KSRP personnel: ಗಸ್ತು ತಿರುಗಲು ಕೆಎಸ್‌ಆರ್‌ಪಿ ಸಿಬ್ಬಂದಿ ಬಳಕೆ


Team Udayavani, Oct 19, 2023, 2:51 PM IST

tdy-10

ಬೆಂಗಳೂರು: ಶರವೇಗದಲ್ಲಿ ಬೆಳೆಯುತ್ತಿರುವ ಸಿಲಿಕಾನ್‌ ಸಿಟಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣವೇ ನಗರ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಈ ಬೆನ್ನಲ್ಲೇ ನಗರ ಪೊಲೀಸರು ಜನಸ್ನೇಹಿ ಪೊಲೀಸ್‌ ಜತೆಗೆ ಶಾಂತಿ-ಸುವ್ಯವಸ್ಥೆ ಕಾಪಾಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡಿದ್ದಾರೆ.

ಪೂರ್ವವಿಭಾಗದ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಉಪವಿಭಾಗದ 3 ಠಾಣೆಗಳ ವ್ಯಾಪ್ತಿಯಲ್ಲಿ “ಮಾಹಿತಿ ಪೆಟ್ಟಿಗೆ’ (ಇನ್‌ಫ‌ರ್ಮೇಷನ್‌ ಬಾಕ್ಸ್‌)ಗಳನ್ನು ಅಳವಡಿಸಲಾಗಿದೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಮತ್ತು ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ತಲಾ 20 ರಂತೆ 60 ಮಾಹಿತಿ ಪೆಟ್ಟಿಗೆಗಳನ್ನು ಅಳವಡಿಸಲಾಗಿದೆ. ಈ ಮಾಹಿತಿ ಪೆಟ್ಟಿಗೆಗೆ ಸಾರ್ವಜನಿಕರು ತಮ್ಮ ಸುತ್ತ-ಮುತ್ತ ನಡೆಯುವ ಅಕ್ರಮ ಚಟುವಟಿಕೆ, ಅಪರಾಧಗಳ ಬಗ್ಗೆ ಮಾಹಿತಿ ಬರೆದು, ಹೆಸರು ಉಲ್ಲೇಖೀಸದೆ ಬಾಕ್ಸ್‌ಗಳಲ್ಲಿ ಪತ್ರ ಹಾಕಬಹುದು. ಈ ಬಾಕ್ಸ್‌ಗಳ ಮೇಲುಸ್ತುವಾರಿಯನ್ನು ಠಾಣಾಧಿಕಾರಿಗಳಿಗೆ ನೀಡಲಾಗಿದ್ದು, ಪ್ರತಿ ವಾರ ಕೀ ನಿಂದ ಬಾಕ್ಸ್‌ ತೆರೆದು ದೂರು ಪತ್ರಗಳನ್ನು ಪರಿಶೀಲಿಸುತ್ತಾರೆ. ಅದರಿಂದ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚುಟವಟಿಕೆಗಳ ಸ್ಥಳದ ಮಾಹಿತಿ ಮತ್ತು ಕೆಲವೊಮ್ಮೆ ಅಪರಾಧ ಎಸಗಿದ ಆರೋಪಿಗಳ ಪತ್ತೆಗೂ ಸಹಾಯವಾಗುತ್ತದೆ. ಕಳೆದ ಒಂದೂವರೆ ತಿಂಗಳಿಂದ ಈ ಹೊಸ ಪ್ರಯೋಗ ನಡೆಯುತ್ತಿದ್ದು,  ಪೊಲೀಸರಿಗೆ ಸಾಕಷ್ಟು ಅನುಕೂಲವಾಗಿದೆ.

