ಪುಟ್ಟ ವಿಮಾನದಲ್ಲಿ ತಾಯಿ-ಮಗಳ ಪ್ರಪಂಚ ಸುತ್ತಾಟ


Team Udayavani, Nov 30, 2017, 6:05 AM IST

Ban30111707Medn.jpg

ಬೆಂಗಳೂರು: ಮಹಿಳಾ ಸಬಲೀಕರಣ ಹಾಗೂ ಏರ್‌ ಕ್ರಾಫ್ಟ್ ವಲಯಕ್ಕೆ ಹೆಚ್ಚು ಮಹಿಳೆಯರನ್ನು ಆಕರ್ಷಿಸುವ ಉದ್ದೇಶದಿಂದ ಮೈಸೂರಿನ ತಾಯಿ ಮತ್ತು ಮಗಳು ಮೋಟರ್‌ಗ್ಲೆ„ಡರ್‌ನಲ್ಲಿ (ಸಣ್ಣ ಹೆಲಿಕಾಪ್ಟರ್‌ ಅಥವಾ ಏರ್‌ಕ್ರಾಫ್ಟ್)ಮೂಲಕ ಪ್ರಪಂಚ ಪರ್ಯಟನೆಗೆ ಮುಂದಾಗಿದ್ದಾರೆ.

ಮೈಸೂರು ಮೂಲದ ಮಹಿಳಾ ಫೈಲೆಟ್‌ ದೀಪಿಕಾ ಮಬೆನ್‌ ಹಾಗೂ ಅವರ ಮಗಳು ಫೋಟೋಗ್ರಫಿ ವಿದ್ಯಾರ್ಥಿ ಅಮಿÂ ಮೆಹ್ತಾ ಒಟ್ಟಾಗಿ 2018ರ ಫೆಬ್ರವರಿ ಮೊದಲ ವಾರದಲ್ಲಿ “ಮಾಹಿ’ ಮೋಟರ್‌ಗ್ಲೆ„ಡರ್‌ನಲ್ಲಿ 21 ದೇಶ ಸುತ್ತುವ ಯೋಜನೆ ಆರಂಭಿಸಲಿದ್ದಾರೆ.

ಸುಮಾರು 80 ದಿನದ ಈ ಪ್ರವಾಸದಲ್ಲಿ ಭಾರತ,ಜಪಾನ್‌, ರಷ್ಯಾ, ಅಮೆರಿಕಾ, ಯುರೋಪ್‌ ರಾಷ್ಟ್ರಗಳನ್ನು ಸುತ್ತಿ ಪಾಕಿಸ್ತಾನದ ಮಾರ್ಗವಾಗಿ ವಾಪಸ್‌ ಭಾರತಕ್ಕೆ ಬರಲಿದ್ದಾರೆ.

ಜಕ್ಕೂರಿನ ಸರ್ಕಾರಿ ವೈಮಾನಿಕ ತರಬೇತಿ ಕೇಂದ್ರದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ವಿಶ್ವ ಪರ್ಯಟನೆಯ ಮಾಹಿತಿ ನೀಡಿದ ದೀಪಿಕಾ ಮಬೆನ್‌, ಪ್ರತಿಯೊಬ್ಬ ಮಹಿಳೆಯು ಆತ್ಮಸ್ಥೈರ್ಯದಿಂದ ಬದುಕು ನಡೆಸಬೇಕು ಮತ್ತು ಯಾವುದೇ ಸಮಸ್ಯೆ ಬಂದರೂ ಸಮರ್ಥವಾಗಿ ಎದುರಿಸುತ್ತೇನೆ ಎಂಬ ಛಲ ಇರಬೇಕು. ಮಹಿಳಾ ಸಬಲೀಕರಣ ಹಾಗೂ ವಿಮಾನಯಾನ ಕ್ಷೇತ್ರಕ್ಕೆ ಹೆಚ್ಚು ಮಹಿಳೆಯರನ್ನು ಆಕರ್ಷಿಸುವ ದೃಷ್ಟಿ ಯಿಂದ ಮೋಟರ್‌ಗ್ಲೆ„ಡರ್‌ನಲ್ಲಿ ಪ್ರಪಂಚ ಸುತ್ತುವ ಯೋಜನೆ ಹಾಕಿಕೊಂಡಿದ್ದೇವೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದಿಟಛಿ ಇಲಾಖೆ ಸೇರಿದಂತೆ ಹಲವು ಸಂಸ್ಥೆಗಳು ಇದಕ್ಕೆ ಬೆಂಬಲ ಹಾಗೂ
ಸಹಕಾರ ನೀಡಿದೆ ಎಂದರು.

