ಚಿಂತಕರ ಹತ್ಯೆ ನಡುವಿನ ಸಾಮ್ಯತೆಯೇ ಚಿಂತೆ


Team Udayavani, Jan 5, 2018, 11:30 AM IST

Gauri-Lank.jpg

ಬೆಂಗಳೂರು: ನಾಲ್ಕು ತಿಂಗಳು ಕಳೆದರೂ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೂ, ಚಿಂತಕ ಎಂ.ಎಂ.ಕಲಬುರ್ಗಿ, ನರೇಂದ್ರ ದಾಬೋಲ್ಕರ್‌, ಗೋವಿಂದ ಪನ್ಸಾರೆ ಹತ್ಯೆಗಳ ನಡುವೆ ಸಾಮ್ಯತೆಯಿದೆಯೇ ಎಂಬ ಬಗ್ಗೆ ಖಚಿತ ನಿರ್ಧಾರಕ್ಕೆ ಬರಲೂ ವಿಶೇಷ ತನಿಖೆ ತಂಡಕ್ಕೆ (ಎಸ್‌ಐಟಿ) ಸಾಧ್ಯವಾಗುತ್ತಿಲ್ಲ. 

ಗೌರಿ ಹತ್ಯೆ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಹಲವು ಆಯಾಮಗಳಲ್ಲಿ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಪೋನ್‌ ಕರೆಗಳ ಜಾಡು ಹಿಡಿದು ತನಿಖೆ ಮುಂದುವರಿಸಿದ್ದಾರೆ. ಆದರೆ ಮಹಾರಾಷ್ಟ್ರ ವಿಚಾರವಾದಿ ನರೇಂದ್ರ ದಾಬೋಲ್ಕರ್‌, ಗೋವಿಂದ ಪನ್ಸಾರೆ, ಚಿಂತಕ ಎಂ.ಎಂ.ಕಲಬುರಗಿ ಹತ್ಯೆ ಹಾಗೂ ಗೌರಿ ಹತ್ಯೆಗೂ ಸಾಮ್ಯತೆಯಿದೆ ಎಂಬುದನ್ನು ಪತ್ತೆಹಚ್ಚಲು ಯತ್ನಿಸುತ್ತಿದ್ದಾರೆ.

ಆದರೆ, ಅಹಮದಾಬ್‌ ಹಾಗೂ ಮುಂಬೈನ ಎಫ್ಎಸ್‌ಎಲ್‌ ವರದಿಗಳು ಕೈ ಸೇರದ ಕಾರಣ ಖಚಿತ ನಿರ್ಧಾರಕ್ಕೆ ಬರಲು ಸಾಧ್ಯವಾಗದೇ, ತನಿಖೆಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಗೌರಿಲಂಕೇಶ್‌ ಹಾಗೂ ಕಲಬುರ್ಗಿ ಹತ್ಯೆ ಸಂಬಂಧ ಬೆಂಗಳೂರಿನ ಎಫ್ಎಸ್‌ಎಲ್‌ ವರದಿ ನೀಡಿದ್ದು,ಪರಿಶೀಲನೆ  ನಡೆಸಲಾಗಿದೆ.ಗೌರಿ ಹತ್ಯೆಗೆ 7.65 ಎಂಎಂ ನಾಡಪಿಸ್ತೂಲ್‌ ಬಳಕೆಯಾಗಿದೆ ಎಂದು ಖಚಿತಪಟ್ಟಿದೆ.

ಆದರೆ, ಗೌರಿ ಹತ್ಯೆ ಮಾದರಿಯಲ್ಲಿಯೇ ನಡೆದಿದ್ದ ನರೇಂದ್ರ ದಾಬೋಲ್ಕರ್‌ ಹಾಗೂ ಗೋವಿಂದ ಪನ್ಸಾರೆ  ಹತ್ಯೆಗೂ ದುಷ್ಕರ್ಮಿಗಳು ಯಾವ ಪಿಸ್ತೂಲ್‌ ಹಾಗೂ ಗುಂಡುಗಳನ್ನು ಬಳಸಿದ್ದರು ಎಂಬುದರ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ. ಹೀಗಾಗಿ ಮುಂಬೈ ಹಾಗೂ ಅಹಮದಾಬಾದ್‌ನ ಎಫ್ಎಸ್‌ಎಲ್‌ ವರದಿಯನ್ನು ಪರಿಶೀಲಿಸಬೇಕಿದೆ. ಆದರೆ, ವರದಿ ಇನ್ನೂ ಕೈ ಸೇರಿಲ್ಲ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ತಿಳಿಸಿದರು.

