ಕಾಡು ಪ್ರಾಣಿ ಹಾವಳಿ: ಶಾಶ್ವತ ಪರಿಹಾರಕ್ಕೆ ತಜ್ಞರ ಸಮಿತಿ ರಚಿಸಿ

ಆನೆಗಳ ಚಲನ-ವಲನಗಳ ಮೇಲೆ ನಿಗಾ ಇಡಲು ಅವುಗಳ ಕೊರಳಿಗೆ ರೇಡಿಯೋ ಕಾಲರ್‌ ಹಾಕಲಾಗುತ್ತಿದೆ.

Team Udayavani, Sep 23, 2022, 2:19 PM IST

ಕಾಡು ಪ್ರಾಣಿ ಹಾವಳಿ: ಶಾಶ್ವತ ಪರಿಹಾರಕ್ಕೆ ತಜ್ಞರ ಸಮಿತಿ ರಚಿಸಿ

ವಿಧಾನಸಭೆ: ಮಾನವ-ಪ್ರಾಣಿ ಸಂಘರ್ಷದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಸದನದಲ್ಲಿ ಪ್ರಸ್ತಾಪವಾಗಿ ಶಾಸಕರು ಸಮಸ್ಯೆಗಳನ್ನು ಸದನದ ಮುಂದೆ ಬಿಚ್ಚಿಟ್ಟರು. ಸ್ವತಃ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಿಷಯದ ಗಂಭೀರತೆಯನ್ನು ಮನಗಾಣುವಂತೆ ಸರ್ಕಾರಕ್ಕೆ ಹೇಳಿದರು. “ಕಾಡು ಪ್ರಾಣಿಗಳ ಹಾವಳಿಯಿಂದ ರೈತರಿಗೆ ಬೆಳೆ ಹಾನಿ ನಿರೀಕ್ಷೆಗೂ ಮೀರಿ ಆಗುತ್ತಿದೆ. ಪ್ರಾಣ ಹಾನಿಯೂ ಸಂಭವಿಸುತ್ತಿದೆ.

ಸರ್ಕಾರ ಈ ವಿಚಾರವನ್ನು ಗಂಭೀರ ವಾಗಿ ಪರಿಗಣಿಸಬೇಕು. ಇದು ಇಡೀ ರಾಜ್ಯದ ಸಮಸ್ಯೆಯಾಗಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಮಿತಿ ರಚಿಸಿ, ಅದರಿಂದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಿ’ ಎಂದು ಸ್ಪೀಕರ್‌ ಕಾಗೇರಿ ಸರ್ಕಾರಕ್ಕೆ ಸೂಚನೆ ನೀಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಮೂಡಿಗೆರೆ ತಾಲೂಕಿನಲ್ಲಿ ಆನೆಗಳ ಹಾವಳಿ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಪೂರಕವಾಗಿ ಕೆಲವು ಶಾಸಕರು ಮಾತನಾಡಿ, ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಆಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್‌ ಕಾಗೇರಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಹೇಳಿದರು.

ಆನೆಗಳ ಭ್ರೂಣ ಹತ್ಯೆ ಮಾಡಿ: ಆನೆ ಹಾವಳಿ ವಿಚಾರದಲ್ಲಿ ಸರ್ಕಾರದ ಧೋರಣೆ “ನಾವು ಪರಿಹಾರ ಕೊಡ್ತೀವಿ-ನೀವು ಸಾಯಲಿಕ್ಕೆ ರೆಡಿ ಇರಿ’ ಎಂಬಂತಿದೆ. ನನ್ನ ಕ್ಷೇತ್ರದಲ್ಲಿ ಆನೆ ದಾಳಿಯಿಂದ 6 ಜನ ಸತ್ತಿದ್ದಾರೆ. ಇವತ್ತು ಪ್ರಾಣಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಚುನಾವಣೆ ಸಂದರ್ಭದಲ್ಲಿ ಜನ ನಮ್ಮ ಮೇಲೆ ದಾಳಿ ಮಾಡುತ್ತಾರೆ. ಸರ್ಕಾರಕ್ಕೆ-ನ್ಯಾಯಾಲಯಕ್ಕೆ ಆನೆಗಳು ಬೇಕಾಗಿವೆ. ಆನೆ ದಾಳಿಯಿಂದ ಮೃತಪಟ್ಟರೆ ಅವರು ಕುಟುಂಬದವರು ಶವ ಇಟ್ಟು ನಮ್ಮನ್ನು ಕರಿತಾರೆ. ಜನರಿಗೆ ಆನೆ ಬೇಕಿಲ್ಲ. ಆನೆಗಳಿಗೆ ಸ್ಥಳಾಂತರ ಮಾಡಿ, ಕಾರಿಡಾರ್‌ ನಿರ್ಮಿಸಿ ಇಲ್ಲವೇ ಆನೆಗಳ ಸಂಖ್ಯೆ ಕಡಿಮೆ ಮಾಡಲು ಆನೆಗಳ ಭ್ರೂಣ ಹತ್ಯೆಯಾದರೂ ಮಾಡಿ ಎಂದು ಎಂ.ಪಿ.ಕುಮಾರಸ್ವಾಮಿ ಸಲಹೆ ನೀಡಿದರು.

