ಪಾಶ್ಚಾತ್ಯ ಸಂಸ್ಕೃತಿ ಗುಂಗು ಇನ್ನೂ ಇದೆ


Team Udayavani, Oct 29, 2018, 12:06 PM IST

pashchtya.jpg

ಬೆಂಗಳೂರು: ದೇಶದ ಬಹಳಷ್ಟು ಲೇಖಕರು ಇನ್ನೂ ಪಾಶ್ಚಿಮಾತ್ಯ ಸಂಸ್ಕೃತಿಯ ಗುಂಗಿನಿಂದ ಹೊರ ಬಂದಿಲ್ಲ. ಆದರೆ ಇಂತಹವರ ಮಧ್ಯೆ ಭಾರತೀಯ ನೆಲ ಸಂವೇದನೆ ಪ್ರಜ್ಞೆಯನ್ನು ಕಾಪಾಡಿಕೊಂಡು ಪಾಶ್ಚಿಮಾತ್ಯಕ್ಕೆ ಪರ್ಯಾಯವಾಗಿ ಸಾಹಿತ್ಯ ಕೃಷಿ ಮಾಡುತ್ತಿರುವವರು ಡಾ.ಚಂದ್ರಶೇಖರ ಕಂಬಾರ ಎಂದು ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬಣ್ಣಿಸಿದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಗರದ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರರ “ಮಹಮೂದ್‌ ಗಾವಾನ್‌’ ನಾಟಕ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಂಬಾರರ ಬರಹಗಳು ಜಾಗತಿಕ ಸಾಹಿತ್ಯಕ್ಕೆ ಪರಿಚಯವಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆದರೆ ಜಾಗತಿಕ ಸಾಹಿತ್ಯ ಲೋಕದಲ್ಲಿ ಹೊಸ ಅಪ್ಪಟ ದನಿ ಮೊಳಗಿದಂತಾಗುತ್ತದೆ. ಅಷ್ಟರ ಮಟ್ಟಿಗೆ ಕಂಬಾರರ ಸಾಹಿತ್ಯಕ್ಕೆ ಮಹತ್ವ ಇದೆ ಎಂದು ಹೇಳಿದರು.

ಭೋಗ ಮತ್ತು ಅಧಿಕಾರ‌ ಹಲವು ಕಾಲಘಟ್ಟವನ್ನು ಕಾಡಿದ್ದು, ಸಾಹಿತ್ಯದಲ್ಲಿ ಇವೆರಡರ ಹುಡುಕಾಟದಲ್ಲಿ ಕಂಬಾರರು ಇದ್ದಾರೆ. ಲೈಂಗಿಕತೆ ಅವರ ಕಥೆಯ ಸಂಯೋಜನೆಯ ಒಂದು ಭಾಗ ಅಷ್ಟೇ. ಕಂಬಾರರ ಕಾದಂಬರಿ, ನಾಟಕ ಸೇರಿದಂತೆ ಹಲವು ಕೃತಿಗಳಲ್ಲಿ ಇವೆರಡೂ ಪ್ರಧಾನ ವಸ್ತುವಾಗಿವೆ. ಕನ್ನಡದ ವಿಮಶಾì ಲೋಕ ಕಂಬಾರರ ಭೋಗದ ಶಕ್ತಿ ಮತ್ತು ಪರಿಣಾಮಗಳನ್ನು ಹೇಗೆ ಗುರುತಿಸಿದೆ ಎಂಬುದರ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದೆ. ಈ ನಾಟಕದ ಮುನ್ನುಡಿಯಲ್ಲಿ ರಾಜೀವ್‌ ತಾರನಾಥ್‌ ಕೂಡ ಆ ಬಗ್ಗೆ ವಿವರವಾಗಿ ಪ್ರಸ್ತಾಪ ಮಾಡುತ್ತಾರೆ ಎಂದು ವಿವರಿಸಿದರು.

