Love Matter: ಪ್ರೀತಿ ವಿಷಯ ತಿಳಿಸುವುದಾಗಿ ಬೆದರಿಸಿ ವಿದ್ಯಾರ್ಥಿನಿ ಬಳಿ ಸುಲಿಗೆಗೈದ ಯುವಕ!


Team Udayavani, Aug 8, 2024, 10:54 AM IST

Love Matter: ಪ್ರೀತಿ ವಿಷಯ ತಿಳಿಸುವುದಾಗಿ ಬೆದರಿಸಿ ವಿದ್ಯಾರ್ಥಿನಿ ಬಳಿ ಸುಲಿಗೆಗೈದ ಯುವಕ!

ಬೆಂಗಳೂರು: ಪ್ರೀತಿಯ ವಿಚಾರವನ್ನು ಕುಟುಂಬದವರಿಗೆ ಹೇಳುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ವಿದ್ಯಾರ್ಥಿನಿಯಿಂದ 75 ಗ್ರಾಂ ಚಿನ್ನಾಭರಣ ಹಾಗೂ 1.25 ಲಕ್ಷ ರೂ. ನಗದು ಸುಲಿಗೆ ಮಾಡಿದ್ದ ಆರೋಪಿಯನ್ನು ಸುಬ್ರ ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಲಸಂದ್ರದ ಕಾಕ ತೀಯ ನಗರ ನಿವಾಸಿ ತೇಜಸ್‌ (19) ಬಂಧಿತ.

ಆರೋಪಿಯಿಂದ 3.40 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ನಾಯ್ಡು ಲೇಔಟ್‌ ನಿವಾಸಿ ವಿದ್ಯಾರ್ಥಿನಿಯ ತಾಯಿ ಹೇಮಾ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಏನಿದು ಪ್ರಕರಣ?:  ನಾಯ್ಡುನಗರ ನಿವಾಸಿ 19 ವರ್ಷದ ವಿದ್ಯಾರ್ಥಿನಿಗೆ 2 ವರ್ಷದ ಹಿಂದೆ ಕಾಲೇಜಿನ ಸಹಪಾಠಿ ಪ್ರೀತಂ ಎಂಬಾತನ ಮೂಲಕ ಆರೋಪಿ ಪರಿಚಯವಾಗಿದ್ದಾನೆ. ಬಳಿಕ ಆರೋಪಿ ತೇಜಸ್‌, ವಿದ್ಯಾರ್ಥಿನಿಯ ಮೊಬೈಲ್‌ ನಂಬರ್‌ ಪಡೆದು ಆಗಾಗ್ಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸುತ್ತಿದ್ದ. ಇದೇ ವೇಳೆ ಆಕೆಯ ಕುಟುಂಬದವರು ಹಾಗೂ ಪ್ರಿಯಕರನ ಬಗ್ಗೆ ತಿಳಿದುಕೊಂಡಿದ್ದಾನೆ. ಕಳೆದ ಜೂನ್‌ನಲ್ಲಿ ವಿದ್ಯಾರ್ಥಿನಿಗೆ ಕರೆ ಮಾಡಿದ್ದ ತೇಜಸ್‌, “ನಿನ್ನ ಪ್ರೀತಿ ವಿಚಾರವನ್ನು ನಿನ್ನ ಸಹೋದರ ಮತ್ತು ತಾಯಿಗೆ ತಿಳಿಸುತ್ತೇನೆ. ಈ ವಿಚಾರ ತಿಳಿಸಬಾರದು ಎಂದರೆ, ಮನೆಯಲ್ಲಿರುವ ಚಿನ್ನಾಭರಣ ಹಾಗೂ ಹಣ ನನಗೆ ಕೊಡಬೇಕು’ ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಅಲ್ಲದೆ, ಮನೆ ಹಾಗೂ ಕಾಲೇಜು ಬಳಿ ಬಂದು ಆಕೆಗೆ ಬೆದರಿಕೆ ಹಾಕಿದ್ದಾನೆ.

ಅದರಿಂದ ಗಾಬರಿಗೊಂಡ ವಿದ್ಯಾರ್ಥಿನಿ, ಒಂದು ವೇಳೆ ತನ್ನ ಪ್ರೀತಿ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾದರೆ, ವ್ಯಾಸಂಗಕ್ಕೆ ತೊಂದರೆ ಉಂಟಾಗಬಹುದು ಎಂದು ಆತಂಕಗೊಂಡು ಮನೆಯಲ್ಲಿದ್ದ 75 ಗ್ರಾಂ ಚಿನ್ನಾಭರಣ ಮತ್ತು 1.25 ಲಕ್ಷ ರೂ. ಅನ್ನು ಆರೋಪಿ ತೇಜಸ್‌ಗೆ ನೀಡಿದ್ದಾಳೆ.

ಆರೋಪಿ ಡೆಲಿವರಿ ಬಾಯ್  ಬಂಧಿತ ಆರೋಪಿ ತೇಜಸ್‌ ವ್ಯಾಸಂಗ ಅರ್ಧಕ್ಕೆ ಮೊಟಕುಗೊಳಿಸಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ. ವಿದ್ಯಾರ್ಥಿನಿಯ ಪ್ರೀತಿ ವಿಚಾರ ಹಾಗೂ ಮನೆಯವರ ಬಗ್ಗೆ ತಿಳಿದುಕೊಂಡು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? :

ಇತ್ತೀಚೆಗೆ ವಿದ್ಯಾರ್ಥಿನಿಯ ತಾಯಿ ಹೇಮಾ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳಲು ಬೀರು ತೆರೆದು ನೋಡಿದಾಗ ಚಿನ್ನಾಭರಣ ಹಾಗೂ ನಗದು ಇಲ್ಲದಿರುವುದು ಕಂಡು ಬಂದಿದೆ. ಈ ಬಗ್ಗೆ ಪುತ್ರಿಯನ್ನು ಪ್ರಶ್ನೆ ಮಾಡಿದಾಗ, ಸ್ನೇಹಿತ ತೇಜಸ್‌ ಎಂಬಾತ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ವಿಚಾರ ತಿಳಿಸಿದ್ದಾರೆ. ಈ ಸಂಬಂಧ ಹೇಮಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.