Traffic rules Violation: ವಿಶೇಷ ಕಾರ್ಯಾಚರಣೆಯಲ್ಲಿ 1193 ಕೇಸ್ ದಾಖಲು
Team Udayavani, Aug 8, 2024, 10:58 AM IST
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಚಾಲಕರ ವಿರುದ್ಧ 1193 ಪ್ರಕರಣ ದಾಖಲಿಸಿ, 5.92 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ
ನಗರ ಸಂಚಾರ ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದು, ಮಂಗಳವಾರ ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರ ವಿರುದ್ಧ 339 ಪ್ರಕರಣ ದಾಖಲಿಸಿ 1.65 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಸಂಚಾರ ಉತ್ತರ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 11.30 ರಿಂದ ಸಂಜೆ 4 ಗಂಟೆವರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಕರೆದಲ್ಲಿಗೆ ಬಾಡಿಗೆ ಬರಲು ನಿರಾಕರಣೆ, ದುಬಾರಿ ದರಕ್ಕೆ ಬೇಡಿಕೆ, ನೋ ಎಂಟ್ರಿ, ವಿರುದ್ಧ ದಿಕ್ಕಿನಲ್ಲಿ ಚಾಲನೆ, ಪಾದಾಚಾರಿ ಮಾರ್ಗದಲ್ಲಿ ಚಾಲನೆ, ದೋಷಪೂರಿತ ನೋಂದಣಿ ಫಲಕ ಅಳವಡಿಕೆ ಸೇರಿ ವಿವಿಧ ಸಂಚಾರ ನಿಯಮಗಳ ಉಲ್ಲಂ ಸಿದ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿದ್ದಾರೆ.
ಪೂರ್ವ ಸಂಚಾರ ವಿಭಾಗದ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರ ವಿರುದ್ಧ 854 ಪ್ರಕರಣ ದಾಖಲಿಸಿ, 4.27 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಮಂಗಳವಾರ ನಗರ ಪೂರ್ವ ಸಂಚಾರ ವಿಭಾಗದ ಪೊಲೀಸರು ತಮ್ಮ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕರೆದಲ್ಲಿಗೆ ಬಾಡಿಗೆ ಬಾರದಿರುವುದು, ಹೆಚ್ಚುವರಿ ದರಕ್ಕೆ ಬೇಡಿಕೆ, ದೋಷಪೂರಿತ ಸೈಲೆನ್ಸರ್ ಅಳವಡಿಕೆ, ಟ್ರಾಫಿಕ್ ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ನೋ ಎಂಟ್ರಿ, ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಸೇರಿ ವಿವಿಧ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.