ವಿಕ್ರಂ ವಂಚನೆ ಸೂತ್ರದಾರ 13 ದಿನ ಪೊಲೀಸ್ ಕಸ್ಟಡಿಗೆ
Team Udayavani, Apr 10, 2018, 12:21 PM IST
ಬೆಂಗಳೂರು: ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣದ ಆರೋಪಿ ಸೂತ್ರಂ ಸುರೇಶ್ಗೆ 13 ದಿನಗಳ ಕಾಲ ಜಯನಗರ ಪೊಲೀಸರ ವಶಕ್ಕೆ ಆದೇಶಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಮಾನ್ಯ ಮಾಡಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣದ ಎಫ್ಐಆರ್ನಲ್ಲಿ ಹೆಸರು ಉಲ್ಲೇಖವಿಲ್ಲದಿದ್ದರೂ ತನಿಖೆ ಭಾಗವಾಗಿ ಪೊಲೀಸ್ ವಶಕ್ಕೆ ಆದೇಶಿಸಿದ್ದ ಅಧೀನ ನ್ಯಾಯಾಲಯದ ಆದೇಶ ರದ್ದುಕೋರಿ ಸೂತ್ರಂ ಸುರೇಶ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿತು.
ಪ್ರಕರಣದ ತನಿಖೆ ಸಲುವಾಗಿ ಅಧೀನ ನ್ಯಾಯಾಲಯದ ಆದೇಶ ಸೂಕ್ತವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ವಿಕ್ರಂ ಇನ್ವೆಸ್ಟ್ಮೆಂಟ್ ಕಂಪೆನಿ ಮಾಲೀಕ ರಾಘವೇಂದ್ರ ಶ್ರೀನಾಥ್ ಸೇರಿದಂತೆ ಮತ್ತಿತರರು 3.78 ಕೋಟಿ ರೂ ವಂಚಿಸಿದ್ದಾರೆ ಎಂದು ಆರೋಪಿಸಿ ಡಾ. ಬೃಂದಾ ಚನ್ನಪ್ಪ ಜಯನಗರ ಠಾಣೆಯಲ್ಲಿ ದೂರು ನೀಡಿದ್ದರು.
ಆದರೆ, ಪ್ರಕರಣದ ಎಫ್ಐಆರ್ನಲ್ಲಿ ಸೂತ್ರಂ ಸುರೇಶ್ ಹೆಸರಿರಲಿಲ್ಲ. ಪ್ರಕರಣದ ಹೆಚ್ಚಿನ ತನಿಖೆಯ ಸಲುವಾಗಿ ಹಗರಣದ ಆರೋಪಿ ಸೂತ್ರಂ ಸುರೇಶ್ರನ್ನು ವಶಕ್ಕೆ ನೀಡುವಂತೆ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ 13 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಏಪ್ರಿಲ್ 2ರಂದು ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.