ಕಮೀಷನರ್‌ ಸೋಗಿನಲ್ಲಿ ದೋಚುತ್ತಿದ್ದ ಇಬ್ಬರ ಸೆರೆ


Team Udayavani, Oct 20, 2017, 12:03 PM IST

Fraud-2-arrest.jpg

ಬೆಂಗಳೂರು: ರಾಜ್ಯ ಸರ್ಕಾರದ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಎಂದು ಹೇಳಿಕೊಂಡು ಖಾಸಗಿ ಕಂಪೆನಿಗಳ ಮೇಲೆ ದಾಳಿ ನಡೆಸಿ ಮೊಬೈಲ್‌ ಮತ್ತು ಟ್ಯಾಬ್‌ಗಳನ್ನು ಕಳವು ಮಾಡುತ್ತಿದ್ದ ಎಂಬಿಎ ಪದವಿಧರ ಸೇರಿದಂತೆ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಕೋಲಾರ  ಮೂಲದ ಬಿಟಿಎಂ ಲೇಔಟ್‌ ನಿವಾಸಿ ಇರ್ಫಾನ್‌ ಪಾಷಾ(30) ಮತ್ತು ಅರ್ಬಾಜ್‌ ಖಾನ್‌(21) ಬಂಧಿತರು. ಇವರಿಂದ 3 ಲಕ್ಷ ಮೌಲ್ಯದ 5 ಮೊಬೈಲ್‌ ಹಾಗೂ 1 ಟ್ಯಾಬ್‌ ಹಾಗೂ ಪೊಲೀಸರ ಸಮವಸ್ತ್ರ, ಪಿಸ್ತೂಲ್‌ ಪೌಚ್‌, ನಕಲಿ ಗುರುತಿನ ಚೀಟಿ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಪೈಕಿ ಇರ್ಫಾನ್‌ ಪಾಷಾ ಸರ್ಕಾರದ ಭದ್ರತೆ ವಿಭಾಗದ ಹೆಚ್ಚುವರಿ ಆಯುಕ್ತ ಹಾಗೂ ಆಡಳಿತ (ಇ-ಆಡಳಿತ) ಎಂಬ ನಕಲಿ ಗುರುತಿನ ಚೀಟಿ ಹೊಂದಿದ್ದು, ಕೆಲ ಖಾಸಗಿ ಕಂಪೆನಿಗಳ ಮೇಲೆ ದಾಳಿ ನಡೆಸಿ ಬೆಳೆಬಾಳುವ ವಸ್ತುಗಳನ್ನು ದೋಚುತ್ತಿದ್ದ. ಕೃತ್ಯಕ್ಕೆ ಅರ್ಬಾಜ್‌ ಖಾನ್‌ ಸಹಕಾರ ನೀಡುತ್ತಿದ್ದ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಂಬಿಎ ಪದವೀಧರನಾದ ಇರ್ಫಾನ್‌ ಪೊಲೀಸ್‌ ಇಲಾಖೆಗೆ ಸೇರಬೇಕೆಂಬ ಬಯಕೆ ಹೊಂದಿದ್ದ. ಆದರೆ, ಸಾಧ್ಯವಾಗಿರಲಿಲ್ಲ. ಕೆಲ ಬೆಂಗಳೂರಿಗೆ ಬಂದು ನಿರುದ್ಯೋಗಿಯಾಗಿದ್ದ. ಈತ ಖಾಸಗಿ ಕಂಪನಿಯಲ್ಲಿ ಬಿಪಿಓ ಕೆಲಸ ಕೊಡಿಸುತ್ತೇನೆಂದು “ಅರೇಕೋ ಸಾಫ್ಟ್ವೇರ್‌ ಸೆಲ್ಯೂಷನ್‌’ ಎಂಬ ಕಚೇರಿ ತೆರೆದು ಮೋಸ ಮಾಡುತ್ತಿದ್ದ. ಈ ಮಧ್ಯೆ ಸಹಾಯಕನಾಗಿದ್ದ ಅರ್ಬಾನ್‌ ಯೋಜನೆ ರೂಪಿಸಿ ಖಾಸಗಿ ವೇಷಭೂಷಣ ಧರಿಸಿ ಖಾಸಗಿ ಕಂಪನಿಗಳ ಮೇಲೆ ದಾಳಿ ನಡೆಸುತ್ತಿದ್ದರು ಎಂದರು.

