ಮಹಿಳೆಯರ ರಕ್ಷಣೆಗೆ ಬರಲಿವೆ ಪಿಂಕ್ ಹೊಯ್ಸಳ
Team Udayavani, Feb 26, 2017, 11:37 AM IST
ಬೆಂಗಳೂರು: ರಾಜಧಾನಿಯಲ್ಲಿ ತಡರಾತ್ರಿ ಕೆಲಸ ಮುಗಿಸಿಕೊಂಡು ಹೋಗುವ ಉದ್ಯೋಗಸ್ಥ ಮಹಿಳೆರಿಗೆ ಸಾರ್ವಜನಿಕ ಪ್ರದೇಶಗಳಲ್ಲಿ ಪುಂಡಪೋಕರಿಗಳಿ ಕಿರುಕುಳ ನೀಡುವ ಪ್ರಕರಣಗಳು ಆಗಾಗ ನಡೆಯುತ್ತಲೇ ಇರುತ್ತವೆ. ಹೀಗಾಗಿ, ಅಸಭ್ಯವರ್ತನೆಗಳಿಂದ ಬೇಸತ್ತ ಮಹಿಳೆಯರು ಹಾಗೂ ಮಕ್ಕಳಿಗೆ ಸುರಕ್ಷತೆ ಒದಗಿಸಲು ನಗರ ಪೊಲೀಸ್ ಇಲಾಖೆ ಹೊಸ ಕ್ರಮ ಕೈಗೊಂಡಿದೆ.
ಈ ನಿಟ್ಟಿನಲ್ಲಿ ಮಹಿಳಾ ಪೊಲೀಸ್ ಸಿಬ್ಬದಿಯೇ ಇರುವ ಪಿಂಕ್ ಹೊಯ್ಸಳ ವಾಹನಗಳು ಬೆಂಗಳೂರಿನ ರೋಡಿಗಿಳಿಯಲಿವೆ. ವಿಶೇಷವಾಗಿ ಮಾರ್ಚ್ 8ರ ಮಹಿಳಾ ದಿನಾಚಾರಣೆಯಂದೇ 50 ಪಿಂಕ್ ಹೊಯ್ಸಳಗಸ್ತು ವಾಹನಗಳಿಗೆ ಚಾಲನೆ ದೊರೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ನಗರದ ಪ್ರತಿ ಡಿಸಿಪಿ ವಿಭಾಗದಲ್ಲಿ 3 ಅಥವಾ 4 ಪಿಂಕ್ ಹೊಯ್ಸಳ ವಾಹನಗಳು ಗಸ್ತು ತಿರುಗಲಿವೆ.
ಕಂಟ್ರೋಲ್ ರೂಂನಿಂದ ಬರುವ ಮೆಸೇಜ್ ಆಧರಿಸಿ ಸಂಕಷ್ಟದಲ್ಲಿರುವ ಮಹಿಳೆಯರ ಸ್ಥಳಕ್ಕೆ ಕ್ಷಣಾರ್ಧದಲ್ಲಿ ಧಾವಿಸಲಿವೆ. ಪ್ರತಿ ವಾಹನದಲ್ಲಿ ಓರ್ವ ಮಹಿಳಾ ಸಿಬ್ಬಂದಿ ಕರ್ತವ್ಯದಲ್ಲಿರಲಿದ್ದಾರೆ. ಹೈಟೆಕ್ ಹೊಯ್ಸಳ ಮಾದರಿಯಲ್ಲಿಯೇ ಈ ವಾಹನಗಳು ಕಾರ್ಯನಿರ್ವಹಣೆ ಮಾಡಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ನಗರದಲ್ಲಿ ಮಹಿಳೆಯರಿಗೆ ಅಸುರಕ್ಷಿತ ಎನಿಸುವ ಜನನಿಬಿಡ ಪ್ರದೇಶಗಳು, ಹಾಸ್ಟೆಲ್ಗಳು, ವಸತಿ ಸಮುತ್ಛಯಗಳು, ಶಾಪಿಂಗ್ ಮಾಲ್ಗಳು ಸೇರಿದಂತೆ ಪ್ರಮುಖ 50 ಸ್ಥಳಗಳಲ್ಲಿ ಪಿಂಕ್ ಹೊಯ್ಸಳ ವಾಹನಗಳ ನಿಲುಗಡೆ ಮಾಡಲು ಸ್ಥಳ ಗುರುತಿಸಲಾಗಿದೆ.ಅಲ್ಲದೆ ನಿಗದಿಪಡಿಸಿದ ಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಗಸ್ತು ತಿರುಗಲಿವೆ.
ಪ್ರತಿ ವಾಹನಕ್ಕೂ ಜಿಪಿಎಸ್ ತಂತ್ರಜ್ಞಾನವೂ ಅಳವಡಿಸುವ ಚಿಂತನೆಯಿದೆ. ಹೊಯ್ಸಳ ವಾಹನಗಳ ಜತೆ ಪಿಂಕ್ ಹೊಯ್ಸಳ ಕಾರ್ಯನಿರ್ವಹಣೆಯೂ ಆರಂಭವಾದರೆ ಮಹಿಳೆಯರಿಗೆ ಮತ್ತಷ್ಟು ಭದ್ರತಾ ಮನೋಭಾವ ಮೂಡಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.
ಸ್ನೇಹ ಸಂವಾದ ಅವಕಾಶ
ಕಾಲೇಜು ವಿದ್ಯಾರ್ಥಿಗಳು ಖಾಸಗಿ ಕಂಪೆನಿ ಉದ್ಯೋಗಿಗಳು ಹೆಚ್ಚಿರುವ ಸ್ಥಳಗಳಿಗೆ ತೆರಳುವ ಪಿಂಕ್ಹೊಯ್ಸಳ ಸಿಬ್ಬಂದಿ ಅವರ ಜತೆ ಸೌಹಾರ್ದಯುತ ಮಾತುಕತೆಯೂ ನಡೆಸಲು ಸೂಚಿಸಲಾಗಿದೆ. ಪುಂಡಪೋಕರಿಗಳ ಹಾವಳಿಯ ಎಲ್ಲಿ ಹೆಚ್ಚಿದೆ ಎಂಬ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಲಾಗುತ್ತದೆ. ಮಹಿಳಾ ಸಿಬ್ಬಂದಿಯೇ ಕರ್ತವ್ಯದಲ್ಲಿರುವುದರಿಂದ ಯಾವುದೇ ಹಿಂಜರಿಕೆಯಿಲ್ಲದೆ ಸಮಸ್ಯೆ ಹೇಳಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.