“ಮೂಡಿಗೆರೆ ಬೈರಾ’ ಕೈಗೆ ಸಿಗ್ತಿಲ್ಲ: ಎಂ.ಪಿ. ಕುಮಾರಸ್ವಾಮಿ ಪ್ರಶ್ನೆಗೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌, 2000ದಿಂದ ಇಲ್ಲಿವರೆಗೆ ಮೂಡಿಗೆರೆಯಲ್ಲಿ 74 ಆನೆಗಳನ್ನು ಹಿಡಿದು ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಒಂದು ಪ್ರಾಣ ಹಾನಿ ಸಂಭವಿಸಿದೆ.

ಆನೆಗಳ ಚಲನ-ವಲನಗಳ ಮೇಲೆ ನಿಗಾ ಇಡಲು ಅವುಗಳ ಕೊರಳಿಗೆ ರೇಡಿಯೋ ಕಾಲರ್‌ ಹಾಕಲಾಗುತ್ತಿದೆ. ಆನೆ ಹಾವಳಿ ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ, ಭ್ರೂಣ ಹತ್ಯೆ ಪ್ರಸ್ತಾಪ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಮೂಡಿಗೆರೆ ತಾಲೂಕಿನಲ್ಲಿ ಜನರಿಗೆ ಉಪಟಳ ನೀಡುತ್ತಿರುವ ಒಂದು ಆನೆ ಕೈಗೆ ಸಿಗುತ್ತಿಲ್ಲ. ಅದರ ಹೆಸರು “ಮೂಡಿಗೆರೆ ಬೈರಾ’ ಎಂದು ಇಡಲಾಗಿದೆ. ಇದನ್ನು ಸೆರೆ ಹಿಡಿಯಲು ಸೆ.9ರಂದು ಸೂಚಿಸಲಾಗಿದ್ದು, ತಂಡ ರಚಿಸಲಾಗಿದೆ ಎಂದರು.

ಶಾಸಕ ಅಪ್ಪಚ್ಚು ರಂಜನ್‌, ಒಂದು ಕಡೆ ಉಪಟಳ ಮಾಡುವ ಆನೆಗಳನ್ನು ಸ್ಥಳಾಂತರ ಮಾಡುವುದು ಸರಿ. ಆದರೆ, ಆ ಆನೆಗಳನ್ನು ಎಲ್ಲಿಗೆ ಬಿಡುತ್ತಾರೆ? ಅವು ಹೋದ ಕಡೆಯೂ ಮತ್ತೆ ಕಾಟ ಕೊಡುತ್ತವೆ. ಅವುಗಳಿಗೆ ಆಹಾರ ಸಿಗುವ ಮರಗಳನ್ನು ಕಾಡಿನಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಶಾಸಕ ನರೇಂದ್ರ, ಚಾಮರಾಜನಗರ ಜಿಲ್ಲೆಯಲ್ಲಿ ಮೊದಲೇ ಆನೆ ಹಾವಳಿ ಹೆಚ್ಚಾಗಿದೆ. ಇಂತಹದ್ದರಲ್ಲಿ ಬೇರೆ ಕಡೆ ಪುಂಡಾಟ ನಡೆಸುವ ಆನೆಗಳನ್ನು ತಂದು ನಮ್ಮಲ್ಲಿ ಬಿಡುತ್ತಾರೆ. ಇತ್ತೀಚೆಗೆ 3 ಪುಂಡಾನೆಗಳನ್ನು ನಮ್ಮಲ್ಲಿ ತಂದು ಬಿಟ್ಟಿದ್ದಾರೆ. ಅದರಲ್ಲಿ 1 ಆನೆ ಊರು ಬಿಟ್ಟು ಹೋಗುತ್ತಿಲ್ಲ. ಬೇರೆ ಕಡೆ ಹಿಡಿದ ಆನೆಯನ್ನು ನಮ್ಮಲ್ಲಿ ಬಿಡಬಾರದು ಎಂದು ಒತ್ತಾಯಿಸಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಇದು ಇಡೀ ರಾಜ್ಯದ ಸಮಸ್ಯೆಯಾಗಿದೆ. ಕಾಡಾನೆ, ಕಾಡುಕೋಣ, ನವಿಲು, ಚಿರತೆ, ಜಿಂಕೆ ಹೀಗೆ ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿದೆ. ಪರಿಹಾರವನ್ನು ಹೆಚ್ಚಿಸಬೇಕು ಎಂದು ಹೇಳಿದರು. ನಮ್ಮ ಕಡೆ ಮಂಗಗಳ ಹಾವಳಿಯೂ ಇದೆ. ಬೇರೆಡೆ ಹಿಡಿದ ಮಂಗಗಳನ್ನು ತಂದು ಬಿಡುತ್ತಿದ್ದಾರೆ. ಇದಕ್ಕೆಲ್ಲ ಶಾಶ್ವತ ಪರಿಹಾರ ಕಂಡು ಹಿಡಿಯಲು ತಜ್ಞರ ಸಮಿತಿಯನ್ನು ರಚಿಸಿ, ಈ ಬಗ್ಗೆ ಮುಖ್ಯಮಂತ್ರಿಗಳ
ಗಮನಕ್ಕೆ ತರುವುದಾಗಿಯೂ ಹೇಳಿದರು.

