ತಪ್ಪದೇ ಮಾಡಿ ಮತದಾನ: ಇಂದು ಮತದಾನ ಹಬ್ಬ

"ಉದಯವಾಣಿ' ಮತ ಜಾಗೃತಿ ಪ್ರಯತ್ನಕ್ಕೀಗ ಸಾರ್ಥಕತೆ ಕಾಲ

Team Udayavani, Apr 18, 2019, 3:00 AM IST

tappade

ಬೆಂಗಳೂರು: ಪ್ರಜಾತಂತ್ರ ಹಬ್ಬಕ್ಕೆ ಈಗ ಕ್ಷಣಗಣನೆ. ಈ ಹಬ್ಬದಲ್ಲಿ ನಗರದ ಎಲ್ಲ ವರ್ಗದ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿಸುವ ಕೆಲಸ “ಉದಯವಾಣಿ’ಯಿಂದ ಕಳೆದ ಒಂದು ತಿಂಗಳು ನಡೆಯಿತು. ಗುರುವಾರ ಆ ಪ್ರಯತ್ನದ ಸಾರ್ಥಕತೆಗೆ ಸಕಾಲ.

ಈ ಹಬ್ಬದಿಂದ ದೂರ ಉಳಿಯಲು ನಿರ್ಧರಿಸಿದ್ದ ಮತದಾರರನ್ನು ಹತ್ತಿರಕ್ಕೆ ಕರೆತರುವ ವೇದಿಕೆಯಾಗಿ, ಮತದಾರ ಎದುರಿಸುತ್ತಿರುವ ಸಮಸ್ಯೆಗಳಿಗೆ ದನಿಯಾಗಿ, ಈ ಕ್ರಿಯೆಯಲ್ಲಿ ಸಕ್ರಿಯವಾಗಿರುವ ಸಂಘ-ಸಂಸ್ಥೆಗಳು, ವ್ಯಕ್ತಿಗಳ ಪರವಾಗಿ ತಿಂಗಳಿಂದ ನಿರಂತರವಾಗಿ ಪತ್ರಿಕೆ ಕೆಲಸ ಮಾಡಿದೆ.

ಇದಕ್ಕಾಗಿಯೇ ಪುಟ ಮೀಸಲಿಟ್ಟು, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿತು. ಕಾರ್ಮಿಕರು, ಯುವಕರು, ಪ್ರತಿಷ್ಠಿತರು, ಮಹಿಳೆಯರು, ಅಂಗವಿಕಲರು ಸೇರಿದಂತೆ ವಿವಿಧ ವರ್ಗಗಳ ಮತದಾರರನ್ನು ಸೇರಿಸುವ ಪ್ರಯತ್ನ ಈ ಮೂಲಕ ನಡೆಯಿತು.

ನಗರದಲ್ಲಿ ಸಾಕ್ಷರರ ಸಂಖ್ಯೆ ಗಣ್ಯವಾಗಿದ್ದರೂ, ಮತದಾನ ಮಾತ್ರ ನಗಣ್ಯವಾಗಿದೆ. ಇದರಲ್ಲಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಲಾಯಿತು. “ಕಡ್ಡಾಯ ಮತದಾನ ನಾವೆಲ್ಲ ಕೈಜೋಡಿಸೋಣ’ ಅಭಿಯಾನದಡಿ ವಾಸ್ತವವಾಗಿ ಒಂದು ಮತದ ಮೌಲ್ಯ,

ಮಕ್ಕಳಿಗೂ ಒಂದು ಪ್ರಣಾಳಿಕೆ ಆಗಲಿ ಎಂಬ ಬೇಡಿಕೆ, ಮತದಾನ ಜಾಗೃತಿಗೆ ಆಯೋಗ ರಚಿಸಿದ ಒಂದು ನಿಮಿಷದ ಸಿನಿಮಾ, ವೋಟಿಂಗ್‌ಗೆ ಚಕ್ಕರ್‌ ಹಾಕಿ ಔಟಿಂಗ್‌ಗೆ ಹೊರಟವರಿಗೆ ವಸತಿ ಸೌಲಭ್ಯ ನೀಡವುದಿಲ್ಲ ಎಂಬ ದಿಟ್ಟ ನಿರ್ಧಾರ ಕೈಗೊಂಡ ಅಧಿಕಾರಿಗಳು, ಮದ್ಯ ನಿಷೇಧ ಮಾಡದಿರುವ ಜನಪ್ರತಿನಿಧಿಗಳ ವಿರುದ್ಧ “ನೋಟಾ’ ಅಸ್ತ್ರಕ್ಕೆ ಮುಂದಾದ ಮಹಿಳೆಯರ ಬಗ್ಗೆ,

ಯುವಜನ ಆಯೋಗದ ಒತ್ತಾಯ ಮುಂದಿಟ್ಟ ಯುವಪಡೆ, ರೈತ ಮಹಿಳೆಯರಿಗೆ ಮತದಾನದ ಪಾಠ ಹೀಗೆ ಹತ್ತುಹಲವು ರೀತಿಯಲ್ಲಿ ಮತದಾರರ ಜಾಗೃತಿ ಮೂಡಿಸಲಾಯಿತು. ಮತದಾರರನ್ನು ಪ್ರೋತ್ಸಾಯಿಸಲು ಹಲವು ರೀತಿಯ ಆಫ‌ರ್‌ಗಳು, ರಿಯಾಯ್ತಿಗಳ ಬಗ್ಗೆಯೂ ಗಮನಸೆಳೆಯಲಾಯಿತು.

ಅಲ್ಲದೆ, ಶಾಂತಿಯುತ ಮತದಾನದಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯೊಂದಿಗೆ ಕೈಜೋಡಿಸಿ, ನಗರದ ಪ್ರಮುಖ ಭಾಗಗಳಲ್ಲಿ ಸೈಕಲ್‌ ಜಾಥಾ ಮೂಲಕ ಅರಿವು ಕಾರ್ಯಕ್ರಮ ನಡೆಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಇದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಸ್ವತಃ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ವಿಶೇಷ ಅತಿಥಿಯಾಗಿ ಉದಯವಾಣಿ ಪತ್ರಿಕೆ ಕಚೇರಿಗೆ ಆಹ್ವಾನಿಸಲಾಗಿತ್ತು.

ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ಒಂದೊಂದು ರನ್‌ ಕೂಡ ನಿರ್ಣಾಯಕ. ಅದೇ ರೀತಿ, ಚುನಾವಣೆಯಲ್ಲಿ ಕೂಡ ಒಂದೊಂದು ಮತವೂ ನಿರ್ಣಾಯಕವಾದುದು. ಆದ್ದರಿಂದ ತಪ್ಪದೇ ಮತ ಚಲಾಯಿಸಿ.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.