ರಾಜ್ಯದೆಲ್ಲೆಡೆ ಮತ ಸಂದೇಶಕ್ಕಾಗಿ ತೃತೀಯ ಲಿಂಗಿಗಳ ಪ್ರವಾಸ


Team Udayavani, Apr 21, 2018, 6:25 AM IST

dsa.jpg

ಬೆಂಗಳೂರು: “ಬಿಗುಮಾನ ಬಿಡಿ; ಸ್ವಾಭಿಮಾನ ಪಡಿ’, “ಸಂಕೋಚ ಬಿಟ್ಟು; ಸಂಭ್ರಮ ಪಡಿ’, ಅಭಿಮಾನದಿಂದ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿ, ಇದು ಲೈಂಗಿಕ ಅಲ್ಪಸಂಖ್ಯಾತರು ರಾಜ್ಯದ ವಿವಿಧೆಡೆ ಸುತ್ತಾಡಿ ತಮ್ಮ ಸಮುದಾಯಕ್ಕೆ ನೀಡುತ್ತಿರುವ ಮತ ಸಂದೇಶ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ (ತೃತೀಯ ಲಿಂಗಿ ಗಳು) ತಮ್ಮವರಲ್ಲದೇ ಬೇರೆ ಜನರಲ್ಲೂ ಓಟಿನ ಮಹತ್ವ ಮತ್ತು ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ರಾಜ್ಯದ ವಿವಿಧೆಡೆ ಸಕ್ರಿಯವಾಗಿರುವ ಲೈಂಗಿಕ ಅಲ್ಪಸಂಖ್ಯಾತರ ಸಂಘ-ಸಂಸ್ಥೆಗಳು ತಂಡಗಳನ್ನು ಕಟ್ಟಿಕೊಂಡು ಮತದಾರ ಜಾಗೃತಿ ಪ್ರವಾಸ ಕೈಗೊಳ್ಳುತ್ತಿವೆ. “ಒಂದೆಡೆ’ ಎಂಬ ಹೆಸರಿನ ಸಂಸ್ಥೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದೆ. 

ಇದಕ್ಕೆ ಪೂರಕ ಎಂಬಂತೆ ಈ ಬಾರಿ ಚುನಾವಣಾ ಆಯೋಗ ಸಹ ಚುನಾವಣಾ ಪ್ರಕ್ರಿಯೆ ಮತ್ತು ಮತದಾನದಲ್ಲಿ ತೃತೀಯ ಲಿಂಗಿಗಳ ಸಕ್ರಿಯ ಪಾಲ್ಗೊಳ್ಳುವಿಕೆಗೆ ವಿಶೇಷ ಒತ್ತು ನೀಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ಎಲ್ಲ ಹಂತಗಳಲ್ಲೂ ಈ ವರ್ಗದ ಬಗ್ಗೆ ಹೆಚ್ಚಿನ ಗಮನ ಕೊಟ್ಟಿದೆ. ಮತದಾರರ ಜಾಗೃತಿಗೆ ಬೇರೆ ಬೇರೆ ಕ್ಷೇತ್ರಗಳ ಸಾಧಕರನ್ನು ರಾಯಭಾರಿಯನ್ನಾಗಿನೇಮಿಸಿಕೊಂಡಿರುವ ಆಯೋಗ, ಲೈಂಗಿಕ ಅಲ್ಪಸಂಖ್ಯಾತರ ಮೂಲಕವೂ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಸಂಘ-ಸಂಸ್ಥೆಗಳು ಕೈ ಜೋಡಿಸಿವೆ.

ಲೈಂಗಿಕ ಅಲ್ಪಸಂಖ್ಯಾತರು ಪ್ರತಿ ಹಂತದಲ್ಲಿ ನಿಂದನೆ  ಅನುಭವಿಸುತ್ತಾರೆ. ಓಟು ಹಾಕಲು ಈ ಸಮುದಾಯ ಹಿಂದೇಟು ಹಾಕುತ್ತದೆ. 
ಮತದಾನದ ದಿನ ಸಾಲಿನಲ್ಲಿ ನಾವು ನಿಂತರೆ, ಬೇರೆಯವರಿಗೆ ಕಸಿವಿಸಿ, ಆಗ ನಮ್ಮವರಿಗೂ ಮುಜುಗರ. ಆದರೆ, ಈ ಬಾರಿ ಹಾಗಾಗಲು ಬಿಡಲ್ಲ. ಎಲ್ಲ ಮತದಾರರನ್ನು ಮತಗಟ್ಟೆಗಳ ಸರತಿ ಸಾಲಿನಲ್ಲಿ ನಿಲ್ಲಿಸುತ್ತೇವೆ. ಆ ಮೂಲಕ ನಾವೂ ಸಮಾನ ಪ್ರಜೆಗಳು, ನಮಗೂ ಸಮಾನ ಹಕ್ಕುಗಳಿವೆ ಎಂಬ ಸಂದೇಶ ಸಾರುತ್ತೇವೆಂದು “ಒಂದೆಡೆ ಸಂಸ್ಥೆ’ಯ ಸಂಸ್ಥಾಪಕಿ ಅಕ್ಕೆ„ ಪದ್ಮಶಾಲಿ ಹೇಳುತ್ತಾರೆ.

