ಕೋವಿಡ್ ನಿಯಮ ಉಲ್ಲಂಘನೆ : 6 ದಿನದಲ್ಲಿ 4 ಕೋಟಿ ದಂಡ ಸಂಗ್ರಹ

ಪೊಲೀಸರ ಕಾರ್ಯಾಚರಣೆ, ಇತ್ತೀಚೆಗೆ ಅತಿಹೆಚ್ಚು ವಸೂಲಿ ಮಾಡಿದ ಮೊತ್ತವಿದು

Team Udayavani, Oct 13, 2020, 11:41 AM IST

bng-tdy-1

ಬೆಂಗಳೂರು: ಕೋವಿಡ್‌ ಕಾರಣದಿಂದ ಸಂಚಾರ ನಿಯಮಗಳ ಉಲ್ಲಂಘನೆ ಮೇಲೆ ಸ್ವಲ್ಪ ಮಟ್ಟಿಗೆ ಗುರಿಯಿಡುವುದನ್ನು ನಿಲ್ಲಿಸಿದ್ದ ನಗರ ಸಂಚಾರ ಪೊಲೀಸರು ಪುನಃ ಬಿರುಸಿನ ಕಾರ್ಯಾಚರಣೆ ಆರಂಭಿಸಿದ್ದಾರೆ.

ಕೇವಲ 6 ದಿನಗಳ ಕಾರ್ಯಾಚರಣೆಯಲ್ಲಿ 83 ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ 97213 ಪ್ರಕರಣ ದಾಖಲಿಸಿ ಕೊಂಡಿರುವ ಸಂಚಾರ ಪೊಲೀಸರು, ಬರೋಬ್ಬರಿ 4.02 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ದಂಡವನ್ನು ವಸೂಲಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವಸೂಲಿ ಮಾಡಿದ ದಂಡದ ಮೊತ್ತ ಇದಾಗಿದೆ.

ಅ.4ರಿಂದ 10ರವರೆಗೆ ಪೊಲೀಸರು ದಾಖಲಿಸಿರುವ ಸಂಚಾರ ನಿಯಮಗಳ ಉಲ್ಲಂಘನೆ ಕೇಸ್‌ಗಳಲ್ಲಿ ಹೆಲ್ಮೆಟ್‌ ರಹಿತ ವಾಹನ ಚಾಲನೆ ಸಿಂಹಪಾಲು ಪಡೆದಿದೆ. ಬರೋಬ್ಬರಿ 30712 ಕೇಸ್‌ ಗಳು ಬೈಕ್‌ ಸವಾರ ಹೆಲ್ಮೆಟ್‌ ರಹಿತ ಚಾಲನೆ ಮಾಡಿದ್ದು, ಹಿಂಬದಿ ಸವಾರ ಹೆಲ್ಮೆಟ್‌ ಧರಿಸದ ಸಂಬಂಧ 19403 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಸೀಟ್‌ಬೆಲ್ಟ್ ಧರಿಸದ ಸಂಬಂಧ 5 ಸಾವಿರಕ್ಕೂ ಅಧಿಕಕೇಸ್‌, ನೋ ಪಾರ್ಕಿಂಗ್‌ ಸ್ಥಳದಲ್ಲಿ ವಾಹನ ನಿಲುಗಡೆ ಸಂಬಂಧ 3ಸಾವಿರಕ್ಕೂ ಅಧಿಕ ಕೇಸ್‌ ದಾಖಲಿಸಿದ್ದಾರೆ.

ಡ್ರಂಕ್‌ ಡ್ರೈವ್‌ ಒಂದೇ ಕೇಸ್‌!: ಕೋವಿಡ್ ಭೀತಿ ಹಿನ್ನೆಲೆಯಲ್ಲಿ “ಡ್ರಂಕ್‌ ಅಂಡ್‌ ಡ್ರೈವ್‌) ವಿಶೇಷ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಬಹುತೇಕ 6 ತಿಂಗಳಿನಿಂದ ಈ ಕಾರ್ಯಾಚರಣೆಗೆ ಬ್ರೇಕ್‌ ಬಿದ್ದಿದೆ. ಹೀಗಿದ್ದರೂ ಈ ವಾರದ ಕಾರ್ಯಾಚರಣೆಯಲ್ಲಿ ಡ್ರಕ್‌ ಅಂಡ್‌ ಡ್ರೈವ್‌ ಕೇಸ್‌ಕೂಡ ಒಂದು ದಾಖಲಾಗಿದೆ.

