ನಿರ್ದಿಷ್ಟ ಉದ್ದೇಶಕ್ಕೆ ಸಾಲದ ಹಣ ಬಳಸಿ


Team Udayavani, Jun 27, 2019, 3:05 AM IST

nirdishata

ಬೆಂಗಳೂರು: ರೈತರು ಬ್ಯಾಂಕ್‌ ಅಥವಾ ಸಹಕಾರಿ ಸಂಘಗಳಿಂದ ಪಡೆದ ಸಾಲವನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಂಡರೆ ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೋಳಿ ಅಭಿಪ್ರಾಯಪಟ್ಟರು.

ತೋಟಗಾರಿಕೆ ಇಲಾಖೆಯು ನಬಾರ್ಡ್‌ ಸಹಯೋಗದಲ್ಲಿ ನಗರದ ಐಐಎಸ್ಸಿಯ ಜೆ.ಎನ್‌.ಟಾಟಾ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತ ಉತ್ಪಾದಕರ ಸಂಸ್ಥೆಯ (ಎಫ್ಪಿಒ) ಗ್ರಾಹಕರ ಮತ್ತು ಮಾರಾಟಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸಾಲ ಮಾಡಿದ ಉದ್ದೇಶ ಮರೆತು ಬೇರೆ ಅವಶ್ಯಕತೆಗಳಿಗೆ ಖರ್ಚು ಮಾಡಿದರೆ ಸಮಸ್ಯೆ ಹೆಚ್ಚಾಗುತ್ತದೆ ಎಂದರು.

ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಒತ್ತು ನೀಡುವ ಜತೆಗೆ ಸರ್ಕಾರಿ ಸೌಲಭ್ಯಗಳನ್ನು ಅವರಿಗೆ ತಲುಪಿಸುವ ವ್ಯವಸ್ಥೆಯೂ ಆಗಬೇಕು. ಮಣ್ಣಿನ ಫ‌ಲವತ್ತತೆಗೆ ಅನುಗುಣವಾಗಿ ಬೆಳೆ ಬೆಳೆಯಲು ಬೇಕಾದ ಮಾಹಿತಿ ಮತ್ತು ಅರಿವನ್ನು ರೈತರಿಗೆ ನೀಡಬೇಕು. ದೇಶದಲ್ಲಿ ಶೇ.75ರಷ್ಟು ರೈತರಿದ್ದರೂ ಅಗತ್ಯ ಪ್ರಮಾಣದ ಆಹಾರ ಪೂರೈಕೆ ಸಾಧ್ಯವಾಗುತ್ತಿಲ್ಲ. ವಿದೇಶದಲ್ಲಿ ಶೇ.25ರಷ್ಟು ರೈತರಿದ್ದರೂ ಶೇ.75ರಷ್ಟು ಜನರಿಗೆ ಬೇಕಾದ ಆಹಾರ ಪದಾರ್ಥ ಪೂರೈಸಿ ಬೇರೆ ದೇಶಕ್ಕೂ ರಫ್ತು ಮಾಡುತ್ತಾರೆ ಎಂದರು.

ರೈತರ ಅಭಿವೃದ್ಧಿಗೆ ಭೂಮಿ, ಕೃಷಿ ಕಾರ್ಮಿಕರು, ಬಂಡವಾಳ ಹಾಗೂ ಸಂಘಟನೆ ಅತಿ ಮುಖ್ಯ. ಭೂಮಿ ಇಲ್ಲದೆ ಬೆಳೆ ಬೆಳಯಲು ಸಾಧ್ಯವಿಲ್ಲ. ಬೆಳೆಯ ಕಟಾವು ಇತ್ಯಾದಿಗೆ ಕೃಷಿ ಕಾರ್ಮಿಕರು ಅತಿ ಅಗತ್ಯ ಹಾಗೆಯೇ ಬಂಡವಾಳ ಮತ್ತು ಸಂಘಟನೆಯೂ ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ 300 ಎಫ್ಪಿಒಗಳು ಸೇವೆ ಸಲ್ಲಿಸುತ್ತಿವೆ. ರೈತರಿಗೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಬೆಳೆ ಬೆಳಯಬಹುದಾದ ಹೊಸ ಕಲ್ಪನೆಯನ್ನು ಎಫ್ಪಿಒಗಳು ನೀಡಬೇಕು ಎಂದು ಹೇಳಿದರು.

