Crime: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
Team Udayavani, Sep 9, 2024, 10:02 AM IST
ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಳಿಮಾವು ಸಮೀಪದ ಅಕ್ಷಯ ನಗರದ ನಿವಾಸಿ ಅನುಷಾ(27) ಮೃತ ಮಹಿಳೆ. ಸೆ.5ರಂದು ಮನೆಯ ಬಾತ್ರೂಮ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸೆ.6ರಂದು ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಆಕೆಯ ತಾಯಿ ರೇಣುಕಾ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಅನುಷಾ ಅವರ ಪತಿ ಟೆಕಿ ಶ್ರೀಹರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಶ್ರೀಹರಿಯ ಅನೈತಿಕ ಸಂಬಂಧವೇ ದುರ್ಘಟನೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಶ್ರೀಹರಿ ಮತ್ತು ಅನುಷಾ 5 ವರ್ಷಗಳ ಹಿಂದೆ ಮದುವೆಯಾ ನಗರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿ ದ್ದರು. ಶ್ರೀಹರಿ ಮಾರತ್ಹಳ್ಳಿಯಲ್ಲಿರುವ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅನುಷಾ ಮನೆಯಲ್ಲೇ ಇರುತ್ತಿದ್ದರು. ಬೇರೊಬ್ಬ ಮಹಿಳೆ ಜತೆ ಸಂಬಂಧ ಹೊಂದಿದ್ದ ಶ್ರೀಹರಿ, ಮಹಿಳೆಯರ ಜತೆ ವಿಡಿಯೋ ಕಾಲ್, ಅಸಭ್ಯ ಸಂಭಾಷಣೆ ಮಾಡುತ್ತಿದ್ದ. ಈ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಪತ್ನಿ ಮೇಲೆಯೇ ಹಲ್ಲೆ ನಡೆಸುತ್ತಿದ್ದ ಎಂದು ಮೃತಳ ಪೋಷಕರು ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪತಿಯ ದುರ್ವರ್ತನೆಯನ್ನು ಅನುಷಾ ತನ್ನ ಪೋಷಕರಿಗೆ ತಿಳಿಸಿದ್ದು, ಅವರು ಪೊಲೀಸ್ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು. ಆದರೆ, ಅನುಷಾ, ಪತಿಯೊಂದಿಗೆ ಮತ್ತೂಮ್ಮೆ ಮಾತನಾಡಿ ಸರಿಪಡಿಸಿಕೊಳ್ಳುತ್ತೇನೆ ಎಂದು ಪೋಷಕರಿಗೆ ಹೇಳಿದ್ದರು. ಅಷ್ಟರಲ್ಲಿ ಸಹೋದ್ಯೋಗಿ ಜತೆ ಅನುಚಿತ ವರ್ತನೆ ಸಂಬಂಧ ಶ್ರೀಹರಿಯನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.
ನಟ ದರ್ಶನ್ ರೀತಿ ನಾನು ಇನ್ನೊಂದು ಸಂಬಂಧ ಇಟ್ಟುಕೊಂಡರೆ ತಪ್ಪೇನು?: ಪತ್ನಿ ಗೆ ಪತಿ ಬೆದರಿಕೆ: ಕೆಲಸ ಕಳೆದುಕೊಂಡಿದ್ದ ಶ್ರೀಹರಿ ಮೂರು ತಿಂಗಳಿಂದ ಮನೆಯಲ್ಲೇ ಇರುತ್ತಿದ್ದ. ಆ.5ರಂದು ಪತ್ನಿ ಜತೆ ಜಗಳವಾಡುತ್ತಾ ನಾನು ಇನ್ನೊಂದು ಮದುವೆಯಾದರೆ ತಪ್ಪೇನು? ದರ್ಶನ್ ರೀತಿ ನಾನು ಇನ್ನೊಂದು ಸಂಬಂಧ ಇಟ್ಟುಕೊಂಡರೆ ತಪ್ಪೇನು? ಎಂದು ಪತ್ನಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಿಂದ ಬೇಸತ್ತ ಅನುಷಾ ಮನೆಯ ಬಾತ್ರೂಮ್ನಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಪತ್ನಿ ಬೆಂಕಿ ಹಚ್ಚಿಕೊಂಡಿದ್ದರೂ ಪತಿ ಶ್ರೀಹರಿ ರಕ್ಷಣೆಗೆ ಹೋಗಿಲ್ಲ. ಆಗ ಆಕೆಯ ಜೋರು ಶಬ್ದ ಕೇಳಿ ನಾನೇ ಪಕ್ಕದ ಮನೆಯರ ರಕ್ಷಣೆ ಕೋರಿ ಆಸ್ಪತ್ರೆಗೆ ಕೆರದೊಯ್ದೆ ಎಂದು ಅನುಷಾ ತಾಯಿ ರೇಣುಕಾ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಅನುಷಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೆ.6ರಂದು ತಡರಾತ್ರಿ ಅನುಷಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.