ವಿಮಾನ ನಿಲ್ದಾಣದಿಂದ ಅಪಹರಿಸಿ ಯುವತಿ ಕೊಲೆ?


Team Udayavani, Aug 21, 2019, 3:08 AM IST

mureder

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಡೆಗೋಡೆ ಸನಿಹ ಕೊಲೆಯಾಗಿದ್ದ ಯುವತಿ ಕೊಲ್ಕತ್ತಾ ಮೂಲದ ಮಾಡೆಲಿಂಗ್‌ ಕ್ಷೇತ್ರದ ಕಾರ್ಯಕ್ರಮಗಳ ಆಯೋಜಕಿ ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ ಎಂದು ಗೊತ್ತಾಗಿದೆ.

ಮೇ 31ರಂದು ವಿಮಾನ ನಿಲ್ದಾಣದ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕಾಡಯರಪ್ಪನಹಳ್ಳಿಯ ಕಾಲು ದಾರಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದ ಬಾಗಲೂರು ಪೊಲೀಸರು, ಇದೀಗ ಯುವತಿಯ ಗುರುತು ಹಾಗೂ ಆಕೆಯ ಹಿನ್ನೆಲೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತೂಂದೆಡೆ ಕಾರ್ಯಕ್ರಮವೊಂದನ್ನು ನಡೆಸಿಕೊಡಲು ಕೊಲ್ಕತ್ತಾದಿಂದ ಆಗಮಿಸಿದ್ದ ಯುವತಿಯನ್ನು ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೊಲೆಗೈದಿರುವ ಬಗ್ಗೆ ಬಾಗಲೂರು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಬೆನ್ನಲ್ಲೇ ಕೊಲೆಪ್ರಕರಣದ ಆರೋಪಿ ಎನ್ನಲಾದ ಹಿನ್ನೆಲೆಯಲ್ಲಿ ಕ್ಯಾಬ್‌ ಚಾಲಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ, ಪ್ರಕರಣ ತನಿಖಾ ಹಂತದಲ್ಲಿರುವ ಕಾರಣ ಆರೋಪಿ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದೂರವಾಣಿ ಕರೆ ನೀಡಿತು ಸುಳಿವು!: ಯುವತಿಯ ತಲೆ ಮೇಲೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೊಲೆಗೈದಿದ್ದ ದುಷ್ಕರ್ಮಿಗಳು, ಆಕೆಯ ಎದೆಭಾಗ ಹಾಗೂ ಹೊಟ್ಟೆಯ ಭಾಗಕ್ಕೂ ಇರಿದ ಗುರುತುಗಳಾಗಿದ್ದವು. ಘಟನಾ ಸ್ಥಳದಲ್ಲಿ ಯಾವುದೇ ರೀತಿ ದಾಖಲೆಗಳಾಗಲಿ ಲಭ್ಯವಾಗಿರಲಿಲ್ಲ.ಅತ್ಯಂತ ಜಟಿಲವಾಗಿದ್ದ ಈ ಪ್ರಕರಣದ ತನಿಖೆಯ ಜಾಡುಹಿಡಿದು ಆ ಪ್ರದೇಶದ ಘಟನಾ ಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದ ದೂರವಾಣಿ ಕರೆಗಳನ್ನು ಪರಿಶೀಲನೆ ನಡೆಸಿದಾಗ ಯುವತಿ ಬಳಸುತ್ತಿದ್ದ ಮೊಬೈಲ್‌ ನಂಬರ್‌ ಪತ್ತೆಯಾಗಿತ್ತು.

ಇದೇ ಸುಳಿವು ಅಧರಿಸಿ ತನಿಖೆ ನಡೆಸಿದಾಗ ಆಕೆ ಕೊಲ್ಕತ್ತಾ ಮೂಲದವಳು ಹಾಗೂ ಮಾಡೆಲಿಂಗ್‌ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳ ಆಯೋಜನೆ ಮಾಡುವ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಕೊಲ್ಕತ್ತಾದಲ್ಲಿರುವ ಆಕೆಯ ಪೋಷಕರನ್ನು ಪತ್ತೆ ಮಾಡಿ ವಿಷಯ ತಿಳಿಸಿದ್ದು, ನಗರಕ್ಕೆ ಆಗಮಿಸಿರುವ ಅವರು ಮೃತದೇಹದ ಗುರುತು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿನ್ನದ ಸರದ ಆಸೆಗೆ ನಡೆಯಿತೇ ಕೊಲೆ?: ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯುವತಿಯನ್ನು ಕರೆದೊಯ್ದು ಆಕೆಯ ಬಳಿಯಿದ್ದ ಚಿನ್ನದ ಸರ ಹಾಗೂ ಹಣ ದೋಚುವ ಬಗೆ ಕೊಲೆ ಮಾಡಿರುವ ಸಾಧ್ಯತೆಯಿದೆ.ಈ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಕೊಲೆಯಾಗಿದ್ದ ಅಪರಿಚಿತ ಯುವತಿಯ ವಿಳಾಸ, ಆಕೆಯ ಕುರಿತ ಮಾಹಿತಿ ಪತ್ತೆಹಚ್ಚಲಾಗಿದ್ದು, ಕೊಲೆಗೆ ಕಾರಣ ಸಹ ಗೊತ್ತಾಗಿದ್ದು, ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ.
-ಭೀಮಾಶಂಕರ್‌ ಎಸ್‌.ಗುಳೇದ್‌, ಡಿಸಿಪಿ, ಈಶಾನ್ಯ ವಿಭಾಗ

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.