![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 19, 2022, 11:30 PM IST
ಬೆಂಗಳೂರು: ಸರಕು ಸಾಗಾಟ ಆಟೋ ಹರಿದು ಐದು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಭುವನ(5) ಮೃತ ಬಾಲಕಿ. ಮಾ.17ರಂದು ಬೆಳಗ್ಗೆ 10.30ರ ಸುಮಾರಿಗೆ ಕಾವೇರಿಪುರದಲ್ಲಿಯೇ ದುರ್ಘಟನೆ ನಡೆದಿದೆ.
ಭುವನ ತಾಯಿ ಅನಿತಾ ರಸ್ತೆ ಬದಿ ಎಳೆನೀರು ಕುಡಿಯುತ್ತಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಸರಕು ಸಾಗಾಣೆ ಆಟೋ ಪಟ್ಟೇಗಾರ್ಪಾಳ್ಯ ಕಡೆಯಿಂದ ಕಾವೇರಿಪುರದ ಕಡೆ ಬಂದಿದೆ.
ಈ ವೇಳೆ ಆಟೋ ಚಾಲಕ ಸಮೀಪದಲ್ಲಿ ರಸ್ತೆ ಬದಿ ನಿಲ್ಲಿಸಿಕೊಂಡು ಮಹಿಳೆಯೊಬ್ಬರ ಜತೆ ಮಾತನಾಡುತ್ತಿದ್ದ. ನಂತರ ಹ್ಯಾಂಡ್ ಬ್ರೇಕ್ ಹಾಕದೆ ಆಟೋದಿಂದ ಕೆಳಗೆ ಇಳಿದಿದ್ದಾನೆ. ಇಳಿಜಾರು ರಸ್ತೆಯಾಗಿದ್ದರಿಂದ ಆಟೋ ಮುಂದಕ್ಕೆ ಹೋಗಿದ್ದು, ಎದುರುಗಡೆ ಇದ್ದ ಅನಿತಾ ಮತ್ತು ಭವನಗೆ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಭವನ ರಸ್ತೆಗೆ ಬಿದ್ದಿದ್ದಾರೆ. ಅದನ್ನು ಕಂಡ ತಾಯಿ ಅನಿತಾ ಎಳೆದುಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಆಗ ಆಟೋ ಚಾಲಕ ಬಾಲಕಿ ಕುತ್ತಿಗೆ ಮೇಲೆ ಹರಿದಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಕೂಡಲೇ ಸ್ಥಳೀಯರ ನೆರವಿನೊಂದಿಗೆ ಅನಿತಾ, ಪುತ್ರಿ ಭವನಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕೃತ್ಯ ಎಸಗಿದ ಆಟೋ ಚಾಲಕ ಧನಂಜಯ ಆಟೋ ಬಿಟ್ಟು ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.