Arrested: ವಿಲ್ಲಾಗಳಿಗೆ ರಾತ್ರಿ ಕನ್ನ ಹಾಕುತ್ತಿದ್ದ ತ್ರಿಪುರ ಯುವಕ


Team Udayavani, Sep 24, 2024, 11:12 AM IST

4

ಬೆಂಗಳೂರು:  ರಾತ್ರಿ ವೇಳೆ ವಿಲ್ಲಾಗಳಿಗೆ ನುಗ್ಗಿ ಹೊಟ್ಟೆ ತುಂಬಾ ಊಟ ಮಾಡಿ, ಬಳಿಕ ಕಳವು ಮಾಡುತ್ತಿದ್ದ ತ್ರಿಪುರ ಮೂಲದ ಕಳ್ಳನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ತ್ರಿಪುರಾ ಮೂಲದ ಅಮಿತ್‌ ದೇಬಾರಿಯಾ (22) ಬಂಧಿತ.

ಇತ್ತೀಚೆಗೆ ಕೆ.ನಾರಾಯಣಪುರದ ವಿಲ್ಲಾ ನಿವಾಸಿಯೊಬ್ಬರು ರಾತ್ರಿ ಮನೆ ಬಾಗಿಲು ಹಾಕಿದ್ದು, ಮಹಡಿಯ ಬಾಗಿಲು ಹಾಕುವುದನ್ನು ಮರೆತು ನಿದ್ದೆಗೆ ಜಾರಿದ್ದರು. ಅದಕ್ಕೂ ಮೊದಲು ತಮ್ಮ ವಾಚ್‌, ಮೊಬೈಲ್‌, ಪರ್ಸ್‌ ಅನ್ನು ಊಟದ ಟೇಬಲ್‌ ಮೇಲೆ ಇರಿಸಿ­ದ್ದರು. ಮರು ದಿನ ಬೆಳಗ್ಗೆ ಎಚ್ಚರಗೊಂಡು ಊಟದ ಟೇಬಲ್‌ ಬಳಿ ಬಂದಾಗ ಪರ್ಸ್‌, ವಾಚ್‌ ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಸಿಕ್ಕ ಸುಳಿವು ಹಾಗೂ ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಕೊತ್ತನೂರು ಸಮೀಪದ ಗುಬ್ಬಿ ಕ್ರಾಸ್‌ ಬಳಿ ಆರೋಪಿಯನ್ನು‌ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ನಾರಾಯಣಪುರದ ವಿಲ್ಲಾದಲ್ಲಿ ಕಳ್ಳತನ ಮಾಡಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜತೆಗೆ ನಗರದ ವಿವಿಧೆಡೆಯ ವಿಲ್ಲಾಗಳಲ್ಲಿ ಕಳವು ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳ್ಳತನಕ್ಕೆ ಮೊದಲು ಹೊಟ್ಟೆ ತುಂಬಾ ಊಟ: ಆರೋಪಿ ಅಮಿತ್‌ ರುಚಿಯಾದ ಊಟಕ್ಕಾಗಿ ವಿಲ್ಲಾಗಳಿಗೆ ರಾತ್ರಿ ವೇಳೆ ನುಗ್ಗುತ್ತಿದ್ದ. ಅಡುಗೆ ಮನೆಗೆ ತೆರಳಿ ಹೊಟ್ಟೆ ತುಂಬಾ ಊಟ ಮಾಡಿ ಬಳಿಕ ಕಳ್ಳತನ ಮಾಡುತ್ತಿದ್ದ. ಈತ ಆದಿವಾಸಿ ಸಮುದಾ­ಯಕ್ಕೆ ಸೇರಿರುವುದರಿಂದ ಸುಲಭವಾಗಿ ಮರ ಏರುವುದು, ಗೋಡೆ ಹತ್ತುವುದು ಕರಗತವಾಗಿದೆ. ಹೀಗಾಗಿ ವಿಲ್ಲಾಗಳನ್ನೇ ಟಾರ್ಗೆಟ್‌ ಮಾಡಿ ರಾತ್ರಿ ವೇಳೆ ನುಗ್ಗಿ ಕಳವು ಮಾಡಿ ಪರಾರಿಯಾಗುತ್ತಿದ್ದ. ಪೊಲೀಸರು ತನ್ನ ಪತ್ತೆ ಹಚ್ಚಬಹುದು ಎಂದು ತಲೆ ಬೋಳಿಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟ್ಯಾಂಕರ್‌ಗಳಿಗೆ ನೀರು ತುಂಬುವ ಕೆಲಸ: ತ್ರಿಪುರಾ ಮೂಲದ ಆರೋಪಿ ಅಮಿತ್‌ ಆದಿವಾಸಿ ಸಮುದಾಯಕ್ಕೆ ಸೇರಿದ್ದಾನೆ. 7 ವರ್ಷದ ಹಿಂದೆ ನಗರಕ್ಕೆ ಬಂದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಕೊತ್ತನೂರಿನಲ್ಲಿ ನೀರಿನ ಟ್ಯಾಂಕರ್‌ನಲ್ಲಿ ನೀರು ತುಂಬಿಸುವ ಕೆಲಸ ಮಾಡುತ್ತಿದ್ದ. ಈತನಿಗೆ ಯಾವುದೇ ಮನೆ ಇಲ್ಲ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ರಾತ್ರಿ ವೇಳೆ ತಂಗುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ನಿರ್ಮಾಣ ಹಂತದ  ಕಟ್ಟಡಗಳಲ್ಲಿ ಕಳ್ಳ ಮಾಲು!:

ಆರೋಪಿ ಅಮಿತ್‌ನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹನುಮಂತನಗರದ ಬಿಳಿಶಿವಾಲೆಯ ಗ್ರಾಮದ ನಿರ್ಮಾಣ ಹಂತದ ಕಟ್ಟದಲ್ಲಿ ಇರಿಸಿದ್ದ 31 ವಾಚ್‌ಗಳು  ಹಾಗೂ 4 ಮೊಬೈಲ್‌ ಜಪ್ತಿ ಮಾಡಲಾಗಿದೆ. ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಬಚ್ಚಿಟ್ಟಿದ್ದ 125 ಗ್ರಾಂ ಚಿನ್ನಾಭರಣ, 1 ವಾಚ್‌ ಹಾಗೂ 2 ಸಾವಿರ ಅಮೆರಿಕನ್‌ ಡಾಲರ್‌ ಜಪ್ತಿ ಮಾಡಲಾಗಿದೆ. ಅಂತೆಯೇ ಆಟೋ ಚಾಲಕನಿಗೆ ಮಾರಾಟ ಮಾಡಿದ್ದ 45 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ ಕೊತ್ತನೂರು, ಯಲಹಂಕ, ಚಿಕ್ಕಜಾಲ, ಬಾಗಲೂರು ಸೇರಿ ಒಟ್ಟು 9 ಮನೆಗಳವು ಪ್ರಕರಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Murder-Represent

Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

6

Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

1(5)

Puttur :ಸಾಲು ಮರದ ತಿಮ್ಮಕ್ಕ ಪಾರ್ಕ್‌ ಸಾಲು ಸಾಲು ಸಮಸ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.