ಗೌರಿಲಂಕೇಶ್‌ ತನಿಖೆ ಬಹುತೇಕ ಅಂತಿಮ ಘಟ್ಟ ತಲುಪಿದೆ. ಇತರೆ ಮೂರು ಹತ್ಯೆಗಳ ಕುರಿತ ಎಫ್ಎಸ್‌ಎಲ್‌ ವರದಿ ಸಾಮ್ಯತೆ ಪರಿಶೀಲನೆ ಸೇರಿದಂತೆ ಕೆಲ ತಾಂತ್ರಿಕ ಅಂಶಗಳ ಬಗ್ಗೆ ಸ್ಪಷ್ಟತೆ ದೊರೆಯಬೇಕಿದೆ. ಹಲವು ಆಯಾಮಗಳಲ್ಲಿ ದುಷ್ಕರ್ಮಿಗಳ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು. 

ಎರಡೇ ಸೆಕೆಂಡ್‌ನ‌ಲ್ಲಿ ಗುಂಡು ಹಾರಿಸಿದ್ದ ದುಷ್ಕರ್ಮಿ!: ಗೌರಿಲಂಕೇಶ್‌ ಹತ್ಯೆಗೈದಿದ್ದಾರೆ ಎನ್ನಲಾದ ಇಬ್ಬರು ದುಷ್ಕರ್ಮಿಗಳು ಇರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಕೇವಲ ಐದು ಸೆಕೆಂಡ್‌ಗಳ ದೃಶ್ಯಗಳಲ್ಲಿ ದುಷ್ಕರ್ಮಿ ಎರಡು ಸೆಕೆಂಡ್‌ನ‌ಲ್ಲಿ ಗೌರಿಗೆ ನಾಲ್ಕು ಗುಂಡುಗಳನ್ನು ಹಾರಿಸುತ್ತಾನೆ. ಇನ್ನೆರೆಡು ಸೆಕೆಂಡ್‌ಗಳಲ್ಲಿ ಎಸ್ಕೇಪ್‌ ಆಗುತ್ತಾನೆ. ಅಲ್ಲದೆ ಸಿಸಿಟಿವಿ ಪೂಟೇಜ್‌ನಲ್ಲಿ ಸೆರೆಯಾಗಿರುವ ಬೈಕ್‌ಗೆ ನಂಬರ್‌ ಪ್ಲೇಟ್‌ ಇರಲಿಲ್ಲ.

ಅದೇ ಮಾದರಿಯ ಬೈಕ್‌ಗಳು ರಾಜ್ಯದಲ್ಲಿ 13 ಸಾವಿರ ಇವೆ. ಈ ಪೈಕಿ 500 ಬೈಕ್‌ಗಳನ್ನು ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಇನ್ನು ಗೌರಿ ಹತ್ಯೆ ತನಿಖೆ ಭಾಗವಾಗಿ ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಸೆಪ್ಟೆಂಬರ್‌ 1ರಿಂದ 5ರವರೆಗಿನ 70ದಶಲಕ್ಷಗಳಷ್ಟು ಫೋನ್‌ ಕರೆಗಳು ವಿನಿಮಯವಾಗಿವೆ. ತನಿಖೆಯ ಸಲುವಾಗಿ 20 ದಶಲಕ್ಷ ಕರೆಗಳನ್ನು ಪರಿಶೀಲಿಸಲಾಗಿದೆ. ಆದರೆ, ದುಷ್ಕರ್ಮಿಗಳ ಖಚಿತತೆ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.