ತ್ಯಾಜ್ಯ ಪುಡಿಗಟ್ಟಲು ಯಂತ್ರಗಳ ಬಳಕೆ


Team Udayavani, Jun 24, 2019, 3:09 AM IST

tyaajya

ಬೆಂಗಳೂರು: ನಗರದಲ್ಲಿ ದೊಡ್ಡ ಮಟ್ಟದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಸತ್ತ ಪ್ರಾಣಿಗಳ ತ್ಯಾಜ್ಯ (ಮಾಂಸ) ಮತ್ತು ಮರದ ಎಲೆ ತ್ಯಾಜ್ಯ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕೆ ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಪ್ರಾಣಿ ಮಾಂಸ ತ್ಯಾಜ್ಯ ಸಂಸ್ಕರಣೆ ಹಲವು ವರ್ಷಗಳಿಂದ ಕಗ್ಗಂಟಾಗೇ ಉಳಿದಿದೆ.

ಮತ್ತು ಬಿದ್ದ ಮರಗಳನ್ನು ತೆರವು ಮಾಡುವುದಕ್ಕೆ ಹೆಚ್ಚು ಸಮಯ ಮತ್ತು ಹಣವೂ ವ್ಯಯವಾಗುತ್ತಿದೆ. ಬಿದ್ದ ಮರದ ತ್ಯಾಜ್ಯವನ್ನು ವಾರ್ಡ್‌ಗಳ ಪಾರ್ಕ್‌ನಲ್ಲೇ ಶೆಟರ್ಯಂತ್ರ (ಮರದ ಎಲೆ ಮತ್ತು ಹಸಿಕಸವನ್ನು ಗೊಬ್ಬರವನ್ನಾಗಿ ಪರಿರ್ವತಿಸುವ ಯಂತ್ರ) ಅಳವಡಿಸಲು ಬಿಬಿಎಂಪಿ ಮುಂದಾಗಿದೆ.

ಅದೇ ರೀತಿಯಲ್ಲಿ ಪ್ರಾಣಿ ತ್ಯಾಜ್ಯ ಸಂಸ್ಕರಿಸಲು ರೆಂಡರಿಂಗ್‌ಯಂತ್ರ (ತ್ಯಾಜ್ಯವನ್ನು ಪುಡಿಮಾಡುವ ಸಾಧನ) ಅಳವಡಿಸಲು ಯೋಜನೆ ರೂಪಿಸುತ್ತಿದೆ. ಬಿದ್ದ ಮರದ ಎಲೆ ಮತ್ತು ರಂಬೆಕೊಂಬೆಗಳನ್ನು ತೆರವು ಮಾಡುವುದಕ್ಕೆ ತ್ಯಾಜ್ಯ ನಿರ್ವಹಣೆಯ ವಾಹನವನ್ನೇ ಬಳಸಲಾಗುತ್ತಿದ್ದು, ತೆರವು ಮಾಡುವುದಕ್ಕೆ ತಡವಾಗುತ್ತಿದೆ.

ಮರದ ತುಂಡನ್ನು ತೆರವು ಮಾಡಿದರೆ ಉಳಿದ ತ್ಯಾಜ್ಯವನ್ನು ಲಾರಿಗಳಲ್ಲಿ ತುಂಬಿಸಲು ಸಾಧ್ಯವಿಲ್ಲ ಮತ್ತು ಅದು ತೂಕವೂ ಇರುವುದರಿಂದ ರಸ್ತೆ ಬದಿಯಲ್ಲಿ ಒಂದೆರಡು ದಿನ ಉಳಿಸಿ ಮರದ ತುಂಡಿನ ತೂಕ ಕಡಿಮೆಯಾದ ಮೇಲೆ ಪೌರಕಾರ್ಮಿಕರು ಅದನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.

ಆದರೆ, ಈ ವೇಳೆಗಾಗಲೇ ಮರ ಬಿದ್ದಿರುವ ಜಾಗದಲ್ಲೇ ಸಾರ್ವಜನಿಕರು ತ್ಯಾಜ್ಯವನ್ನೂ ಸುರಿಯುತ್ತಿರುವುದರಿಂದ ಇದು ಬಿಬಿಎಂಪಿಗೆ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ, ಶೆಟರ್ ಯಂತ್ರವನ್ನು ಪಾರ್ಕ್‌ಗಳಲ್ಲಿ 10ರಿಂದ 15 ಅಡಿ ಜಾಗದಲ್ಲಿ ಅಳವಡಿಸಲು ಮುಂದಾಗಿದ್ದು, ಜಾಗ ಸೂಚಿಸುವಂತೆ ಪಾಲಿಕೆ ಸದಸ್ಯರನ್ನು ಕೇಳಲಿದೆ. ಘನ ತ್ಯಾಜ್ಯ ನಿರ್ವಾಹಣೆಗೆ ಇರುವ ವೆಚ್ಚದಲ್ಲೇ ಯಂತ್ರವನ್ನು ಅಳವಡಿಸಲಿದ್ದು, ಇದಕ್ಕೆ 12 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಪ್ರಾಣಿ ತ್ಯಾಜ್ಯಕ್ಕೆ ರೆಂಡರಿಂಗ್‌ ಯಂತ್ರ: ಕೋಳಿ, ಮೀನು, ಕುರಿ ಮತ್ತು ದನದ ಮಾಂಸದ ತ್ಯಾಜ್ಯ ವಿಲೇವಾರಿ ಬಹುವರ್ಷಗಳಿಂದ ಕಗ್ಗಂಟಾಗೇ ಉಳಿದಿದೆ. ಕೋಳಿ ಮಾಂಸ ತ್ಯಾಜ್ಯವನ್ನು ಮೂಟೆಗಳಲ್ಲಿ ತುಂಬಿ ರಾಜಕಾಲುವೆ, ಕೆರೆ, ರಿಂಗ್‌ರೋಡ್‌ ಬದಿ ಮತ್ತು ಖಾಲಿ ಜಾಗಗಳಲ್ಲಿ ಎಸೆಯುತ್ತಿರುವುದರಿಂದ ಹಲವು ಸಮಸ್ಯೆಗಳು ಉಂಟಾಗುತ್ತಿವೆ.

