3 ಜಿಲ್ಲೆಗಳ 97 ಕೆರೆಗಳಿಗೆ ವೃಷಭಾವತಿ ನೀರು


Team Udayavani, Jan 11, 2023, 11:41 AM IST

3 ಜಿಲ್ಲೆಗಳ 97 ಕೆರೆಗಳಿಗೆ ವೃಷಭಾವತಿ ನೀರು

ಬೆಂಗಳೂರು: ವೃಷಭಾವತಿಯಲ್ಲಿ ಹರಿಯುತ್ತಿರುವ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 97 ಕೆರೆಗಳನ್ನು ಭರ್ತಿ ಮಾಡಲು ಯೋಜನೆ ರೂಪಿಸಲಾಗಿದೆ.

ಕೋರಮಂಗಲ-ಚಲ್ಲಘಟ್ಟ ಕಣಿವೆಯಲ್ಲಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ, ಚಿಕ್ಕಬಳ್ಳಾ ಪುರ ಜಿಲ್ಲೆಗಳ 126 ಕೆರೆಗಳನ್ನು ತುಂಬಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಇದೀಗ ವೃಷಭಾವತಿಯಲ್ಲಿ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಿ ಕೆರೆಗಳಿಗೆ ಹರಿಸಲು ಯೋಜನೆ ರೂಪಿಸಲಾಗಿದೆ. ವೃಷಭಾವತಿ ಕಣಿವೆಯಲ್ಲಿ ಹರಿಯುತ್ತಿರುವ ತ್ಯಾಜ್ಯ ನೀರನ್ನು ಬೆಂಗಳೂರು ಜಲಮಂಡಳಿ ನಾಯಂಡಹಳ್ಳಿ ಹಾಗೂ ಮೈಲಸಂದ್ರದಲ್ಲಿನ ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಗಳಲ್ಲಿ ಶುದ್ಧೀಕರಿಸಿ ವಾಪಸ್‌ ವೃಷಭಾವತಿಗೆ ಬಿಡುತ್ತಿದೆ.

ಹೀಗೆ ಶುದ್ಧೀಕರಿಸಿದ ನೀರನ್ನು ಮರುಬಳಕೆ ಮಾಡಿಕೊಳ್ಳುವ ಉದ್ದೇಶದಿಂದಾಗಿ ಸಣ್ಣ ನೀರಾವರಿ ಇಲಾಖೆ, ವೃಷಭಾವತಿ ಏತ ನೀರಾವರಿ ಯೋಜನೆ ರೂಪಿಸಿದೆ. ಆ ಯೋಜನೆಯ ಮೊದಲ ಹಂತದಲ್ಲಿ 3 ಜಿಲ್ಲೆಗಳ 97 ಕೆರೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿದೆ. 865 ಕೋಟಿ ರೂ. ವೆಚ್ಚ” ವೃಷಭಾವತಿ ಏತ ನೀರಾವರಿ ಯೋಜನೆಯನ್ನು 3 ಹಂತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರಲ್ಲಿ ಮೊದಲನೇ ಹಂತ ಅನುಷ್ಠಾನಕ್ಕೆ ಸಣ್ಣ ನೀರಾವರಿ ಇಲಾಖೆ ಸಿದ್ಧತೆ ನಡೆಸಿದೆ.

ಮೊದಲನೇ ಹಂತದ ಯೋಜನಾ ವೆಚ್ಚವನ್ನು 865 ಕೋಟಿ ರೂ. ನಿಗದಿ ಮಾಡಲಾಗಿದೆ. ಈ ಮೊತ್ತದಲ್ಲಿ ಯೋಜನೆಗೆ ಸಂಬಂಧಿಸಿದಂತೆ ನಾಲೆ ನಿರ್ಮಾಣಕ್ಕೆ, ಪೈಪ್‌ ಅಳವಡಿಕೆಗೆ ಅಗತ್ಯವಿರುವ ಭೂಸ್ವಾಧೀನ, ಪೈಪ್‌ ಮಾರ್ಗ ಹಾದುಹೋಗುವಲ್ಲಿನ ಕೃಷಿ ಭೂಮಿ ಇದ್ದರೆ ಬೆಳೆ ಹಾನಿ ಪರಿಹಾರ ನೀಡುವುದು, ಪೈಪ್‌ ಅಳವಡಿಕೆ ಸೇರಿ ಇನ್ನಿತರ ಕಾರ್ಯಗಳಿಗೆ ವ್ಯಯಿಸಲಾಗುತ್ತದೆ. ಯೋಜನೆಗೆ ಸಂಬಂಧಿಸಿದಂತೆ ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಗುತ್ತಿಗೆದಾರರ ನೇಮಕದ ನಂತರದ 30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ಹರಿಸುವ ಕೆಲಸ ಮಾಡಲಾಗುತ್ತದೆ. ಅಲ್ಲದೆ, ಕಾಮಗಾರಿ ಪೂರ್ಣಗೊಂಡ 5 ವರ್ಷಗಳವರೆಗೆ ನೀರು ಹರಿಸುವ ಕಾರ್ಯದ ಬಗ್ಗೆ ಗುತ್ತಿಗೆದಾರರು ಮೇಲ್ವಿಚಾರಣೆ ಮಾಡಬೇಕಿದೆ.