4 ಸಾವಿರ ತೃತೀಯ ಲಿಂಗಿ ಮತದಾರರು: 2018ರ ಫೆಬ್ರವರಿಯಲ್ಲಿ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ ರಾಜ್ಯದಲ್ಲಿ 4,552 ತೃತೀಯ ಲಿಂಗಿ ಮತದಾರರಿದ್ದಾರೆ. ಈ ಪೈಕಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 149, ವಿಜಯನಗರದಲ್ಲಿ 136, ಕೆ.ಆರ್‌.ಪುರದಲ್ಲಿ 114, ಬೆಂಗಳೂರು ದಕ್ಷಿಣದಲ್ಲಿ 103, ಸಿ.ವಿ.ರಾಮನ್‌ ನಗರದಲ್ಲಿ 98, ದಾಸರಹಳ್ಳಿ 86, ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 98, ರಾಯಚೂರು ಕ್ಷೇತ್ರದಲ್ಲಿ 96ರಂತೆ ಅತಿ ಹೆಚ್ಚು ತೃತೀಯ ಲಿಂಗಿ ಮತದಾರರು ಇದ್ದಾರೆ. ಬೆಳಗಾವಿ ದಕ್ಷಿಣ, ವಿಜಯಪುರ ನಗರ, ಕಲಬುರಗಿ ದಕ್ಷಿಣ, ರಾಯಚೂರು ಗ್ರಾಮಾಂತರ, ಮಾನ್ವಿ, ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್‌, ಗೋವಿಂದರಾಜನಗರ, ಆನೇಕಲ್‌ ಕ್ಷೇತ್ರಗಳಲ್ಲಿ 50ರಿಂದ 80 ಮತದಾರರಿದ್ದಾರೆ. ಸವದತ್ತಿ, ಗಂಗಾವತಿ, ಕುಮಟಾ, ಭಟ್ಕಳ, ಶಿರಸಿ, ಹಾನಗಲ್‌, ಹರಿಹರ, ಕಾಪು, ಕಾರ್ಕಳ, ಗೌರಿಬಿದನೂರು, ಬೆಳ್ತಂಗಡಿ, ಪುತ್ತೂರು, ಹುಣಸೂರು ಕ್ಷೇತ್ರಗಳಲ್ಲಿ ತಲಾ ಒಬ್ಬರು ತೃತೀಯ ಲಿಂಗಿ ಮತದಾರರಿದ್ದಾರೆ. 

ಕಳೆದ ಬಾರಿಯ ಓಟಿನ ಪ್ರಮಾಣ ಶೇಕಡಾ 2
2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಒಟ್ಟು ತೃತೀಯ ಲಿಂಗಿ ಮತದಾರರ ಸಂಖ್ಯೆ 2,100 ಇತ್ತು. ಅದರಲ್ಲಿ ಓಟು ಹಾಕಿದವರು 49 ಮಂದಿ ಮಾತ್ರ. ಅಂದರೆ, ಮತದಾನ ಪ್ರಮಾಣ ಶೇ.2ರಷ್ಟು ಆಗಿತ್ತು. ಕಳೆದ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಒಬ್ಬರು ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದರು. ಈ ಬಾರಿ ಮತದಾರರ ಸಂಖ್ಯೆ ದುಪ್ಪಟ್ಟಾಗಿದೆ. ಅದಕ್ಕೆ ತಕ್ಕಂತೆ ಮತದಾನ ಪ್ರಮಾಣವೂ ಹೆಚ್ಚಾಗಬೇಕು ಅನ್ನುವುದು ಲೈಂಗಿಕ ಅಲ್ಪಸಂಖ್ಯಾತರ ಸಂಘ-ಸಂಸ್ಥೆಗಳ ಉದ್ದೇಶವಾಗಿದೆ.

ನಮ್ಮ ಈ ಜಾಗೃತಿ ಯಾವುದೇ ಪಕ್ಷ, ವ್ಯಕ್ತಿಯ ಪರವಲ್ಲ. ಲೈಂಗಿಕ ಅಲ್ಪಸಂಖ್ಯಾತರಲ್ಲಿ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಎ.21ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ.
– ಅಕ್ಕೈ ಪದ್ಮಶಾಲಿ

– ರಫೀಕ್‌ ಅಹ್ಮದ್‌ 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.