![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 8, 2020, 12:30 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ವಿಧನಾ ಸಭಾ ಕ್ಷೇತ್ರ ಹಾಗೂ ವಾರ್ಡ್ಗಳ ವಿಶೇಷ ಅಭಿವೃದ್ಧಿಗೆ ಮೀಸಲಿಡಲಾಗಿದ್ದ ಅನುದಾನ ಮರು ಹಂಚಿಕೆ ಮಾಡಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಈ ಸಂಬಂಧ ಮುಂದಿನ ಕ್ರಮಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಕೊರೊನಾ ಹಿನ್ನೆಲೆ ಆನ್ ಲೈನ್ ಶಿಕ್ಷಣ ಪ್ರಾರಂಭಿಸಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ 5ರಿಂದ 10ನೇ ತರಗತಿವರೆಗಿನ ಬಡ ಮಕ್ಕಳಿಗೆ ಟ್ಯಾಬ್ ನೀಡುವುದು, ಉನ್ನತ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲು ಪಾಲಿಕೆಯಲ್ಲಿ ಸ್ವ- ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದಕ್ಕೆ ಪಾಲಿಕೆಯ ವಿಶೇಷ ಅಭಿವೃದ್ಧಿ ಅನುದಾನ ಬಳಸಲು ಮುಂದಾಗಿರುವುದು ಅನುದಾನ ಬಳಕೆ ಉದ್ದೇಶದ ನಿಯಮ ಉಲ್ಲಂಘನೆಯಾಗುತ್ತದೆ. ವಿಶೇಷ ಅಭಿವೃದ್ಧಿಗೆ ಮೀಸಲಿಡುವ ಅನುದಾನ ನಿರ್ದಿಷ್ಟ ಕಾಮಗಾರಿಗೆ ಬಳಸದೆ ಟ್ಯಾಬ್ ಹಾಗೂ ಲ್ಯಾಪ್ಟಾಪ್ ಖರೀದಿಗೆ ಜಾಬ್ಕೋಡ್ ನೀಡಲಾಗಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯು ಅನುದಾನವನ್ನು ವಾರ್ಡ್ಗಳಿಗೆ ಮರುಹಂಚಿಕೆ ಮಾಡಿ ಸುಮೋಟೋನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದು ಸ್ಪಷ್ಟ ನಿಯಮ ಉಲ್ಲಂಘನೆ ಆಗಿದ್ದು, ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲು ಸರ್ಕಾರದಿಂದ ಸೂಕ್ತ ನಿರ್ದೇಶನವನ್ನು ಆಯುಕ್ತರು ಪತ್ರದಲ್ಲಿ ಕೋರಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರ ಹೆಸರಿನಲ್ಲಿ ಪ್ರತಿ ವಾರ್ಡ್ ಗೆ 15 ಲ್ಯಾಪ್ಟಾಪ್ ವಿತರಿಸಲು 15 ಕೋಟಿ ರೂ.ಗೆ ಅನುಮೋದನೆ ನೀಡಿ 1.25 ಕೋಟಿ ರೂ. ಮೀಸಲಿಡಲಾಗಿತ್ತು. ಅದನ್ನು ಮೇಲಿನ ಉದ್ದೇಶಕ್ಕೆ ಬಳಸಿಕೊಳ್ಳಬಹುದಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಬಜೆಟ್: ಪಾಲಿಕೆ ಪ್ರತಿ ವರ್ಷ ತನ್ನ ಆದಾಯ ಮೂಲಕ್ಕಿಂತ ಹೆಚ್ಚು ಬಜೆಟ್ ಮಂಡನೆ ಮಾಡುತ್ತಿರುವ ಬಗ್ಗೆಯೂ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆಯೂ ಆದಾಯಕ್ಕಿಂತ ಹೆಚ್ಚು ಬಜೆಟ್ ಮಂಡನೆ ಆಗಿರುವ ಬಗ್ಗೆ ಹಾಗೂ ಅದರಿಂದ ಪಾಲಿಕೆಗೆ ಉಂಟಾಗಬಹುದಾದ ಆರ್ಥಿಕ ಸಂಕಷ್ಟದ ಬಗ್ಗೆ ವಿವರಣೆ ನೀಡಿದ್ದರು. ಈ ಬಾರಿ ಬರೆದ ಪತ್ರದಲ್ಲೂ ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಅಲ್ಲದೆ, ಕೋವಿಡ್ ಸಂಕಷ್ಟದ ಸ್ಥಿತಿಯಲ್ಲಿ ಅನುದಾನಕ್ಕೆ ಅನುಗು ಣವಾಗಿ ಕಾಮಗಾರಿ ಗಳಿಗೆ ಜಾಬ್ಕೋಡ್ ಪಡೆದು, ಗುತ್ತಿಗೆದಾರರಿಗೆ ಪಾವತಿಸಬೇಕ ಗಿರುವ ಬಿಲ್ಗಳ ಅಂತರ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ. ಜತೆಗೆ ಪಾಲಿಕೆ ಸ್ವಂತ ಆದಾಯ, ಕೇಂದ್ರ- ರಾಜ್ಯ ಸರ್ಕಾರಗಳ ಆದಾಯ, ಇವುಗಳ ಖರ್ಚು ( ಸ್ವೀಕೃತಿ ಹಾಗೂ ವೆಚ್ಚ) ಬಗ್ಗೆಯೂ ಆಯುಕ್ತರು ವಿವರಣೆ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.