ರೈತರು ವಾಣಿಜ್ಯ ಬೆಳೆಯ ಜತೆಗೆ ವಾಣಿಜ್ಯೇತರ ಬೆಳೆಯನ್ನು ಬೆಳೆಯಬೇಕು. ಆರ್ಥಿಕ ಸುಸ್ಥಿರತೆಯ ಜತೆಗೆ ಆಹಾರ ಪದಾರ್ಥವೂ ಅಷ್ಟೇ ಮುಖ್ಯವಾಗಿರುತ್ತದೆ. ರೈತರ ಉತ್ಪಾದನಾ ಸಾಮರ್ಥ್ಯ ಹೆಚ್ಚಾದಂತೆ ದೇಶದ ಅಭಿವೃದ್ಧಿಯೂ ಆಗುತ್ತದೆ. ಬೆಳೆಗೆ ಉತ್ತಮ ಬೆಲೆ ಸಿಕ್ಕಾಗ ರೈತರು ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದರು.

ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ.ಎಂ.ವಿ.ವೆಂಕಟೇಶ್‌ ಮಾತನಾಡಿ, ರೈತರ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಆಧುನಿಕ ಉಪಕರಣಗಳ ಬಳಕೆಗೆ ಆದ್ಯತೆ ನೀಡುತ್ತಿದ್ದೇವೆ. ಇದಕ್ಕಾಗಿ ಎಫ್ಪಿಒಗಳನ್ನು ಆರಂಭಿಸಿದ್ದೇವೆ. 99 ಎಫ್ಪಿಒಗಳು ಸೇವೆ ಸಲ್ಲಿಸುತ್ತಿದ್ದು, 22 ಲಕ್ಷ ರೂ.ಗಳಂತೆ 19 ಕೋಟಿ ರೂ.ಗಳನ್ನು ಎಫ್ಪಿಒಗಳ ಅಭಿವೃದ್ಧಿಗೆ ನೀಡಿದ್ದೇವೆ. ಮಾರ್ಕೆಟ್‌ ಲಿಂಕಿಂಗ್‌ ವ್ಯವಸ್ಥೆಗೂ ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ನಬಾರ್ಡ್‌ ಡಿಜಿಎಂ ಸಿ.ವಿ.ರೆಡ್ಡಿ ಮಾತನಾಡಿ, ನಬಾರ್ಡ್‌ ಸಹಾಯಧನದಡಿ 230 ಎಫ್ಪಿಒಗಳು ಸೇವೆ ಸಲ್ಲಿಸುತ್ತಿದ್ದೇವೆ. ಎಫ್ಪಿಒಗಳ ಅವಧಿಯನ್ನು ಮೂರು ವರ್ಷದಿಂದ ಐದು ವರ್ಷಕ್ಕೆ ಏರಿಸಲು ಬೇಕಾದ ಚಿಂತನೆಯೂ ನಡೆಯುತ್ತಿದೆ ಎಂದರು.

ರಸಾಯನಿಕ ಗೊಬ್ಬರ ಬಳಸುವ ಜತೆಗೆ ಮಣ್ಣಿನ ಫ‌ಲವತ್ತತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಕೊಟ್ಟಿಗೆ ಗೊಬ್ಬರವನ್ನು ಭೂಮಿಗೆ ಹಾಕಬೇಕು. ಇದಕ್ಕಾಗಿ ಹಸು, ಮೇಕೆ ಸಾಕಬೇಕು. ಭೂಮಿ ಫ‌ಲವತ್ತಾಗಿದ್ದಾರೆ ಮಾತ್ರ ಉತ್ತಮ ಬೆಳೆ ಸಾಧ್ಯ.
-ಎಂ.ಸಿ.ಮನಗೋಳಿ, ತೋಟಗಾರಿಕೆ ಸಚಿವ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.