ವಾರದೊಳಗೆ ಓಲಾ- ಉಬರ್ ವಾಹನ ಚಾಲಕರ ಸಮಸ್ಯೆ ಪರಿಹಾರ
Team Udayavani, Jan 31, 2017, 12:07 PM IST
ಬೆಂಗಳೂರು: ಆ್ಯಪ್ ಆಧಾರಿತ ವಾಹನಗಳ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಾರದಲ್ಲಿ ಬಗೆಹರಿಸಲಾಗುವುದು ಎಂದು ಓಲಾ ಮತ್ತು ಉಬರ್ ಕಂಪೆನಿಗಳು ಭರವಸೆ ನೀಡಿವೆ. ನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸಾರಿಗೆ ಆಯುಕ್ತ ಎಂ.ಕೆ.ಅಯ್ಯಪ್ಪ ಹಾಗೂ ಜಂಟಿ ಆಯುಕ್ತ ಜ್ಞಾನೇಂದ್ರಕುಮಾರ್ ನೇತೃತ್ವದಲ್ಲಿ ಓಲಾ-ಉಬರ್ನೊಂದಿಗೆ ಜೋಡಣೆ ಮಾಡಿಕೊಂಡ ವಾಹನಗಳ ಚಾಲಕರ ಸಂಧಾನ ಸಭೆಯಲ್ಲಿ ಕಂಪೆನಿಗಳ ಅಧಿಕಾರಿಗಳು ಈ ಭರವಸೆ ನೀಡಿದರು.
ವಿನಾಕಾರಣ ದಂಡ ವಿಧಿಸುವುದು, ನಿತ್ಯ 18 ಟ್ರಿಪ್ ಕಡ್ಡಾಯ, ಕಂಪೆನಿಗೆ ಕರಾರು ಪತ್ರ ಮಾಡಿಕೊಂಡವರಿಗೆ ಆದ್ಯತೆ ನೀಡುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಆ್ಯಪ್ ಆಧಾರಿತ ವಾಹನಗಳ ಚಾಲಕರು ಹಾಗೂ ಮಾಲೀಕರು ಎದುರಿಸುತ್ತಿದ್ದಾರೆ. ಈ ಸಂಬಂಧ ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಈಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಕೂಡ ಮಾಡಿದ್ದರು.
ಸಚಿವರ ಸೂಚನೆ ಮೇರೆಗೆ ಸಾರಿಗೆ ಅಧಿಕಾರಿಗಳು ಆ್ಯಪ್ ಆಧಾರಿತ ಕಂಪೆನಿಗಳು ಮತ್ತು ಅವರೊಂದಿಗೆ ಭಾಗೀದಾರರಾದ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಭೆ ಕರೆದಿದ್ದರು. ಅಲ್ಲಿ ವಾರದ ಅಂತರದಲ್ಲಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಕಂಪೆನಿಗಳು ಹೇಳಿದವು. ಇದಕ್ಕೆ ಪ್ರತಿಕ್ರಿಸಿದ ಚಾಲಕರು ವಾರದಲ್ಲಿ ಬಗೆಹರಿಯದಿದ್ದರೆ, ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಶೇರ್ ಕ್ಯಾಬ್ ಇಲ್ಲ-ಆಯುಕ್ತ: ಆ್ಯಪ್ ಆಧಾರಿತ ವಾಹನಗಳು ಯಾವುದೇ ಕಾರಣಕ್ಕೂ “ಶೇರ್ ಕ್ಯಾಬ್’ಗಳ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಸಾರಿಗೆ ಆಯುಕ್ತ ಎಂ.ಕೆ.ಅಯ್ಯಪ್ಪ ಓಲಾ ಮತ್ತು ಉಬರ್ ಕಂಪೆನಿಗಳಿಗೆ ಸೂಚಿಸಿದ್ದಾರೆ. ಹಾಗೊಂದು ವೇಳೆ ಈ ವ್ಯವಸ್ಥೆ ಆರಂಭಿಸುವುದಾದರೆ, “ಸೂಕ್ತ ಕಾರಣಗಳೊಂದಿಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಬೇಕು. ನಂತರ ಸರ್ಕಾರದ ಅನುಮತಿ ಪಡೆದು ಮುಂದುವರಿಸತಕ್ಕದ್ದು’ ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.