ಚಿಂತಕರ ಹತ್ಯೆ ನಡುವಿನ ಸಾಮ್ಯತೆಯೇ ಚಿಂತೆ
Team Udayavani, Jan 5, 2018, 11:30 AM IST
ಬೆಂಗಳೂರು: ನಾಲ್ಕು ತಿಂಗಳು ಕಳೆದರೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ, ಚಿಂತಕ ಎಂ.ಎಂ.ಕಲಬುರ್ಗಿ, ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಗಳ ನಡುವೆ ಸಾಮ್ಯತೆಯಿದೆಯೇ ಎಂಬ ಬಗ್ಗೆ ಖಚಿತ ನಿರ್ಧಾರಕ್ಕೆ ಬರಲೂ ವಿಶೇಷ ತನಿಖೆ ತಂಡಕ್ಕೆ (ಎಸ್ಐಟಿ) ಸಾಧ್ಯವಾಗುತ್ತಿಲ್ಲ.
ಗೌರಿ ಹತ್ಯೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಹಲವು ಆಯಾಮಗಳಲ್ಲಿ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಪೋನ್ ಕರೆಗಳ ಜಾಡು ಹಿಡಿದು ತನಿಖೆ ಮುಂದುವರಿಸಿದ್ದಾರೆ. ಆದರೆ ಮಹಾರಾಷ್ಟ್ರ ವಿಚಾರವಾದಿ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಚಿಂತಕ ಎಂ.ಎಂ.ಕಲಬುರಗಿ ಹತ್ಯೆ ಹಾಗೂ ಗೌರಿ ಹತ್ಯೆಗೂ ಸಾಮ್ಯತೆಯಿದೆ ಎಂಬುದನ್ನು ಪತ್ತೆಹಚ್ಚಲು ಯತ್ನಿಸುತ್ತಿದ್ದಾರೆ.
ಆದರೆ, ಅಹಮದಾಬ್ ಹಾಗೂ ಮುಂಬೈನ ಎಫ್ಎಸ್ಎಲ್ ವರದಿಗಳು ಕೈ ಸೇರದ ಕಾರಣ ಖಚಿತ ನಿರ್ಧಾರಕ್ಕೆ ಬರಲು ಸಾಧ್ಯವಾಗದೇ, ತನಿಖೆಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಗೌರಿಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಸಂಬಂಧ ಬೆಂಗಳೂರಿನ ಎಫ್ಎಸ್ಎಲ್ ವರದಿ ನೀಡಿದ್ದು,ಪರಿಶೀಲನೆ ನಡೆಸಲಾಗಿದೆ.ಗೌರಿ ಹತ್ಯೆಗೆ 7.65 ಎಂಎಂ ನಾಡಪಿಸ್ತೂಲ್ ಬಳಕೆಯಾಗಿದೆ ಎಂದು ಖಚಿತಪಟ್ಟಿದೆ.
ಆದರೆ, ಗೌರಿ ಹತ್ಯೆ ಮಾದರಿಯಲ್ಲಿಯೇ ನಡೆದಿದ್ದ ನರೇಂದ್ರ ದಾಬೋಲ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆಗೂ ದುಷ್ಕರ್ಮಿಗಳು ಯಾವ ಪಿಸ್ತೂಲ್ ಹಾಗೂ ಗುಂಡುಗಳನ್ನು ಬಳಸಿದ್ದರು ಎಂಬುದರ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ. ಹೀಗಾಗಿ ಮುಂಬೈ ಹಾಗೂ ಅಹಮದಾಬಾದ್ನ ಎಫ್ಎಸ್ಎಲ್ ವರದಿಯನ್ನು ಪರಿಶೀಲಿಸಬೇಕಿದೆ. ಆದರೆ, ವರದಿ ಇನ್ನೂ ಕೈ ಸೇರಿಲ್ಲ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು.
ಗೌರಿಲಂಕೇಶ್ ತನಿಖೆ ಬಹುತೇಕ ಅಂತಿಮ ಘಟ್ಟ ತಲುಪಿದೆ. ಇತರೆ ಮೂರು ಹತ್ಯೆಗಳ ಕುರಿತ ಎಫ್ಎಸ್ಎಲ್ ವರದಿ ಸಾಮ್ಯತೆ ಪರಿಶೀಲನೆ ಸೇರಿದಂತೆ ಕೆಲ ತಾಂತ್ರಿಕ ಅಂಶಗಳ ಬಗ್ಗೆ ಸ್ಪಷ್ಟತೆ ದೊರೆಯಬೇಕಿದೆ. ಹಲವು ಆಯಾಮಗಳಲ್ಲಿ ದುಷ್ಕರ್ಮಿಗಳ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.
ಎರಡೇ ಸೆಕೆಂಡ್ನಲ್ಲಿ ಗುಂಡು ಹಾರಿಸಿದ್ದ ದುಷ್ಕರ್ಮಿ!: ಗೌರಿಲಂಕೇಶ್ ಹತ್ಯೆಗೈದಿದ್ದಾರೆ ಎನ್ನಲಾದ ಇಬ್ಬರು ದುಷ್ಕರ್ಮಿಗಳು ಇರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಕೇವಲ ಐದು ಸೆಕೆಂಡ್ಗಳ ದೃಶ್ಯಗಳಲ್ಲಿ ದುಷ್ಕರ್ಮಿ ಎರಡು ಸೆಕೆಂಡ್ನಲ್ಲಿ ಗೌರಿಗೆ ನಾಲ್ಕು ಗುಂಡುಗಳನ್ನು ಹಾರಿಸುತ್ತಾನೆ. ಇನ್ನೆರೆಡು ಸೆಕೆಂಡ್ಗಳಲ್ಲಿ ಎಸ್ಕೇಪ್ ಆಗುತ್ತಾನೆ. ಅಲ್ಲದೆ ಸಿಸಿಟಿವಿ ಪೂಟೇಜ್ನಲ್ಲಿ ಸೆರೆಯಾಗಿರುವ ಬೈಕ್ಗೆ ನಂಬರ್ ಪ್ಲೇಟ್ ಇರಲಿಲ್ಲ.
ಅದೇ ಮಾದರಿಯ ಬೈಕ್ಗಳು ರಾಜ್ಯದಲ್ಲಿ 13 ಸಾವಿರ ಇವೆ. ಈ ಪೈಕಿ 500 ಬೈಕ್ಗಳನ್ನು ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಇನ್ನು ಗೌರಿ ಹತ್ಯೆ ತನಿಖೆ ಭಾಗವಾಗಿ ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಸೆಪ್ಟೆಂಬರ್ 1ರಿಂದ 5ರವರೆಗಿನ 70ದಶಲಕ್ಷಗಳಷ್ಟು ಫೋನ್ ಕರೆಗಳು ವಿನಿಮಯವಾಗಿವೆ. ತನಿಖೆಯ ಸಲುವಾಗಿ 20 ದಶಲಕ್ಷ ಕರೆಗಳನ್ನು ಪರಿಶೀಲಿಸಲಾಗಿದೆ. ಆದರೆ, ದುಷ್ಕರ್ಮಿಗಳ ಖಚಿತತೆ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.