World Kundapura Kannada Day: ಬೆಂಗಳೂರಿನಲ್ಲಿ ಕುಂದಾಪ್ರ ಹಬ್ಬದ ಸಂಭ್ರಮ


Team Udayavani, Aug 5, 2024, 10:46 AM IST

World Kundapura Kannada Day: ಬೆಂಗಳೂರಿನಲ್ಲಿ ಕುಂದಾಪ್ರ ಹಬ್ಬದ ಸಂಭ್ರಮ

ಬೆಂಗಳೂರು: ಕಬ್ಬರ, ಉರಿಯ, ಕಡ್ಲಾ, ಬಂಟಾ (ವಿವಿಧ ತಳಿಯ ಅಂಕದ ಕೋಳಿಗಳು )ನಡುವಿನ ರಣರೋಚಕ ಕಾದಾಟ ಬಸವೇಶ್ವರ ನಗರದ ನೇತಾಜಿ ಮೈದಾನದ ಧೂಳೆಬ್ಬಿಸಿದೆ. ಸಹಸ್ರ ಕಣ್ಣುಗಳು ರೋಚಕವಾದ ಗಮ್ಮತ್ತಿನ ಅಣಕು ಕೋಳಿಪಡಿಯನ್ನು ನೋಡಿ ಸಂಭ್ರಮಿಸುತ್ತಿರುವ ಅಪರೂಪದ ದೃಶ್ಯ ಕಂಡು ಬಂದಿದ್ದು ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ.

ಭಾನುವಾರ ಟೀಂ ಕುಂದಾಪುರಿಯನ್ಸ್‌ ಹಮ್ಮಿಕೊಂಡಿದ್ದ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಕುಂದ ಗನ್ನಡಿಗರ ಸಂಪೂರ್ಣ ಸಂಸ್ಕೃತಿ ಅನಾವರಣವಾಯಿತು. ಅನೇಕ ದಶಕಗಳ ಹಿಂದೆ ಬದುಕು ಕಟ್ಟಿಕೊಳ್ಳಲು ಬೆಂಗಳೂರು ಬಂದವರು, ತಮ್ಮೂರಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮುಂದಿನ ಪೀಳಿಗೆ ತಲುಪಿಸಬೇಕು ಎನ್ನುವ ಹಂಬಲದಲ್ಲಿರುವ ಅಪರೂಪದ “ಬೆಂಗಳೂರು- ಕುಂದಾಪುರಿಯನ್ಸ್‌’ ಮಿಲನಕ್ಕೆ ಭಾನುವಾರ ನಗರ ನೇತಾಜಿ ಮೈದಾನ ಸಾಕ್ಷಿಯಾಯಿತು.

ಗ್ರಾಮೀಣ ಕ್ರೀಡೆ ಸೊಬಗು: ಗ್ರಾಮೀಣ ಕ್ರೀಡೆ ನೋಡುಗರಿಗೆ ಮನೋರಂಜನೆಯನ್ನು ನೀಡಿತ್ತು. 6 ವರ್ಷದ ಮಕ್ಕಳಿಂದ ಹಿಡಿದು 70 ವರ್ಷದ ಹಿರಿಯರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಮಕ್ಕಳಿಗಾಗಿ ಆಯೋಜಿಸಿದ್ದ ಛದ್ಮವೇಷ, ಕಪ್ಪೆ ಓಟ, ರಗೋಲಿ, ಸ್ಪರ್ಧೆಯಲ್ಲಿ 6 ವರ್ಷದ ಮಕ್ಕಳಿಂದ ಹಿಡಿದು 14 ವರ್ಷದೊಳಗಿನ ಮಕ್ಕಳ ಸಂಭ್ರಮದಿಂದ ಭಾಗವಹಿಸಿದ್ದರು. ಹೂವು ನೆಯ್ಯುವುದು, ಮಹಿಳೆಯರಿಗಾಗಿ ಹಲಸಿನ ಕೊಟ್ಟೆ ಕೊಟ್ಟುವುದು, ಮಡ್ಲ್ ನೆಯ್ಯುವ ಸ್ಪರ್ಧೆ, ಇನ್ನೂ ದಂಪತಿಗಳಿಗಾಗಿ ದಂಪತಿಗಳಿಗೆ ಅಡಿಕೆ ಹಾಳೆ ಓಟ ಹಾಗೂ ಹಣೆಬೊಂಡ ಓಟ, ಗಿರ್ಗಿಟ್ಲೆ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಿತು. ಎಲ್ಲರೂ ವಯಸ್ಸಿನ ಅಂತರವನ್ನು ಮರೆತು ಭಾಗವಹಿಸಿದ್ದರು.

ಬಸ್‌ಗಳಲ್ಲಿ ಕುಂದಕನ್ನಡ: ಸಾಮಾನ್ಯವಾಗಿ ಬೆಂಗಳೂರು ಬಸ್‌ಗಳಲ್ಲಿ ಹೆಚ್ಚಾಗಿ ಕನ್ನಡ ಬಿಟ್ಟು ಬೇರೆ ಭಾಷೆಗಳನ್ನು ಮಾತನಾಡುವವರ ಸಂಖ್ಯೆ ಹೆಚ್ಚಾಗಿ ಕಾಣಸಿಗುತ್ತದೆ. ಆದರೆ, ಭಾನುವಾರ ಬಸವೇಶ್ವರ ನಗರದ ಸಾರ್ವಜನಿಕ ಸಾರಿಗೆಯಲ್ಲಿ ಕುಂದಕನ್ನಡ ಮಾತುಗಳು ಕೇಳಿ ಬಂತು. ಪರಿಚಯವಿಲ್ಲದ ಮುಖ ಗಳು ಒಬ್ಬರನೊಬ್ಬರು ನೋಡಿ ಮುಗುಳು ನಗೆ ಬೀರಿ ನಾವ್‌ ಕುಂದಾಪ್ರದವರು, ವಿಶ್ವ ಕುಂದಾಪ್ರ ಹಬ್ಬಕ್ಕೆ ಬಂದಿದ್ದ ನೀವ್‌ ಎನ್ನುವ ಮಾತುಗಳು ಕೇಳಿ ಬಂತು.