5.12 ಕೋಟಿ ರೂ.ವೆಚ್ಚದಲ್ಲಿ ವಾರ್‌ ರೂಂ :

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿ ಆವರಣದಲ್ಲಿ ಕೋವಿಡ್‌-19 ವಾರ್‌ ರೂಂ ಸ್ಥಾಪನೆಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‌ನಲ್ಲಿ ಪ್ರೋ ಡಿಜಿಟಲ್‌ ಲ್ಯಾಬ್ಸ್ ಪ್ರೈ.ಲಿ., ಅತಿ ಕಡಿಮೆ ಬಿಡ್‌ ಮಾಡಿದ್ದು, 5.12 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲು ಮುಂದೆ ಬಂದಿದೆ. ವಾರ್‌ ರೂಂ ನಿರ್ಮಿಸುವ ಸಂಬಂಧ ಒಟ್ಟು ಮೂರು ಕಂಪನಿಗಳು ಭಾಗವಹಿಸಿದ್ದವು. ಇದರಲ್ಲಿ ಅತುರಿ ಆಂಡ್‌ ಕಂಪನಿಯು 8.09 ಕೋಟಿ ಹಾಗೂ ಸಾಂಘ್ವಿ ಕಾಂಪ್ಲೆಕ್ಸ್‌ ಸಂಸ್ಥೆ 6.73 ಕೋಟಿ ರೂ. ಅಂದಾಜು ಮೊತ್ತ ನಮೂದಿಸಿತ್ತು. ಪ್ರೋ ಡಿಜಿಟಲ್‌ ಲ್ಯಾಬ್ಸ್ ಅತಿ ಕಡಿಮೆ ಮೊತ್ತ ನಮೂದಿಸಿದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ಕಾರ್ಯಾದೇಶ ನೀಡಲು ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ.

ನಗರದಲ್ಲಿ ತೀವ್ರವಾಗಿರುವ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಈ ವಾರ್‌ ರೂಂ ಕಾರ್ಯನಿರ್ವಹಿಸಲಿದೆ. ಸೋಂಕಿತರು, ಸಂಶಯಾಸ್ಪದಸೋಂಕಿತರು,ಸಂಪರ್ಕಿತರ ವಿಳಾಸ ಮತ್ತು ಸಂಬಂಧಿಸಿದ ಸಂಪೂರ್ಣ ವಿವರ, ಸೋಂಕಿತರ ಪ್ರದೇಶದ ಹತ್ತಿರ ಇರುವ ಆಸ್ಪತ್ರೆಗಳ ಮಾಹಿತಿಯನ್ನು ಜಿಐಎಸ್‌ನಲ್ಲಿ ಅಳವಡಿಸುವುದು ಮತ್ತಿತರ ಅಗತ್ಯ ಮಾಹಿತಿ ಸಂಗ್ರಹ ವಾರ್‌ ರೂಂ ಮೂಲಕ ಆಗಲಿದೆ.

5,764 ಮಂದಿ ಕೋವಿಡ್ ದಿಂದ ಗುಣಮುಖ :

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆ ಆಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಹಾಗೆಯೇ ಸಾವಿನ ಸಂಖ್ಯೆಯಲ್ಲಿಕೊಂಚ ಇಳಿಕೆಯಾಗಿದೆ.

ಸೋಮವಾರ 5,764 ಮಂದಿ ಕೋವಿಡ್‌-19 ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆ, ಆರೈಕೆ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದಾರೆ.ಈ ಮೂಲಕ ಸೋಂಕಿನಿಂದ ಗುಣಮುಖರಾಗಿ ಮನೆ ಸೇರುತ್ತಿರುವವರ ಸಂಖ್ಯೆ 2,17,122ಕ್ಕೆ ಏರಿಕೆ ಆಗಿದೆ.ಹಾಗೆಯೇ ಪುರು ಷರು, ಮಹಿಳೆಯರು ಸೇರಿ 18 ಮಂದಿ ಸಾವನ್ನಪ್ಪಿದ್ದು ಒಟ್ಟಾರೆ ಸಾವಿಗೀಡಾದವರ ಸಂಖ್ಯೆ 3,362ಕ್ಕೆ ಏರಿಕೆ ಆಗಿದೆ. ಜತೆಗೆ 3,498 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಕೋವಿಡ್‌-19 ಸೋಂಕಿತರ ಸಂಖ್ಯೆ 2,85,055ಕ್ಕೆ ಏರಿದೆ. ಪ್ರಸ್ತುತ 64,570 ಸಕ್ರಿಯ ಪ್ರಕರಣಗಳಿದ್ದು ಅವರೆಲ್ಲಾ ನಗರದವಿವಿಧಆಸ ³ತ್ರೆಗಳಿಗೆ ದಾಖಲಾಗಿ ಆರೈಕೆ ಪಡೆಯುತ್ತಿದ್ದಾರೆ. ಹಾಗೆಯೇ 346 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.