ನಮಗೆ ಪ್ರತ್ಯೇಕ ರಾಜ್ಯ ಅಲ್ಲ,ಅಭಿವೃದ್ಧಿ ಬೇಕು: ಯತ್ನಾಳ್‌


Team Udayavani, Jun 8, 2017, 10:47 AM IST

Basanagouda.jpg

ವಿಧಾನಪರಿಷತ್‌: “ಕಳೆದ 30-40 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಿಂದ ಆಯ್ಕೆಯಾದ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು, ವಿಧಾನಸೌಧದಕ್ಕೆ ಬಂದು ನಿದ್ದೆ ಮಾಡಿ ಹೋಗಿ ಆ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ. ಅನ್ಯಾಯ ಮಾಡಿದವರೇ ಇಂದು ನಮಗೆ ಅನ್ಯಾಯ ಆಗಿದೆ,ಪ್ರತ್ಯೇಕ ರಾಜ್ಯ ಬೇಕು ಎಂದು ಭಾಷಣ ಹೊಡೆಯುತ್ತಾರೆ.

ಆದರೆ, ನಮಗೆ ಪ್ರತ್ಯೇಕ ರಾಜ್ಯ ಅಲ್ಲ, ಅಭಿವೃದ್ಧಿ ಬೇಕು’ ಎಂದು ವಿಧಾನಪರಿಷತ್ತಿನ ಪಕ್ಷೇತರ ಸದಸ್ಯ ಬಸವನಗೌಡ ಪಾಟೀಲ್‌ ಯತ್ನಾಳ್‌ ತೀಕ್ಷ್ಣ ಮಾತುಗಳನ್ನಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಸಂತ್ರಸ್ತ ಕುಟುಂಬಗಳಿಗೆ ಏಕರೂಪ ಪರಿಹಾರ ಒದಗಿಸುವ ಕುರಿತು ನಿಯಮ 330 ಅಡಿಯಲ್ಲಿ ಪ್ರಸ್ತಾಪಿಸಲಾದ ವಿಷಯದ ಮೇಲೆ ಮಾತನಾಡಿ, “ನನ್ನದು ಅಖಂಡ ಕರ್ನಾಟಕದ ಕಲ್ಪನೆ. ಹಾಗಾಗಿ ಪ್ರತ್ಯೇಕ ರಾಜ್ಯ ಬೇಕಿಲ್ಲ. ಉತ್ತರ ಕರ್ನಾಟಕ ಭಾಗ ಅಭಿವೃದ್ದಿ ಆಗಿದ್ದಿದ್ದರೆ, ಯಾರೂ ಪ್ರತ್ಯೇಕ ರಾಜ್ಯ ಕೇಳುತ್ತಿರಲಿಲ್ಲ. ಅಭಿವೃದ್ಧಿ ಮಾಡದೇ ತಾವೇ ಅನ್ಯಾಯ ಮಾಡಿ, ಈಗ ನಮಗೆ ಅನ್ಯಾಯ ಆಗಿದೆ ಪ್ರತ್ಯೇಕ ರಾಜ್ಯ ಬೇಕು ಎಂದು ಉತ್ತರ ಕರ್ನಾಟಕ ಭಾಗದ ಕೆಲ ಜನಪ್ರತಿ ನಿಧಿಗಳು ಕೇಳುತ್ತಿರುವುದು ವಿಪರ್ಯಾಸ ಎಂದರು.

ಒಗ್ಗಟ್ಟಿನ ಕೊರತೆ: ಮೈಸೂರು ಮಹಾರಾಜರ ಕಾರಣಕ್ಕಾಗಿ ವಿಶ್ವೇಶ್ವರಯ್ಯ ಕನ್ನಂಬಾಡಿ ಕಟ್ಟಿದರು. ಅಲ್ಲದೇ ಈ ಭಾಗದ ಜನ ಮತ್ತು ಜನಪ್ರತಿನಿಧಿಗಳಿಗೆ ನೀರಾವರಿಯ ಮಹತ್ವ ಗೊತ್ತಿತ್ತು, ಒಗ್ಗಟ್ಟು ಇತ್ತು. ಆದ್ದರಿಂದ ಮೈಸೂರು ಕರ್ನಾಟಕ ಭಾಗ ಅಭಿವೃದ್ಧಿ ಕಂಡಿತು. ಆದರೆ, ನಮ್ಮ ಕಡೆ (ಉತ್ತರ ಕರ್ನಾಟಕ) ಮಹತ್ವ ಗೊತ್ತಾಗಿಲ್ಲ, ಒಗ್ಗಟ್ಟಂತೂ ಇರಲೇ ಇಲ್ಲ. ಈಗಲೂ ಕಿತ್ತಾಟ ನಡೆಯುತ್ತದೆ.

ಜನ ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳಿಸಿದರೆ, ಇಲ್ಲಿ ರೊಟ್ಟಿ-ಬ್ಯಾಳಿ ತಿಂದು ನಿದ್ದೆ ಮಾಡಿ ಕಾಲ ಕಳೆದು ಅನ್ಯಾಯ ಮಾಡಿದವರೇ, ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೇ ಅದಕ್ಕಾಗಿ ಪ್ರತ್ಯೇಕ ರಾಜ್ಯ ಬೇಕು ಎಂದು ಭಾಷಣ ಮಾಡುತ್ತಾರೆ ಎಂದು ಯತ್ನಾಳ್‌ ಹೇಳಿದರು. 

ಟಾಪ್ ನ್ಯೂಸ್

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

police

Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು

1-pap

ಪತ್ರಿಕಾ ವಿತರಕರಿಗೆ ಅಂಬೇಡ್ಕರ್‌ ಕಾರ್ಮಿಕರ ಸಹಾಯ ಯೋಜನೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.