ಮಾಂಸ ತ್ಯಾಜ್ಯವನ್ನು ರಾಜಕಾಲುವೆಗಳಲ್ಲಿ ಎಸೆಯುವುದರಿಂದ ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವುದಕ್ಕೆ ತಡೆಯಾಗುತ್ತಿದೆ. ಕೆರೆ ಮತ್ತು ಖಾಲಿ ಜಾಗದಲ್ಲಿ ಮಂಆಸ ತ್ಯಾಜ್ಯ ಎಸೆಯುತ್ತಿರುವ ಕಾರಣ, ನಗರದ ಹಲವು ಪ್ರದೇಶಗಳಲ್ಲಿ ಜನ ಮೂಗು ಮುಚ್ಚಿಕೊಂಡೇ ನಡೆದಾಡಬೇಕಾದ ಪರಿಸ್ಥಿತಿ ಇದೆ.

ಮಾಂಸದ ಅಂಗಡಿಗಳ ಮಾಲೀಕರ ನಿರ್ಲಕ್ಷ್ಯ ಮತ್ತು ಪರ್ಯಾಯ ವ್ಯವಸ್ಥೆಯ ಕೊರತೆಯಿಂದ ಪರೋಕ್ಷವಾಗಿ ನಾಯಿಗಳು ವ್ಯಾಘ್ರ ರೂಪತಾಳುವುದಕ್ಕೂ ಕಾರಣವಾಗುತ್ತಿದೆ. ಕೊನೆಗೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳವಲ್ಲಿ ಬಿಬಿಎಂಪಿ ಮೊದಲ ಹೆಜ್ಜೆ ಇಟ್ಟಿದೆ. ನಗರದ ನಾಲ್ಕು ಕಡೆ ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ರೆಂಡರಿಂಗ್‌ಯಂತ್ರ ಅಳವಡಿಸುವ ಬಗ್ಗೆ ಚಿಂತನೆ ನಡೆದಿದೆ. ಪ್ರತ್ಯೇಕ ಟೆಂಡರ್‌ ಪ್ರಕ್ರಿಯೆ ಮೂಲಕ ಯಂತ್ರಗಳನ್ನು ಖರೀದಿಸುವ ಬಗ್ಗೆಯೂ ಚಿಂತನೆ ನಡೆದಿದೆ.

ರೆಂಡರಿಂಗ್‌ಯಂತ್ರದಿಂದ ಬಿಬಿಎಂಪಿಗೆ ಹೆಚ್ಚುವರಿ ವೆಚ್ಚ ಆಗದಂತೆ ಯೋಜನೆ ರೂಪಿಸಲಾಗುತ್ತಿದೆ. ಇದರ ನಿರ್ವಾಹಣೆ ವೆಚ್ಚವನ್ನು ಮಾಂಸದ ಅಂಗಡಿ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು. ಯಂತ್ರಗಳನ್ನು ಅಳವಡಿಸುವುದರಿಂದ ಸಮಸ್ಯೆಗೆ ಮುಕ್ತಿ ಸಿಗಲಿದೆ.
-ರಂದೀಪ್‌, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

ಶಟರ್ ಮತ್ತು ರೆಂಡರಿಂಗ್‌ಯಂತ್ರಗಳನ್ನು ಅಳವಡಿಸುವುದರಿಂದ ಮರದ ರಂಬೆಕೊಂಬೆ ತ್ಯಾಜ್ಯ ಮತ್ತು ಪ್ರಾಣಿ ತ್ಯಾಜ್ಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇದನ್ನು ಮುಂದೆ ಗೊಬ್ಬರವಾಗಿಯೂ ಬಳಸಿಕೊಳ್ಳಬಹುದು.
-ಗಂಗಾಂಬಿಕೆ ಮಲ್ಲಿಕಾರ್ಜುನ್‌, ಬಿಬಿಎಂಪಿ ಮೇಯರ್‌

* ಹಿತೇಶ್‌ ವೈ

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.