ಬೆಳೆ ನಷ್ಟ ಪರಿಹಾರ ದ್ವಿಗುಣ
ರಾಜ್ಯದಲ್ಲಿ ಆನೆ ಹಾವಳಿಯಿಂದ ಆಗುವ ಬೆಳೆ ನಷ್ಟ ಪರಿಹಾರವನ್ನು ದ್ವಿಗುಣ ಮಾಡಲಾಗಿದೆ. ಹಾಗೆಯೇ ಆನೆ ದಾಳಿಯಿಂದ ಮೃತಪಟ್ಟವರಿಗೆ ನೀಡುವ ಪರಿಹಾರವನ್ನು 7.5 ಲಕ್ಷದಿಂದ 15 ಲಕ್ಷದವರೆಗೆ ಏರಿಕೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಸಚಿವ
ಶಿವರಾಮ್‌ ಹೆಬ್ಬಾರ್‌ ತಿಳಿಸಿದರು.

ಆನೆ ಹಾವಳಿಯ ಬಗ್ಗೆ ಬುಧವಾರ ಸದನದಲ್ಲಿ ಚರ್ಚೆಯಾಗಿದೆ. ಮುಖ್ಯಮಂತ್ರಿಗಳು ಉತ್ತರ ನೀಡುವ ಸಂದರ್ಭದಲ್ಲಿ ಆನೆ ದಾಳಿಯಿಂದ ಮೃತಪಡುವವರಿಗೆ ನೀಡುವ ಪರಿಹಾರವನ್ನು 7.5 ಲಕ್ಷದಿಂದ 15 ಲಕ್ಷಕ್ಕೆ ಏರಿಸುವ ಪ್ರಕಟಣೆ ಮಾಡಿದ್ದಾರೆ. ಹಾಗೆಯೇ ಬೆಳೆ ಪರಿಹಾರ ಮೊತ್ತವನ್ನು ದ್ವಿಗುಣ ಮಾಡಲಾಗಿದೆ ಎಂದರು.ಆನೆ ಹಾವಳಿ ಹೆಚ್ಚಿರುವ ಕಡೆ ಆನೆಗಳನ್ನು ಹಿಡಿದು ಬೇರೆಡೆಗೆ ಬಿಡಲಾಗುತ್ತಿದೆ. ಜತೆಗೆ ರೈಲ್ವೆ ಹಳಿಗಳಿಗೆ ಫೆನ್ಸಿಂಗ್‌ ಹಾಕಲಾಗುತ್ತಿದೆ. ಇದಕ್ಕಾಗಿಯೇ 100 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ಒದಗಿಸಿದ್ದಾರೆ ಎಂದರು. ಆನೆ ದಾಳಿಗೆ ಹೆದರಿ ಬೆಳೆ ಬೆಳೆಯದ ರೈತರಿಗೆ ಪರಿಹಾರ ಒದಗಿಸುವ ವಿಚಾರ ಮುಖ್ಯಮಂತ್ರಿಯವರ ಗಮನಕ್ಕೆ ತರುವುದಾಗಿ ಹೆಬ್ಟಾರ್‌ ತಿಳಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.