ಜಸ್ಟ್‌ ಡಯಲ್‌, ಆಡಿ ಶೋರೂಂ ಮೇಲೆ ದಾಳಿ
ಅ.16ರಂದು ರಾತ್ರಿ 9 ಗಂಟೆ ಸುಮಾರಿಗೆ ಕೋರಮಂಗಲ 7ನೇ ಬ್ಲಾಕ್‌ನಲ್ಲಿರುವ ಜಸ್ಟ್‌ ಡಯಲ್‌ ಕಂಪೆನಿ ಮೇಲೆ ಮಫ್ತಿಯಲ್ಲಿ ಇಬ್ಬರು ದಾಳಿ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿಗೆ ಆರೋಪಿಗಳು ತಮ್ಮ ನಕಲಿ ಗುರುತಿನ ಚೀಟಿ ತೋರಿಸಿ ಕಚೇರಿಯಲ್ಲಿ ಮಾದಕ ವಸ್ತು ಮತ್ತು ಮದ್ಯ ಇಟ್ಟಿರುವ ಮಾಹಿತಿ ಇದ್ದು, ದಾಳಿ ನಡೆಸುತ್ತಿದ್ದೇವೆ ಎಂದು ಬೆದರಿಸಿದ್ದಾರೆ.

ಈ ವೇಳೆ ಕಂಪೆನಿಯಲ್ಲಿದ್ದ ಐದು ಐಷಾರಾಮಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಳವು ಮಾಡಿದ್ದರು. ಬಳಿಕ ಹೊಸೂರು ರಸ್ತೆಯ ಪರಪ್ಪನ ಅಗ್ರಹಾರದಲ್ಲಿರುವ ಆಡಿ ಶೋರೂಂ ಮೇಲೂ ಇದೇ ಮಾದರಿಯಲ್ಲಿ ದಾಳಿ ನಡೆಸಿ ಅಮೂಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.

ಸುಳಿವು ಕೊಟ್ಟ ಸಿಸಿಟಿವಿ ದೃಶ್ಯಗಳು
ಘಟನೆ ಕುರಿತು ಜಸ್ಟ್‌ಡಯಲ್‌ ಕಂಪೆನಿಯವರು ಕೋರಮಂಗಲ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಡಿಸಿಪಿ ಬೋರಲಿಂಗಯ್ಯ, ಎಸಿಪಿ ಲಕ್ಷಿ$¾àನಾರಾಯಣ ನೇತೃತ್ವದಲ್ಲಿ ತಂಡ ರಚಿಸಿ ಶೋರೂಂಗಳ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಆರೋಪಿಗಳ ಚಹರೆ ಪರಿಶೀಲಿಸಿದರು. ಬಳಿಕ ಈ ಭಾಗದ ಮೊಬೈಲ್‌ ಟವರ್‌ ಡಂಪ್‌ ಸಂಗ್ರಹಿಸಿದ್ದರು. ಈ ವೇಳೆ ಇರ್ಫಾನ್‌ ಖಾನ್‌ ಬಗ್ಗೆ ಮಾಹಿತಿ ಪತ್ತೆಯಾಗಿತ್ತು. ವಾಟ್ಸಪ್‌ ಡಿಪಿ ಚಹರೆಯಿಂದ ಆರೋಪಿಯನ್ನು ಗುರುರು ಹಚ್ಚಲಾಯಿತು.

ಡಿಪಿಎಆರ್‌ ಅಪರ ಕಾರ್ಯದರ್ಶಿ!
ಆರೋಪಿ ಇರ್ಫಾನ್‌ಪಾಷಾ ನಕಲಿ ಗುರುತಿನ ಚೀಟಿ ಹೊಂದಿದ್ದು, ಇದರಲ್ಲಿ ತನ್ನ ಕಚೇರಿಯ ವಿಳಾಸವನ್ನು ವಿಧಾನಸೌಧ ಮೊದಲ ಮಹಡಿ ಕೊಠಡಿ ಸಂಖ್ಯೆ 101 ಎಂದು ನಮೂದಿಸಿದ್ದಾನೆ. ಅಷ್ಟೇ ಅಲ್ಲದೇ, ಸರ್ಕಾರದ ಕಮಿಷನರ್‌ ಅಪರ ಕಾರ್ಯದರ್ಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಇ-ಆಡಳಿತ) ಎಂದು ನಮೂದಿಸಿ ಸ್ಥಿರ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್‌, ಪ್ಯಾಕ್ಸ್‌ ನಂಬರ್‌ ಮುದ್ರಿಸಿಕೊಂಡಿದ್ದಾನೆ.

ಈ ಹಿಂದೆ ಅನಿರೀಕ್ಷಿತ ಸಂದರ್ಭದಲ್ಲಿ ಡಿಪಿಎಆರ್‌ನ ಹಿರಿಯ ಅಧಿಕಾರಿಯೊಬ್ಬರನ್ನು ಪರಿಚಯಿಸಿಕೊಂಡಿದ್ದ ಆರೋಪಿ ಇರ್ಫಾನ್‌ ಪಾಷಾ ಅವರಿಂದ ವಿಸಿಟಿಂಗ್‌ ಕಾರ್ಡ್‌ ಪಡೆದುಕೊಂಡಿದ್ದ. ಈ ಹಿನ್ನೆಲೆ ಕಾರ್ಡ್‌ ರೂಪಿಸಿದ್ದಾನೆ ಎಂದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.