ರಾಜಕಾರಣ ಮತ್ತು ಧರ್ಮಗಳು ಇಂದು ಭ್ರಷ್ಟಗೊಂಡಿದ್ದು, ದೇಶದ ರಾಜಕೀಯ ವ್ಯವಸ್ಥೆಯು ಸರ್ವಾಧಿಕಾರಿ ವ್ಯವಸ್ಥೆ ಕಡೆಗೆ ವಾಲುತ್ತಿದೆ. ನಾಟಕದ ಕಥಾ ನಾಯಕ ಮಹಮೂದ್‌ ಗಾವಾನ್‌ ಆಡಳಿತ ಚತುರನಾಗಿರುವುದರ ಜತೆಗೆ ಸಾಮಾಜಿಕ ಕಾಳಜಿಯುಳ್ಳ, ಸಂಸ್ಕೃತಿ ಮೇಲೆ ಅಪಾರ ಗೌರವವಿದ್ದ ಹಾಗೂ ಧಾರ್ಮಿಕ ಶ್ರದ್ಧೆಯುಳ್ಳವನಾಗಿದ್ದ. ಹೀಗಾಗಿ, ಇಂದಿನ ರಾಜಕಾರಣಿಗಳಿಗೆ ಮಹಮೂದ್‌ ಗಾವಾನ್‌ ಅಂತಹವರು ಮಾದರಿಯಾಗಬೇಕು ಎಂದರು.

ವಿಮರ್ಶಕ ಬಸವರಾಜ ಕಲ್ಗುಡಿ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯ ಸಾಹಿತ್ಯದ ನಡುವೆಯೂ ಕಂಬಾರರು ಹೊಸ ಭಾಷೆಯನ್ನು ಸೃಷ್ಟಿಸಿ ಕಟ್ಟಿಕೊಟ್ಟಿದ್ದಾರೆ. ಆದರೆ, ನವ್ಯ ಕಾಲಘಟ್ಟದ ವಿಮರ್ಶಕರು ಕಂಬಾರರ ಸಾಹಿತ್ಯವನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ಸಾಹಿತ್ಯದಲ್ಲಿ ಲೈಂಗಿಕತೆಯೇ ಹೆಚ್ಚಿರುತ್ತದೆ ಎಂದು ಟೀಕಿಸಿದ್ದಾರೆ. ಹಾಡು ಮತ್ತು ಲಯ ದೇಹದ ಭಾಷೆಯಾಗಿದ್ದು, ಅಕ್ಷರ ಭಾಷೆಗಿಂತ ಭಿನ್ನವಾಗಿದೆ. ಅದೇ ರೀತಿ ಲಯಕ್ಕೆ ಲೈಂಗಿಕತೆ ಎಂಬ ಪ್ರಕೃತಿ ನಿಯಮವನ್ನು ಅಳವಡಿಸಿದ್ದಾರೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌, ನಗರ ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾಯಣ್ಣ ಉಪಸ್ಥಿತರಿದ್ದರು.

ನೋ ಎನ್ನುವ ಧೈರ್ಯ ಮಾಡಲಿಲ್ಲ: ಬ್ರಿಟಿಷರು ಭಾರತಕ್ಕೆ ಬರುವ ಮೊದಲೇ ನಮ್ಮಲ್ಲಿ ಇತಿಹಾಸವಿತ್ತು. ರಾಮಾಯಣ ಮತ್ತು ಮಹಾಭಾರತಗಳು ಇತಿಹಾಸಗಳಾಗಿವೆ. ಆದರೂ ಇತಿಹಾಸ ಯಾವುದು ಎಂಬುದರ ಬಗ್ಗೆ ನಮ್ಮಲ್ಲಿಯೇ ಗೊಂದಲವಿದೆ. “ನೋ’ ಎನ್ನುವ ಧೈರ್ಯ ತೋರದೆ ಬ್ರಿಟೀಷರು ಹೇಳಿದ ಎಲ್ಲವನ್ನೂ ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಅದನ್ನೇ ಬಂಡವಾಳ ಮಾಡಿಕೊಂಡಿದ್ದ ವಿದೇಶಿಯರು ನಮ್ಮ ಸಂಸ್ಕೃತಿಯನ್ನು ಮೂಢನಂಬಿಕೆ ಎಂಬಂತೆ ನಂಬಿಸಿದರು. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳಿಗೆ ದೊಡ್ಡ ಇತಿಹಾಸವಿದೆ. ಇದನ್ನೇ ನಾವು ನಂಬಬೇಕಿದೆ ಎಂದು ಡಾ.ಚಂದ್ರಶೇಖರ ಕಂಬಾರ ಹೇಳಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.