ಅಪ್ಪು ಸಮಾಧಿಗೆ ಬಿಗಿ ಪೊಲೀಸ್‌ ಭದ್ರತೆ

ತಮಿಳಿನ ಶಿವಕಾರ್ತಿಕೇಯನ್‌ ಭೇಟಿ | ಅಭಿಮಾನಿಗಳಿಗೆ ದರ್ಶನಕ್ಕೆ ಅವಕಾಶ ನೀಡದ ಖಾಕಿ

Team Udayavani, Nov 2, 2021, 10:44 AM IST

ಅಪ್ಪು ಸಮಾಧಿಗೆ ಬಿಗಿ ಪೊಲೀಸ್‌ ಭದ್ರತೆ

ಬೆಂಗಳೂರು: ಚಂದನವನದ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಸಮಾಧಿಗೆ ಭೇಟಿ ನೀಡಲು ಸೋಮವಾರವೂ ಕಂಠೀರವ ಸ್ಟುಡಿಯೋ ಬಳಿ ನೂರಾರು ಮಂದಿ ಅಭಿಮಾ ನಿಗಳು ಬಂದು ನಿರಾಸೆಗೊಂಡು ಹಿಂದಿರುಗಿದರು. ಈ ಮಧ್ಯೆ ತಮಿಳುನಟ ಶಿವಕಾರ್ತಿಕೇ ಯನ್‌ ಮತ್ತು ಪುನೀತ್‌ ಸಹೋದರಿಯರು ಭೇಟಿ ನೀಡಿ ಪುನೀತ್‌ ರಾಜ್‌ಕುಮಾರ್‌ ಸಮಾ ಧಿಗೆ ಪೂಜೆ ಸಲ್ಲಿಸಿದರು. ಮಂಗಳವಾರ ಕುಟುಂಬ ಸದಸ್ಯರಿಂದ ಹಾಲು-ತಪ್ಪ ಕಾರ್ಯ ಇರುವುದರಿಂದ ಸಮಾ ಧಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ನಂದಿನಿ ಲೇಔಟ್‌ ಠಾಣೆ ಇನ್‌ಸ್ಪೆಕ್ಟರ್‌ ವೆಂಕಟೇಗೌಡ ನೇತೃತ್ವದಲ್ಲಿ ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳು ಸೇರಿ 300 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಗಳವಾರದ ಬಳಿಕ ಅಭಿಮಾನಿ ಗಳಿಗೆ ದರ್ಶನಕ್ಕೆ ಅವಕಾಶ ನೀಡುವ ಬಗ್ಗೆ ಚಿಂತಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿರುವ ನೂರಾರು ಮಂದಿ ಅಪ್ಪು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಹೊರಗೆ ಜಮಾ ಯಿಸಿರುವುದರಿಂದ ಎರಡು ದ್ವಾರಗಳ ಬಳಿ ಬ್ಯಾರಿಕೆಡ್‌ ಹಾಕಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:- ಹೊನ್ನಡಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಪೊಲೀಸರು, ಅವರ ಮನವೊಲಿಸಿ ವಾಪಸ್‌ ಕಳುಹಿಸಿದರು. ತಮಿಳುನಾಡಿನ ಗಾಜನೂರು, ಸಿಂಗ ನಲ್ಲೂರು, ಗುಂಟಾಪುರ, ತಾಳುವಾಡಿ ಸೇರಿ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ರಾಜ್ಯದ ನಾನಾ ಜಿಲ್ಲೆಗಳಿಂದ ಕುಟುಂಬ ಸಮೇತರಾಗಿ ಬಂದಿದ್ದೇವೆ.

ನೂರಾರು ಕಿ.ಮೀ. ಕ್ರಮಿಸಿ ಬಂದು ಅಪ್ಪು ದರ್ಶನ ಪಡೆಯದೆ ವಾಪಸ್‌ ಹೋಗುವುದಿಲ್ಲ. ಪುನೀತ್‌ ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ಮುಗಿಸಿದ ಬಳಿಕ ದರ್ಶನ ಪಡೆದೆ ಹೋಗುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ ಎಂದು ಸ್ಥಳದಲ್ಲಿರುವ ಪೊಲೀಸ್‌ ಮೂಲಗಳು ತಿಳಿಸಿವೆ. ಮನೆಗೂ ಬಿಗಿ ಭದ್ರತೆ: ಪುನೀತ್‌ ರಾಜ್‌ ಕುಮಾರ್‌ ನಿಧನ ನಂತರ ಸದಾಶಿವನಗರದ ಅವರ ಮನೆಗೂ ಭದ್ರತೆ ನೀಡಲಾಗಿದೆ. ಕೆಲ ಅಭಿಮಾನಿಗಳು ಅವರ ಮನೆ ಬಳಿ ಹೋಗಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆಯಿರುವ ಹಿನ್ನೆ ಲೆಯಲ್ಲಿ ಭದ್ರತೆ ನೀಡಲಾಗಿದೆ.

ಪುನೀತ್‌ ಮನೆಗೆ ಪ್ರಭು ಗಣೇಶನ್‌ ಭೇಟಿ

ಸದಾಶಿವನಗರದ ಪುನೀತ್‌ ಮನೆಗೆ ತಮಿಳು ನಟ ಪ್ರಭು ಗಣೇಶನ್‌ ಭೇಟಿ ನೀಡಿ, ಪುನೀತ್‌ ಪತ್ನಿ ಅಶ್ವಿ‌ನಿ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಅಪ್ಪು ನಮ್ಮನ್ನು ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ ಗಣೇಶನ್‌, ರಾಜ್‌ಕಮಾರ್‌ ಆತ್ಮೀಯ ಸ್ನೇಹಿತರಾಗಿದ್ದರು. ನಾನು, ಶಿವಣ್ಣ, ರಾಘಣ್ಣ, ಅಪ್ಪು ಸಹೋದರರ ರೀತಿ ಇದ್ದೆವು. ಇದೀಗ ಆತ ಇಲ್ಲ ಎಂದರೆ ನಂಬಲು ಆಗುತ್ತಿಲ್ಲ ಎಂದು ಕಣ್ಣೀರು ಹಾಕಿದರು.

ಶಿವಕಾರ್ತಿಕೇಯನ್‌ ಭೇಟಿ: ಸಂತಾಪ ಪುನೀತ್‌ ಸಮಾಧಿಗೆ ತಮಿಳುನಾಡಿನ ನಟ ಶಿವಕಾರ್ತಿಕೇಯನ್‌ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪುನೀತ್‌ ಅವರನ್ನು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದೆ. ಅವರ ಒಳ್ಳೆಯ ಗುಣಗಳು ತುಂಬ ಇಷ್ಟ ಆಯಿತು. ಅವರಿಂದ ಸಾಕಷ್ಟು ಕಲಿತಿದ್ದೇನೆ. ಒಂದುತಿಂಗಳ ಹಿಂದಷ್ಟೇ ಅವರ ಜತೆ ಫೋನ್‌ನಲ್ಲಿ ಮಾತನಾಡಿದ್ದೆ. ಬೆಂಗಳೂರಿಗೆ ಬಂದಾಗ ತಪ್ಪದೇ ಮನೆಗೆ ಬರಬೇಕೆಂದು ಒತ್ತಾಯಿಸಿದ್ದರು ಎಂದು ಭಾವುಕರಾದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.