ಪ್ರತಿ ವಾರ ಕನಿಷ್ಠ 10-12 ದೂರುಗಳು ಅಥವಾ ಮಾಹಿತಿ ಪತ್ರಗಳು ಬರುತ್ತಿದ್ದು, ಮಾದಕ ವಸ್ತು ಮಾರಾಟ, ಸೇವನೆ, ಉದ್ದೇಶಪೂರ್ವಕವಾಗಿ ಗುಂಪುಗೂಡುವ ವಿಚಾರಗಳು ಮಾಹಿತಿ ಪೆಟ್ಟಿಗೆಯಿಂದ ದೊರೆಯುತ್ತಿದೆ. ಈ ಮೂಲಕ ಬೀಟ್‌ ಪೊಲೀಸರಿಗೂ ಹೆಚ್ಚುವರಿ ಹೊಣೆ ನೀಡಿ, ಗಸ್ತು ಹೆಚ್ಚಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕೆಎಸ್‌ಆರ್‌ಪಿ ಗಸ್ತು: 3 ವರ್ಷಗಳ ಹಿಂದೆ ಇಡೀ ದೇಶವೇ ಬೆಚ್ಚಿ ಬೀಳಿಸಿದ ಎರಡು ಅವಳಿ ಠಾಣೆಗಳ ಮೇಲಿನ ದಾಳಿ ಬೆನ್ನಲ್ಲೇ ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಈ ಸಿಬ್ಬಂದಿ ನಿತ್ಯ ಠಾಣೆ ವ್ಯಾಪ್ತಿಯಲ್ಲಿ ವಾಹನದಲ್ಲಿ ಬಂದು, ಅಲ್ಲಿಯೇ ಕೇರಂಬೋರ್ಡ್‌ ಆಡಿಕೊಂಡು ಕಾಲ ಕಳೆಯುತ್ತಿದ್ದರು. ಹೀಗಾಗಿ ಕೆಎಸ್‌ಆರ್‌ಪಿ ಸಿಬ್ಬಂದಿ ಪ್ರತಿ ನಿತ್ಯ ಸಂಜೆ 6 ಗಂಟೆಯಿಂದ 8 ಗಂಟೆ ಮತ್ತು ರಾತ್ರಿ 9 ಗಂಟೆಯಿಂದ 11 ಗಂಟೆವರೆಗೆ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಮತ್ತು ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐವೊಬ್ಬರ ನೇತೃತದಲ್ಲಿ ಕೆಲ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳ ಪ್ರತಿ ಗಲ್ಲಿಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಅದರಿಂದ ಸಾರ್ವಜನಿಕರಲ್ಲಿ ಆತ್ಮವಿಶ್ವಾಸದ ಜತೆಗೆ, ಪೊಲೀಸರ ಜತೆಗಿನ ಸಂಬಂಧವೂ ಹೆಚ್ಚಾಗುತ್ತದೆ. ಈ ರೀತಿ ಗಸ್ತು ತಿರುಗುವುದರಿಂದ ಕೆಲ ದಿನಗಳಿಂದ ಈ ಭಾಗದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ರೌಡಿ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿವೆ. ಅದರಿಂದ ಕೆಎಸ್‌ಆರ್‌ಪಿ ಸಿಬ್ಬಂದಿಗೂ ವ್ಯಾಯಾಮವಾಗುತ್ತದೆ. ಈ ಹೊಸ ಪ್ರಯೋಗಳನ್ನು ಕೆ.ಜಿ.ಹಳ್ಳಿ ಉಪವಿಭಾಗದ ಎಸಿಪಿ ಪ್ರಕಾಶ್‌ ರಾಥೋಡ್‌ ನೇತೃತ್ವದಲ್ಲಿ ಕಾರ್ಯ ನಿರ್ವ ಹಿ ಸುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸಿಟಿ ಊದುವ ಪದ್ಧತಿ ಜಾರಿಗೆ ಸಿದ್ಧತೆ:

ಈ ಹಿಂದೆ ಪೊಲೀಸ್‌ ಸಿಬ್ಬಂದಿ ಗಸ್ತು ತಿರುಗುವಾಗ ಸಿಟಿ ಊದುವುದು ಕಡ್ಡಾಯವಾಗಿತ್ತು. ಅದರಿಂದ ಕೆಲ ಆರೋಪಿಗಳಿಗೆ ಎಚ್ಚರಿಕೆ ಗಂಟೆಯಾಗಿತ್ತು. ಜತೆಗೆ ಕೆಲವರು ಅಪರಾಧ ಎಸಗುವಾಗ ಪೊಲೀಸರ ಭಯದಿಂದ ಸ್ಥಳದಿಂದ ಪರಾರಿಯಾಗುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಈ ವ್ಯವಸ್ಥೆ ಕಣ್ಮರೆಯಾಗಿದೆ. ಹೀಗಾಗಿ ಹಳೇ ಪದ್ಧತಿಯನ್ನೇ ಮತ್ತೆ ಜಾರಿಗೆ ತರಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಯಾವ ರೀತಿ? ಹೇಗೆ ಕಾರ್ಯಗತಗೊಳಿಸಬೇಕು ಎಂಬ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣಕ್ಕೆ ಸಾರ್ವಜನಿಕರಿಂದ ಮಾಹಿತಿ ಬಾಕ್ಸ್‌ಗಳ ಮೂಲಕ ಮಾಹಿತಿ ಪಡೆಯಲಾಗಿದೆ. ಜತೆಗೆ ಕೆಎಸ್‌ಆರ್‌ಪಿ ಸಿಬ್ಬಂದಿ ಜತೆ ಸ್ಥಳೀಯ ಪೊಲೀಸರ ಗಸ್ತು ತಿರುಗುತ್ತಿದ್ದಾರೆ. ಅದರಿಂದ ಅಪರಾಧ ನಿಯಂತ್ರಣ ಸಾಧ್ಯವಾಗುತ್ತಿದೆ.-ರಮಣ್‌ ಗುಪ್ತಾ, ಪೂರ್ವವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.