Viral fever: ರಾಜಧಾನಿಯಲ್ಲೀಗ ವೈರಲ್‌ ಫೀವರ್‌ ಕಾಟ


Team Udayavani, Oct 31, 2023, 11:06 AM IST

Viral fever: ರಾಜಧಾನಿಯಲ್ಲೀಗ ವೈರಲ್‌ ಫೀವರ್‌ ಕಾಟ

ಬೆಂಗಳೂರು: ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿ ರುವ ನಡುವೆ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ವೈರಲ್‌ ಫೀವರ್‌ ಬಿಟ್ಟು ಬಿಡದೇ ಕಾಡುತ್ತಿದೆ.

ಸಾಮಾನ್ಯವಾಗಿ ವೈರಲ್‌ ಫೀವರ್‌ ಪ್ರಕರಣ ಗಳು ಜೂನ್‌-ಸೆಪ್ಟೆಂಬರ್‌ ತಿಂಗಳಲ್ಲಿ ವರದಿ ಯಾಗಿ, ಅಕ್ಟೋಬರ್‌ ಅಂತ್ಯಕ್ಕೆ ಕೊನೆಯಾಗುತ್ತದೆ. ಆದರೆ, ಈ ಬಾರಿ ಬೆಂಗಳೂರು ನಗರದಲ್ಲಿ ಬಿಸಿಲು ಹಾಗೂ ಚಳಿ, ಮಳೆಯ ಜತೆಯಾಟದಿಂದ ಮಳೆಗಾಲದ ಮುಕ್ತಾಯದ ಬಳಿಕವೂ ವೈರಲ್‌ ಫೀವರ್‌ ಅಬ್ಬರ ಹೆಚ್ಚಾಗಿದೆ. ಕುಟುಂಬ ಸದಸ್ಯನೊಬ್ಬನಿಗೆ ಕಾಣಿಸಿಕೊಂಡ ಜ್ವರ-ಶೀತ ಬಳಿಕ ಒಬ್ಬೊಬ್ಬರಿಗೆ ಹರಡುತ್ತಿದೆ.

ವೈರಾಣು ಲಕ್ಷಣಗಳೇನು?: ಈ ವೈರಾಣು ಜ್ವರಕ್ಕೆ ತುತ್ತಾದ ವರಿಗೆ 3ರಿಂದ 5ದಿನಗಳ ವರೆಗೆ ವಿಪರೀತ ಚಳಿ ಜ್ವರ, ನೆಗಡಿ, ಕೆಮ್ಮು, ತಲೆ ನೋವು, ಮೈ ಕೈ ನೋವು, ಸ್ನಾಯು ಸೆಳೆತ, ಗಂಟು ಗಳಲ್ಲಿ ನೋವು, ಉಸಿರಾಟದಲ್ಲಿ ತೊಡಕು, ವಾಂತಿ ಭೇದಿ, ಹೊಟ್ಟೆ ನೋವು, ಕಣ್ಣಿನಲ್ಲಿ ನೀರು ಸೋರಿಕೆ ಹಾಗೂ ಕಣ್ಣು ಕೆಂಪಾ  ಗುವುದು ವೈರಲ್‌ ಫೀವರ್‌ ಲಕ್ಷಣವಾಗಿದೆ. ಮೇಲ್ನೋಟಕ್ಕೆ ಕೋವಿಡ್‌, ಡೆಂಘೀ ಲಕ್ಷಣಗಳಾಗಿ ಕಂಡು ಬರುತ್ತಿದ್ದರೂ, ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್‌ ವರದಿ ದಾಖಲಾಗುತ್ತಿದೆ. ಜ್ವರದ ಜತೆ ನೆಗಡಿಯೂ ಇರುವ ಕಾರಣ ಸೀನುವ ಸಂದರ್ಭ ಇಡೀ ಪರಿಸರದಲ್ಲಿ ಜ್ವರದ ವೈರಸ್‌ ಹರಡುತ್ತಿದೆ.

