ಕುಟುಂಬ, ಪ್ರದೇಶ, ಸಮುದಾಯ, ವೃತ್ತಿ, ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳ ಗುಂಪು ಹೀಗೆ ನಾನಾ ರೀತಿಯ ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳನ್ನು ಕಂಡಿದ್ದೇವೆ. ಆದರೆ, ಸಂಚಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕುಡಿದು ವಾಹನ ಚಾಲನೆ ಮಾಡುವ ಯುವಕರ ಗುಂಪೊಂದು ನಗರದಲ್ಲಿ ವಾಟ್ಸ್‌ಆ್ಯಪ್‌ ಗ್ರೂಪ್‌ ತೆರೆದಿದೆ ಎಂದು ಬೆಂಗಳೂರು ಕ್ಲಬ್‌ ಅಸೋಸಿಯೇಷನ್‌ ಕ್ಲಬ್‌ ಸದಸ್ಯರೊಬ್ಬರು ಮಾಹಿತಿ ನೀಡಿದರು.

ಈ ರೀತಿಯ ಹತ್ತಾರು ಗ್ರೂಪ್‌ಗ್ಳು ನಗರದಲ್ಲಿ ಸಕ್ರಿಯವಾಗಿವೆ. ಈ ಮೂಲಕ ಸಂಚಾರ ಪೊಲೀಸರು ಎಲ್ಲೆಲ್ಲಿ ತಪಾಸಣೆ ನಡೆಸುತ್ತಾರೆ, ಯಾವ ಮಾರ್ಗದಲ್ಲಿ ಹೋಗಬೇಕು, ಹೋಗಬಾರದು ಎಂದು ಚರ್ಚಿಸುತ್ತಾರೆ. ಒಂದು ವೇಳೆ ಗ್ರೂಪ್‌ನ ಸದಸ್ಯನೊಬ್ಬ ನಿರ್ದಿಷ್ಟ ರಸ್ತೆಯಲ್ಲಿ ಹೋಗುವಾಗ ಸಂಚಾರ ಪೊಲೀಸರು ತಪಾಸಣೆ ನಡೆಸಿದರೆ ಆತನ ತಪಾಸಣೆಗೊಳಗಾಗಿ ಕೂಡಲೇ ಲೋಕೇಷನ್‌ ಸಮೇತ ಗ್ರೂಪ್‌ನಲ್ಲಿ; “ಸ್ನೇಹಿತರೇ, ಈ ಮಾರ್ಗದಲ್ಲಿ ಬರಬೇಡಿ.

ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಬದಲಿ ಮಾರ್ಗ ಬಳಸಿ’ ಎಂದು ಎಚ್ಚರಿಕೆ ಸಂದೇಶ ಹಾಕುತ್ತಾನೆ. ಈ ಮಾಹಿತಿ ತಿಳಿದ ಗ್ರೂಪ್‌ನ ಇತರೆ ಸದಸ್ಯರು ಎಚ್ಚೆತ್ತುಕೊಳ್ಳುತ್ತಾರೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ವಿಚಾರ ಕೇಳಿದ ನಗರ ಪೊಲೀಸ್‌ ಆಯುಕ್ತರು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಒಂದು ಕ್ಷಣ ಅಚ್ಚರಿಗೊಂಡರು. ಇದನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಕ್ರಮಕೈಗೊಳ್ಳುವುದಾಗಿ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದರು.

ಶಾಲಾ ವಾಹನಗಳಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ತುಂಬಿಕೊಳ್ಳುತ್ತಾರೆ. ಇದು ನಗರದ ಹಲವೆಡೆ ನಡೆಯುತ್ತಿರುವ ದಂಧೆಯಾಗಿದೆ. ಪೊಲೀಸರು, ಸಾರಿಗೆ ಇಲಾಖೆಗೆ ಗೊತ್ತಿದ್ದರೂ ಮೌನವಹಿಸಿದ್ದಾರೆ.
-ಮೊಹಮ್ಮದ್‌ ಶರೀಫ್, ಶಿವಾಜಿನಗರ ನಿವಾಸಿ

ಎಷ್ಟೋ ಬೈಕ್‌ಗಳಿಗೆ ಸೈಡ್‌ ಮೀರರ್‌ ಇರುವುದಿಲ್ಲ. ಹಿಂದೆ ಬರುವವರನ್ನು ಗಮನಿಸದೇ ಹಾವಿನ ರೀತಿಯಲ್ಲಿ ವಾಹನ ಓಡಿಸುತ್ತಾರೆ. ಸೈಲೆನ್ಸರ್‌ ಬದಲಿಸಿ ಶಬ್ದ ಮಾಲಿನ್ಯ ಮಾಡುತ್ತಾರೆ. ಇಂತಹ ಸವಾರರಿಗೆ ದಂಡ ವಿಧಿಸಬೇಕು.
-ನಾರಾಯಣ, ಚಂದ್ರಲೇಔಟ್‌ ನಿವಾಸಿ

ಬ್ರಿಗೇಡ್‌ ರಸ್ತೆ, ಅರಮನೆ ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿರುವ ಶಾಲೆ, ಕಾಲೇಜುಗಳ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತವೆ. ಈ ಬಗ್ಗೆ ಸಂಚಾರ ಪೊಲೀಸರು ಕ್ರಮ ಕೈಗೊಳ್ಳುವುದಿಲ್ಲ. ದಯವಿಟ್ಟು ಈ ಕುರಿತು ಕ್ರಮ ಜರುಗಿಸಿ.
-ಶಿವಕುಮಾರ್‌, ದೊಮ್ಮಲೂರು ನಿವಾಸಿ

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.