ಮಾರ್ಗಸೂಚಿಗೆ ಮಣ್ಣೆರಚಿ ಪೊಲೀಸರ ವರ್ಗಾವಣೆ

ನಂಬಿಕಸ್ಥರ ಉಳಿಸಿಕೊಳ್ಳಲು ಜನಪ್ರತಿನಿಧಿಗಳಿಂದ "ವರ್ಗಾಸ್ತ್ರ' ಬಳಕ

Team Udayavani, Apr 5, 2019, 12:28 PM IST

police
ಬೆಂಗಳೂರು : ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದು ಕೇಂದ್ರ ಚುನಾವಣಾ ಆಯೋಗದ ವರ್ಗಾವಣೆ ಮಾರ್ಗಸೂಚಿಗಳು ಅನ್ವಯ ಆಗುವ ಮೊದಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ನಡೆದಿದ್ದು, ಇದರಲ್ಲಿ “ಆಯಕಟ್ಟಿನ ಜಾಗ’ ಹುಡುಕಿಕೊಂಡಿರುವ ವಾಸನೆ ಬಡಿಯುತ್ತಿದೆ. ಮತ್ತೂಂದೆಡೆ ಈ ವರ್ಗಾವಣೆ ಹಿಂದೆ ಚುನಾಯಿತ ಜನಪ್ರತಿನಿಧಿಗಳ “ಸ್ವಹಿತಾಸಕ್ತಿ’ಯೂ ಇದೆ ಎಂಬ ಬಲವಾದ ಅನುಮಾನ ಕೂಡ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಇದೊಂದು ಪೂರ್ವ ನಿಯೋಜಿತ “ತಂತ್ರಗಾರಿಕೆ’ ಎಂದೂ ಹೇಳಲಾಗಿದೆ.
ಪೊಲೀಸ್‌ ಇಲಾಖೆ ಅಥವಾ ಸರ್ಕಾರದ ಪ್ರಕಾರ, ಐಜಿಪಿ ಹಂತದಿಂದ ಕಾನ್‌ಸ್ಟೆಬಲ್‌ವರೆಗಿನ ಎಲ್ಲ ಹಂತದ ಅಧಿಕಾರಿಗಳು ಕನಿಷ್ಠ ಒಂದರಿಂದ ಎರಡು ವರ್ಷಗಳ ಕಾಲ ಒಂದೇ ಕಡೆ ಕರ್ತವ್ಯನಿರ್ವಹಿಸಬೇಕು. ನಂತರ ಮೂರು ವರ್ಷದೊಳಗೆ ಬೇರೆಡೆ ವರ್ಗಾವಣೆ ಮಾಡಬಹುದು. ಇನ್ನು ಪಾರದರ್ಶಕ ಚುನಾವಣೆ ನಡೆಸಲು ಐಜಿಪಿ, ಎಸ್ಪಿ, ಡಿವೈಎಸ್ಪಿ, ಇನ್‌ಸ್ಪೆಕ್ಟರ್‌, ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್‌ವರೆಗಿನ ಅಧಿಕಾರಿಗಳು, ಒಂದೇ ಸ್ಥಳದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದ್ದರೆ ಅಥವಾ ಸ್ವಂತ ಜಿಲ್ಲೆಯಲ್ಲಿ ಅಥವಾ ಈ ಹಿಂದಿನ ಚುನಾವಣೆ ಸಮಯದಲ್ಲಿ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದರೆ, ಅಂತಹ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂಬುದು ಚುನಾವಣಾ ಆಯೋಗದ ನಿಯಮ.
ಇದನ್ನೇ “ಅಸ್ತ್ರ’ವನ್ನಾಗಿ ಬಳಸಿಕೊಳ್ಳುವ ಜನಪ್ರತಿನಿಧಿಗಳು, ಚುನಾವಣಾ ಪೂರ್ವದಲ್ಲಿಯೇ ತಮ್ಮೊಡನೆ ವಿಶ್ವಾಸ ಹೊಂದಿರುವ ಅಧಿಕಾರಿಗಳನ್ನು ತಮ್ಮ ಕ್ಷೇತ್ರ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಿಗೆ ನಿಯೋಜಿಸಿಕೊಳ್ಳುತ್ತಾರೆ. ಚುನಾವಣೆ ಸಂದರ್ಭದಲ್ಲೂ ತಮ್ಮ ಪರ ಕೆಲಸ ಮಾಡಿಸಿಕೊಳ್ಳುವ ಪರಿಪಾಠ ಮುಂದುವರಿಸುತ್ತಾರೆ. ಈ ಮೂಲಕ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನೆಪದಲ್ಲಿ ಚುನಾವಣಾ ಆಯೋಗದ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಪೊಲೀಸ್‌ ಇಲಾಖೆಯಲ್ಲಿ ಚುನಾವಣಾ ಪೂರ್ವ ಅಥವಾ ನಂತರದಲ್ಲಿ ನಡೆಯುವ ಬಹುತೇಕ ವರ್ಗಾವಣೆಗಳೂ ಸ್ಥಳೀಯ ಜನಪ್ರತಿನಿಧಿಗಳ ಸ್ವಹಿತಾಸಕ್ತಿಯಿಂದ ಕೂಡಿರುತ್ತದೆ. ಇದಕ್ಕೆ ಅಚ್ಚರಿ ಪಡುವ ಅಗತ್ಯವಿಲ್ಲ. ಅಲ್ಲದೆ, ವರ್ಗಾವಣೆ ಒಂದು ದೊಡ್ಡ ದಂಧೆ. ಇದರಿಂದ ಇಡೀ ಆಡಳಿತ ವ್ಯವಸ್ಥೆಯೇ ಹಾಳುಗುತ್ತಿದೆ. ಇದು ಎಲ್ಲ ಇಲಾಖೆಯಲ್ಲೂ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ತಮ್ಮೊಡನೆ ವಿಶ್ವಾಸದಿಂದ ಇರುವ ಪೊಲೀಸ್‌ ಅಧಿಕಾರಿ ಬೇರೆಡೆ ವರ್ಗಾವಣೆ ಆಗಲು ಸ್ಥಳೀಯ ಜನಪ್ರತಿನಿಧಿ ಎಂದಿಗೂ ಅವಕಾಶ ಕೊಡುವುದಿಲ್ಲ. ಪ್ರಮುಖವಾಗಿ ಚುನಾವಣೆ ಸಂದರ್ಭದಲ್ಲಿ ಅದು ಸಾಧ್ಯವೇ ಇಲ್ಲ ಎಂದು ನಿವೃತ್ತ ಪೊಲೀಸ್‌ ಮಹಾನಿರ್ದೇಶಕರೊಬ್ಬರು ಅಭಿಪ್ರಾಯಪಡುತ್ತಾರೆ.
ಫೆಬ್ರವರಿವರೆಗಿನ ವರ್ಗಾವಣೆಗಳು ಡಿಸೆಂಬರ್‌ 2018ರಿಂದ 2019 ಫೆಬ್ರವರಿ ಅಂತ್ಯದವರೆಗೆ ಅಂದಾಜು (ಚುನಾವಣೆ ಪೂರ್ವ) 45 ಮಂದಿ ಐಪಿಎಸ್‌, ಐದು ಮಂದಿ ಎಸ್ಪಿ (ನಾನ್‌ ಐಪಿಎಸ್‌), 44 ಡಿವೈಎಸ್ಪಿ, 439 ಇನ್‌ಸ್ಪೆಕ್ಟರ್‌, ಆರು ಪಿಎಸ್‌ಐ ಹಂತದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
 ● ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.