ಅಪಾಯವೇನು?: ವೈರಾಣು ಜ್ವರ ಸಾಮಾನ್ಯ ವಾಗಿ 3 ರಿಂದ 5ದಿನದೊಳಗೆ ಕಡಿಮೆಯಾಗುತ್ತದೆ. ಇದು ಜೀವಕ್ಕೆ ಹಾನಿ ಮಾಡದ ಜ್ವರ. ಆದರೆ, ಬೇರೆ ಬೇರೆ ಅನಾರೋಗ್ಯದಿಂದ ಬಳಲುತ್ತಿರುವ ವರು ಈ ವೈರಾಣು ಜ್ವರಕ್ಕೆ ತುತ್ತಾಗಿ ಸರಿಯಾದ ಸಮಯಕ್ಕೆ ವೈದ್ಯರಿಂದ ಚಿಕಿತ್ಸೆ ಪಡೆಯದೇ ಹೋದರೆ ಮರಣ ಸಂಭವಿಸುವ ಸಾಧ್ಯಗಳಿವೆ. ಈ ವೈರಾಣುಗೆ ತುತ್ತಾದ ಮಕ್ಕಳಲ್ಲಿ ಆರ್‌ಎಸ್‌ವಿ (ಉಸಿ ರಾಟದ ಸೆನ್ಸಿಟಿಯಲ್‌ ವೈರಸ್‌) ದೃಢ ವಾಗುತ್ತಿದ್ದು, ಸೋಂಕು ಉಲ್ಬಣಿಸಿದರೆ ವೈರಲ್‌ ನ್ಯುಮೊನಿಯಾಗೆ ಪರಿವರ್ತನೆ ಯಾಗಲಿದೆ.

ಕ್ಲಿನಕ್‌ಗಳ ಮುಂದೆ ಕ್ಯೂ: ನಗರದ ಖಾಸಗಿ ಕ್ಲಿನಿಕ್‌ಗಳಲ್ಲಿ ಕಳೆದ 10 ದಿನ  ಗಳಿಂದ ಜ್ವರಕ್ಕೆ ಔಷಧಕ್ಕೆಂದು ಬರುತ್ತಿರು ವವರ ಪ್ರಮಾಣ ಹೆಚ್ಚಿದೆ. ಇನ್ನೂ ನಗರದ ಸರ್ಕಾರಿ ಆಸ್ಪತ್ರೆಗಳಾದ ಕೆಸಿ ಜನರಲ್‌, ಬೌರಿಂಗ್‌ ಹಾಗೂ ವಿಕ್ಟೋರಿಯಾ ಆಸ್ಪತ್ರೆ, ನಮ್ಮ ಕ್ಲಿನಿಕ್‌ಗಳ ಒಪಿಡಿ ರೋಗಿಗಳ ಸಂಖ್ಯೆ ಏರಿಕೆ ಕಂಡು ಬಂದಿದೆ.

ಮೆಡಿಕಲ್‌ ಮೊರೆ: ವೈರಲ್‌ ಫೀವರ್‌ ಕಾಣಿಸಿ ಕೊಳ್ಳುತ್ತಿ ರುವುದರಿಂದ ಅನೇಕರು ವೈದ್ಯರ ಬಳಿಗೆ ಹೋಗದೇ ಮೆಡಿಕಲ್‌ಗ‌ಳಿಗೆ ತೆರಳಿ ಸ್ವಯಂ ಔಷಧ ಪಡೆದುಕೊಳ್ಳುತ್ತಿರುವುದು ಹೆಚ್ಚಾಗು ತಿ ¤ದೆ. ಇದರಿಂದ ಬೇರೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚಿವೆ.

ಮುನ್ನೆಚ್ಚರಿಕೆ ಕ್ರಮಗಳೇನು?:

ಕಡ್ಡಾಯ ಮಾಸ್ಕ್ ಧಾರಣೆ

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು

 ಕೈಗಳನ್ನು ಸ್ಯಾನಿಟೈಸ್‌ಗೆ ಒಳಪಡಿಸಬೇಕು

 ಹೆಚ್ಚು ಜನರು ಸೇರುವ ಪ್ರದೇಶದಿಂದ ದೂರವಿರಿ.

ಪೌಷ್ಟಿಕಾಂಶ ಆಹಾರ ಸೇವನೆ

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು

ಸ್ವಯಂ ಚಿಕಿತ್ಸೆ ಬೇಡ

ಪ್ರಸ್ತುತ ಆಸ್ಪತ್ರೆಗೆ ಜ್ವರದಿಂದ ಚಿಕಿತ್ಸೆಗೆ ಬರುವ 10 ಮಂದಿಯಲ್ಲಿ 7 ಜನರಲ್ಲಿ ವೈರಲ್‌ ಫೀವರ್‌ ಕಾಣಿಸಿಕೊಳ್ಳುತ್ತಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಪೌಷ್ಟಿಕಾಂಶ ಆಹಾರ ಸೇವಿಸಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸಬೇಕು. ಸ್ವಯಂ ಚಿಕಿತ್ಸೆ ಉತ್ತಮವಲ್ಲ.-ಡಾ.ಶ್ರೀದೇವಿ, ಸಮಾಲೋಚನ ವೈದ್ಯರು, ಮಣಿಪಾಲ ಆಸ್ಪತ್ರೆ, ಯಶವಂತಪುರ. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.