ಹೃದಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ಅನಿವಾರ್ಯ: ಸಚಿವ ಕೆ.ಜೆ. ಜಾರ್ಜ್


Team Udayavani, Jul 8, 2023, 6:15 PM IST

ಹೃದಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ಅನಿವಾರ್ಯ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ಅನಿವಾರ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಪಾದಿಸಿದ್ದು, ಈ ತುರ್ತು ಚಿಕಿತ್ಸೆಗಳು ಕೈಗೆಟುಕುವ ದರಗಳಲ್ಲಿ ದೊರಕಬೇಕು ಎಂದರು.

ನಗರದ ಕಮ್ಮನಹಳ್ಳಿಯಲ್ಲಿರುವ ಜಿಯಾನ್ ಇನ್ಸಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕಾತ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.

ಕಮ್ಮನಹಳ್ಳಿ ವ್ಯಾಪ್ತಿಯಲ್ಲಿ ಜಿಯಾನ್ ಆಸ್ಪತ್ರೆ ಹಲವು ವರ್ಷಗಳಿಂದ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಚಿವರು, ಅತ್ಯಾಧುನಿಕ ಕಾತ್ ಲ್ಯಾಬ್‍ನೊಂದಿಗೆ ಆಸ್ಪತ್ರೆ ಸಜ್ಜುಗೊಂಡಿದ್ದು, ಇನ್ನಷ್ಟು ಮಂದಿಗೆ ಇದರಿಂದ ಸಹಾಯವಾಗಲಿದೆ ಎಂದರು.

ಇದೇ ವೇಳೆ ಮಾತನಾಡಿದ ಆಸ್ಪತ್ರೆ ನಿರ್ದೇಶಕ ರಾಧಾಕೃಷ್ಣ ಟಿ.ಪಿ, ಕಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕಾರ್ಪೂರೇಟ್ ಆಸ್ಪತ್ರೆಗಳಿಗೆ ಹೋಲಿಕೆ ಮಾಡಿದರೆ ಜಿಯಾನ್ ಆಸ್ಪತ್ರೆ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಕೈಗೆಟುಕುವ ದರಗಳಲ್ಲಿ ಚಿಕಿತ್ಸೆ ನೀಡುತ್ತಿದೆ ಎಂದರು.

ಕಾತ್ ಲ್ಯಾಬ್ ಉದ್ಘಾಟನೆಯಿಂದ ಆಸ್ಪತ್ರೆಯ ಒಂದೇ ಸೂರಿನಡಿ ಇಸಿಜಿ, ಎಕೋ, ಟಿಎಂಟಿ ಸೇರಿದಂತೆ ಹಲವು ಹೃದಯ ಸಂಬಂಧಿ ತುರ್ತು ಚಿಕಿತ್ಸೆಗೆ ಸಹಕಾರಿಯಾಗಿದೆ ಎಂದರು.

ಬದಲಾಗುತ್ತಿರುವ ಜೀವನ ಶೈಲಿ ಮತ್ತು ವಾಕಿಂಗ್ ಮಾಡದ ಪರಿಣಾಮ ಇಂದು ಲೈಫ್ ಸ್ಟೈಲ್ ರೋಗಗಳು ಎನ್ನಲಾಗುತ್ತಿರುವ ಬಿಪಿ, ಶುಗರ್ ಸಾಮಾನ್ಯವಾಗುತ್ತಿದೆ. ಅದರಲ್ಲೂ ಭಾರತದಲ್ಲಿ 42ರಿಂದ 50ರ ವಯೋಮಾನದವರಲ್ಲಿ ಹೃದಯಾಘಾತ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ ಎಂದ ಹೃದ್ರೋಗ ತಜ್ಞ ಡಾ. ರಂಗರಾಜ್, ಹೃದಯ ಸಂಬಂಧಿ ಸಮಸ್ಯೆ ಎದುರಾಗಾದ ತುರ್ತು ಚಿಕಿತ್ಸೆ ಮೂಲಕ ರೋಗಿಯನ್ನು ಕಾಪಾಡಬಹುದು. ಈ ನಿಟ್ಟಿನಲ್ಲಿ ತಮ್ಮ ಜಿಯಾನ್ ಆಸ್ಪತ್ರೆ ಅತ್ಯಾಧುನಿಕ ಕಾತ್ ಲ್ಯಾಬ್ ವ್ಯವಸ್ಥೆ ಹೊಂದಿರುವುದು ಸಂತಸ ತಂದಿದೆ ಎಂದರು.

ಸಮಾರಂಭದಲ್ಲಿ ಜಿಯಾನ್ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಆಶಾ ಜಯರಾಂ ಸೇರಿದಂತೆ ಹಿರಿಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಿತ್ರ: ಶನಿವಾರ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿರುವ ಜಿಯಾನ್ ಆಸ್ಪತ್ರೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅತ್ಯಾಧುನಿಕ ಕಾತ್ ಲಾಬ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಯಾನ್ ಇನ್ಸ್ ಟಿಟ್ಯೂಟ್ ಆಫ್ ಕಾರ್ಡಿಕ್ ಸೈನ್ಸ್ ಸಂಸ್ಥೆ ನಿರ್ದೆಶಕ ರಾಧಾಕೃಷ್ಣ, ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಆಶಾ ಜಯರಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.