ಕಳೆದ 25 ವರ್ಷದಿಂದ ಪೈಲೆಟ್‌ ಸೇರಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಅನುಭವ ಇದೆ. ಹಾಗೆಯೇ ನೂರಕ್ಕೂ ಅಧಿಕ ಮಕ್ಕಳಿಗೆ ವಿಮಾನ ಯಾನದ ತರಬೇತಿಯನ್ನು ನೀಡುತ್ತಿದ್ದೇನೆ. 80 ದಿನದಲ್ಲಿ 21 ದೇಶ ಸುತ್ತುವ ಯೋಜನೆ ಇದಾಗಿದ್ದು, ಆಯಾ ದೇಶದ ಹವಾಮಾನ ಹಾಗೂ ಪ್ರತಿಕೂಲ ಪರಿಸ್ಥಿತಿಗೆ ಅನುಗುಣವಾಗಿ ನಮ್ಮ ಪ್ರವಾಸ ಮುಂದುವರಿಯಲಿದೆ. ಎಲ್ಲಾ ರೀತಿಯ ಭದ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಮಾಹಿ ಎಂಬ ಮೋಟರ್‌ ಗ್ಲೆ„ಡರ್‌ನಲ್ಲಿ ದೇಶದಿಂದ ದೇಶಕ್ಕೆ ಸಾಗಲಿದ್ದೇವೆ. ಪ್ರತಿದಿನ ಸೂರ್ಯೋದಯದ ನಂತರ ಆರಂಭವಾಗುವ ನಮ್ಮ ಪ್ರಯಾಣ, ಸೂರ್ಯಾಸ್ಥದೊಳಗೆ ಅಂತ್ಯವಾಗ ಲಿದೆ. ದಿನವೊಂದಕ್ಕೆ 600ರಿಂದ 1200 ಕಿ.ಮೀ ಸಂಚಾರ ಮಾಡುವ ಸಾಮಥ್ಯವನ್ನು ಮೋಟರ್‌ ಗ್ಲೆ„ಡರ್‌ ಹೊಂದಿದೆ ಎಂದು ವಿವರಿಸಿದರು.

ವಿಮಾನಯಾನ ಹೊಸ ಪ್ರಯತ್ನಕ್ಕೆ ಮಗಳು ಕೂಡ ಉತ್ಸುಕಳಾಗಿದ್ದಾಳೆ. ನಮ್ಮ ಈ ಯೋಜನೆಯ ಮಾಹಿತಿಯನ್ನು www.wefl y.org.in ನಲ್ಲಿ ಪಡೆಯಬದು ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಮಹತ್ತರ ಉದ್ದೇಶದೊಂದಿಗೆ ಅಮ್ಮನ ಜತೆಗೆ ಮೋಟರ್‌ಗ್ಲೆ„ಡರ್‌ನಲ್ಲಿ ವಿಶ್ವಪ್ರಯಾಣ ಮಾಡಲಿದ್ದೇನೆ. ಆಕಾಶದಲ್ಲಿ ಹಾರಾಡ ಬೇಕೆಂದು ಅನೇಕರು ಬಯಸುತ್ತಾರೆ. ಆದರೆ, ಎಲ್ಲರ ಕನಸು ನನಸಾಗುವುದಿಲ್ಲ. ಈ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು.
–  ಅಮಿÂ ಮೆಹ್ತಾ, ದೀಪಿಕಾ ಮಗಳು

ಮಹಿಳಾ ಸಬಲೀಕರಣ ಉದ್ದೇಶದ ಈ ಯೋಜನೆ ಯಶಸ್ಸು ಸಾಧಿಸಲಿದೆ. ಕೇಂದ್ರ ಸರ್ಕಾರದ ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮ ನಡೆಯುತ್ತಿದೆ. ಹೆಣ್ಣು ಮಕ್ಕಳ ಶಿಕ್ಷಣದ ಜತಗೆ ಅವರಿಗೆ ಉತ್ತಮ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಗುರಿಯಾಗಬೇಕು.
–  ಮೊಸೆಸ್‌ ಚಾಲೈ, ಜಂಟಿ ಕಾರ್ಯದರ್ಶಿ,
ಕೇಂದ್ರ ಮಹಿಳಾ, ಮಕ್ಕಳ ಅಭಿವೃದಿಟಛಿ ಇಲಾಖೆ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.