ಚಲಿಸುತ್ತಿದ್ದ ಲಾರಿಯಲ್ಲಿದ್ದ ದಿಮ್ಮಿಗಳು ಬಿದ್ದು ಬೈಕ್ ನಲ್ಲಿದ್ದ ಹಿಂಬದಿ ಸವಾರ ಸಾವು
7 ತಿಂಗಳ ಹಿಂದೆ ಮದುವೆ, ಪತ್ನಿ 5 ತಿಂಗಳ ಗರ್ಭಿಣಿ
Team Udayavani, Jul 23, 2022, 12:42 PM IST
ಬೆಂಗಳೂರು: ನಾಗರಬಾವಿಯ ರಿಂಗ್ ರಸ್ತೆಯ ಮೇಲ್ಸೇತುವೆ ಬಳಿ ಚಲಿಸುತ್ತಿದ್ದ ಲಾರಿಯಿಂದ ಬೃಹತ್ ಗಾತ್ರದ ದಿಮ್ಮಿಗಳು ಬೈಕ್ ಮೇಲೆ ಬಿದ್ದು ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಸವಾರ ಗಾಯಗೊಂಡಿದ್ದಾನೆ.
ತಮಿಳುನಾಡು ಮೂಲದ ನಂದಿನಿ ಲೇಔಟ್ ನಿವಾಸಿ ಮುಕೇಶ್ (23) ಮೃತ ದುರ್ದೈ ವಿ. ಮುಕೇಶ್ ಬಾಮೈದ ಬೈಕ್ ಸವಾರ ಡೇವಿಡ್, ಮತ್ತೂಂದು ಬೈಕ್ನ ಸವಾರ ಶಿವು ಗಾಯಗೊಂಡಿದ್ದಾರೆ.
ಮುಕೇಶ್ ತಮಿಳುನಾಡಿ ತಿರುವಣ್ಣಾಮಲೆಯಲ್ಲಿರುವ ತಾಯಿ ಹಾಗೂ ಅಜ್ಜಿಯನ್ನು ನೋಡಿಕೊಂಡು ಶುಕ್ರವಾರ ಮುಂಜಾನೆ 4.30ಕ್ಕೆ ಸೆಟಲೈಟ್ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಿಂದ ಬಾಮೈದ ಡೇವಿಡ್ ತಮ್ಮ ಬೈಕ್ನಲ್ಲಿ ಮುಕೇಶ್ರನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಇತ್ತ ಸುಂಕದಕಟ್ಟೆಯಿಂದ ಟಿಂಬರ್ ಯಾರ್ಡ್ ಕಡೆಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಬರುತ್ತಿದ್ದ ಲಾರಿ ಮಾರ್ಗಮಧ್ಯೆ ನಾಗರಬಾವಿ ರಿಂಗ್ ರಸ್ತೆಯ ಮೇಲ್ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು.
ಅದೇ ರಸ್ತೆಯಲ್ಲಿ ಲಾರಿಯ ಮುಂಭಾಗದಿಂದ ಬರುತ್ತಿದ್ದ ಡೇವಿಡ್ ಬೈಕ್ ಮೇಲೆ ಬೃಹತ್ ಗಾತ್ರದ ಮರದ ದಿಮ್ಮಿಗಳು ಬಿದ್ದಿದ್ದವು. ಪರಿಣಾಮ ಮುಕೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡೇವಿಡ್ ಗಾಯಗೊಂಡಿದ್ದಾರೆ. ಲಾರಿ ಪಕ್ಕದಲ್ಲಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಶಿವು ಎಂಬುವವರಿಗೂ ಗಾಯಗಳಾಗಿವೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
7 ತಿಂಗಳ ಹಿಂದೆ ಮದುವೆ ಪತ್ನಿ 5 ತಿಂಗಳ ಗರ್ಭಿಣಿ: ಕೂಲಿ ಕೆಲಸ ಮಾಡುತ್ತಿದ್ದ ಮುಕೇಶ್ 7 ತಿಂಗಳ ಹಿಂದೆ ಮದುವೆಯಾಗಿದ್ದರು. ಇವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ನಾಗರ ಬಾವಿಯ ಖಾಸಗಿ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದೆ. ಆಂಧ್ರ ಪ್ರದೇಶ ಮೂಲದ ಲಾರಿಯಾಗಿದ್ದು, ಟಿಂಬರ್ ಯಾರ್ಡ್ಗೆ ಮರದ ದಿಮ್ಮಿಗಳನ್ನು ತರುತ್ತಿತ್ತು. ಮುಂಜಾನೆಕಡಿಮೆ ವಾಹನಗಳಿದ್ದ ಹಿನ್ನೆಲೆಯಲ್ಲಿ ಚಾಲಕ ಅತೀ ವೇಗವಾಗಿ ಲಾರಿ ಚಲಾಯಿಸಿದ್ದ. ದುರ್ಘಟನೆ ನಡೆದ ಸ್ಥಳದ ಬಳಿ ತಿರುವಿದ್ದು, ಅಲ್ಲಿ ಏಕಾಏಕಿ ಬ್ರೇಕ್ ಹಾಕಿರುವ ಕಾರಣ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರ ಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.