ಹಳ್ಳಿ ಊಟ ಸ್ವಾದ: ಕುಂದಕನ್ನಡಿಗರು ಮಾತ್ರವಲ್ಲದೇ ಬೇರೆ ಬೇರೆ ಜಿಲ್ಲೆಗಳ ರಾಜ್ಯಗಳ ಜನರು ಕುಂದಾಪ್ರ ದಿನಾಚರಣೆಗೆ ಬಂದಿರುವುದು ವಿಶೇಷ ಮೆರಗು ನೀಡಿತ್ತು. ಊಟಕ್ಕೆ ಕೊಚ್ಚಿಗೆ ಗಂಜಿ, ಉಪ್ಪಿನಕಾಯಿ, ಉಪ್ಪಿನಹೊಡಿ ನೀಡಲಾಗಿದೆ.

ನಾನು ಮೂಲತಃ ಬ್ರಹ್ಮಾವರ ತಾಲೂಕಿನವಳು. ಬೆಂಗಳೂರಿಗೆ ಬಂದು 9 ವರ್ಷಗಳು ಸಮೀಪಿಸಿದೆ. ಇಂದಿಗೂ ಕುಂದಗನ್ನಡವೆಂದರೆ ಸೆಳೆತ. ವಿಶ್ವ ಕುಂದಾಪ್ರ ಹಬ್ಬ ನಮ್ಮೂರಿನ ನೆನಪು ಮರುಕಳಿಸುವಂತೆ ಮಾಡಿದೆ. ನಾವು ಬಾಲ್ಯದಲ್ಲಿ ಆಡುತ್ತಿದ್ದ ಗ್ರಾಮೀಣ ಕ್ರೀಡೆಗಳು ಇಂದು ನಮ್ಮ ಮಕ್ಕಳು ಆಡುವಂತಾಗಿದೆ. – ಸೌಜನ್ಯ ಪಾವನ್‌, ಬೆಂಗಳೂರು ನಿವಾಸಿ

ನಾವು ಮೂಲತಃ ಬೆಂಗಳೂರಿ ನವರು. ಪಕ್ಕದ ಮನೆಯವರ ಕುಂದಕನ್ನಡದವರು. ಅವರೊಂದಿಗೆ ಇವತ್ತು ಬಂದಿದ್ದು. ಎಲ್ಲಿಯೂ ಭಾಷೆಯ ಬಗ್ಗೆ ಕಾಣದ ಸಂಭ್ರಮ ಮನೆ ಮಾಡಿದೆ. ಇಲ್ಲಿನ ಗ್ರಾಮೀಣ ಕ್ರೀಡೆ ನೋಡವುದೇ ಒಂದು ತರಹದ ಮಜಾ ನೀಡಿದೆ. - ಉಷಾ ಶಂಕರ್‌, ಬೆಂಗಳೂರಿನ ನಿವಾಸಿ

ಕುಂದಾಪುರ ಕನ್ನಡ ಬದುಕಿನ ಭಾಷೆ: ನಟ ರಮೇಶ್‌ ಭಟ್‌: 

ಬೆಂಗಳೂರು: ಕುಂದಾಪುರ ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆಯಾಗಿದೆ. ಅವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ತಮ್ಮ ಭಾಷೆ ನೀಡುತ್ತಾರೆ ಎಂದು ಚಿತ್ರನಟ ರಮೇಶ್‌ ಭಟ್‌ ತಿಳಿಸಿದರು.

ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಟೀಂ ಕುಂದಾಪುರಿಯನ್ಸ್‌ ಭಾನುವಾರ ಹಮ್ಮಿ ಕೊಂಡಿದ್ದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಇದು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮಾತೃ ಭಾಷೆ ಹಾಗೂ ಮನೆಯ ಮೂಲ ಭಾಷೆ ಮರೆಯಬಾರದು. ನಮ್ಮ ಭಾಷೆಯ ಮಹತ್ವ ತಿಳಿದುಕೊಂಡು ಪ್ರತಿಯೊಬ್ಬರೂ ವ್ಯವಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕುಂದಾಪುರ ರತ್ನ ಪ್ರಶಸ್ತಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್‌, ಚಿತ್ರ ನಿರ್ದೇಶಕ ಯಾಕುಬ್‌ ಖಾದರ್‌ ಅವರನ್ನು ಸನ್ಮಾನಿಸಲಾಯಿತು. “ಕುಂದಾಪುರ ಸಮ್ಮಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ ಕೊಡ್ಲಾಡಿ, ಅಂತಾರಾಷ್ಟ್ರೀಯ ಕ್ರೀಡಾಪಟು ವಿಠ್ಠಲ್‌, ಸಮಾಜ ಸೇವೆ ದಿನೇಶ್‌ ಬಾಂದವ್ಯ, ಶಿಕ್ಷಣ ಸುಜಾತ, ಪ್ರಗತಿ ಪರ ಕೃಷಿಕ ಕೃಷ್ಣ ಕುಲಾಲ್‌ ಆವರ್ಸೆ ಅವರಿಗೆ ನೀಡಿಲಾಯಿತು.

ಶಾಸಕ ಗುರುರಾಜ್‌ ಗಂಟಿಹೊಳೆ, ಮಹಾಲಕ್ಷ್ಮೀ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ನಟಿ ಅಮೃತಾ ರಾಮಮೂರ್ತಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.