3 ಹಂತದಲ್ಲಿ ಕೆರೆಗಳ ಭರ್ತಿ: ಸದ್ಯ ಅನುಷ್ಠಾನ ಗೊಳಿಸುತ್ತಿರುವ ಯೋಜನೆ ಮೊದಲನೇ ಹಂತದ್ದಾ ಗಿದೆ. ಈ ಹಂತದಲ್ಲಿ 97 ಕೆರೆಗಳಿಗೆ ನೀರು ಹರಿಸ ಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೃಷ ಭಾವತಿ ಕಣಿವೆಯಲ್ಲಿನ ತ್ಯಾಜ್ಯ ನೀರು ಹರಿವು ಮತ್ತು ಶುದ್ಧೀಕರಣವನ್ನು ಗಮನಿಸಿ 2 ಮತ್ತು 3ನೇ ಹಂತದ ಯೋಜನೆಗಳನ್ನು ಹರಿಸಲು ಸಣ್ಣ ನೀರಾ ವರಿ ಇಲಾಖೆ ನಿರ್ಧರಿಸಿದೆ. ಸದ್ಯ ಜಲಮಂಡಳಿ ಯಲ್ಲಿನ ಎಸ್‌ಟಿಪಿಗಳಿಂದ ಲಭ್ಯವಿರುವ 243 ಎಂಎಲ್‌ಡಿ ನೀರನ್ನು ಕೆರೆಗಳಿಗೆ ಹರಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೊಸದಾಗಿ ಎಸ್‌ಟಿಪಿಗಳ ನಿರ್ಮಾಣ ಸೇರಿ ಇನ್ನಿತರ ಕ್ರಮಗಳನ್ನು ಕೈಗೊಂಡು ಇನ್ನಷ್ಟು ಕೆರೆಗಳಿಗೆ ವೃಷಭಾವತಿ ನೀರು ಹರಿಯುವಂತೆ ಮಾಡಲಾಗುತ್ತದೆ.

3 ಕಡೆ ನೀರು ಶೇಖರಣೆ : ವೃಷಭಾವತಿಯಿಂದ ತರಲಾಗುವ ನೀರನ್ನು ಒಂದೆಡೆ ಶೇಖರಿಸಿ ನಂತರ ಕೆರೆಗಳಿಗೆ ಹರಿಸಲಾಗುತ್ತದೆ. ಅದರಂತೆ ಬೆಂಗಳೂರು ನಗರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ನಾಯಂಡಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳಿಗಾಗಿ ನೆಲಮಂಗಲ ಸಮೀಪದ ವೀರಾಂಜನಿಪುರ ಹಾಗೂ ತುಮಕೂರು ಜಿಲ್ಲೆ ಕೆರೆಗಳಿಗಾಗಿ ತುಮಕೂರು ತಾಲೂಕಿನ ಹೊನ್ನುಡುಕೆಯಲ್ಲಿ ಟ್ಯಾಂಕ್‌ಗಳನ್ನು ನಿರ್ಮಿಸಲಾಗುತ್ತದೆ. ಅದರಿಂದ ನೀರನ್ನು ಪಂಪ್‌ ಮಾಡಲು ಪ್ರತ್ಯೇಕ ಪಂಪ್‌ಸೆಟ್‌ಗಳನ್ನು ಅಳವಡಿಸಲಾಗುತ್ತದೆ. ಅದರ ಪ್ರಕಾರ ನಾಯಂಡಹಳ್ಳಿ ಪಂಪ್‌ನಲ್ಲಿ ಪ್ರತಿದಿನ ಕಾರ್ಯನಿರ್ವಹಿಸುವ 4 ಪಂಪ್‌ಗಳು ಹಾಗೂ 2 ಹೆಚ್ಚುವರಿ ಪಂಪ್‌ಗ್ಳನ್ನು ಅಳವಡಿಸಲಾಗುತ್ತದೆ. ಅದೇ ರೀತಿ ವೀರಾಂಜನಿಪುರ ಮತ್ತು ಹೊನ್ನುಡುಕೆಯಲ್ಲಿ ತಲಾ 3 ಪಂಪ್‌ಗ್ಳನ್ನು ಅಳವಡಿಸಿ, ಅವುಗಳಿಂದ ನೀರನ್ನು ಕೆರೆಗಳಿಗೆ ಹರಿಸಲಾಗುತ್ತದೆ.

ವೃಷಭಾವತಿ ಕಣಿವೆಯಲ್ಲಿ ಹರಿಯುತ್ತಿರುವ ತ್ಯಾಜ್ಯ ನೀರು ಶುದ್ಧೀಕರಿಸಿ ವಾಪಸ್‌ ವೃಷಭಾವತಿಗೆ ಬಿಡಲಾಗುತ್ತಿದೆ. ಹೀಗಾಗಿ ಶುದ್ಧೀಕರಿಸಿದ ನೀರನ್ನು ಮರುಬಳಕೆ ಮಾಡುವ ಸಲುವಾಗಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಟ್ಟು 97 ಕೆರೆಗಳಿಗೆ ವೃಷಭಾವತಿ ನೀರನ್ನು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಿ.ಪಿ. ಸಂಜೀವ್‌ರಾಜು, ಸೂಪರಿಟೆಂಡೆಂಡ್‌ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ ಬೆಂಗಳೂರು ವೃತ್ತ

ಗಿರೀಶ್‌ ಗರಗ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.