ಸಂಜಯನಗರದಲ್ಲಿ ಇಬ್ಬರು ಮಕ್ಕಳು ನಾಪತ್ತೆ
Team Udayavani, Oct 27, 2017, 11:03 AM IST
ಬೆಂಗಳೂರು: ಆಟವಾಡಿಕೊಂಡಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಭೂಪಸಂದ್ರ ಮುಖ್ಯರಸ್ತೆಯ 6ನೇ ಕ್ರಾಸ್ ನಿವಾಸಿಗಳಾದ ಪ್ರಶಾಂತ್, ಶೈಲಜಾ ದಂಪತಿಯ ಮಕ್ಕಳಾದ ನಮ್ರತಾ (7), ನಮಿತ್ (5) ಕಾಣೆಯಾಗಿರುವ ಮಕ್ಕಳು.
ಬುಧವಾರ ಸಂಜೆ 7.30ರ ಸುಮಾರಿಗೆ ಭೂಪಸಂದ್ರ ಮುಖ್ಯರಸ್ತೆಯ 5ನೇ ಕ್ರಾಸ್ನಲ್ಲಿ ಮಕ್ಕಳ ಅಜ್ಜ ಎಳನೀರು ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಮಕ್ಕಳೊಂದಿಗೆ ಪೇಪರ್ ಹಾರಿಸುವ ವ್ಯಕ್ತಿಯೊಬ್ಬ ಮಕ್ಕಳೊಂದಿಗೆ ಆಟವಾಡುತ್ತಿದ್ದನು ಎನ್ನಲಾಗಿದ್ದು, ಕೆಲವು ಸಮಯದ ನಂತರ ಮಕ್ಕಳೊಂದಿಗೆ ಆತನೂ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ದೃಷ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಇದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೂವರ ಮೇಲೆ ಶಂಕೆ: ಪ್ರಕರಣದ ಬಗ್ಗೆ ಮೂವರ ಬಗ್ಗೆ ಶಂಕೆ ಇದೆ. ಸಿಸಿ ಟಿವಿ ಕ್ಯಾಮರಾದಲ್ಲಿ ಕೇವಲ ಮಕ್ಕಳು ಮಾತ್ರ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಅದು ಬಿಟ್ಟರೆ ಬೇರೆ ಯಾರು ನಿಂತಿರುವ ಅಥವಾ ಓಡಾಡಿದ ದೃಶ್ಯಗಳಲ್ಲ. ಅದಾಗ್ಯೂ ಅನುಮಾನಸ್ಪದರನ್ನು ವಿಚಾರಣೆಗೊಳಪಡಿಸಲಾಗುತ್ತಿದ್ದು, ಕುಟುಂಬದ ಸದಸ್ಯರನ್ನು ಕರೆದು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.