ಜಿಲ್ಲೆಯ 25 ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿ


Team Udayavani, May 12, 2019, 3:00 AM IST

jilleya

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿನ ವಿವಿಧ ಕೈಗಾರಿಕೆಗಳು ಹಾಗೂ ಜನರಿಂದ ಕೆರೆಗಳ ಅಭಿವೃದ್ಧಿಗೆ ಉತ್ತಮ ಸಹಕಾರ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 25 ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಹೇಳಿದರು.

ತಾಲೂಕಿಗೆ ಸಮೀಪದ ಅರ್ಜಿನಬೆಟ್ಟನಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿಗಾಗಿ ಎಚ್‌.ಎಂ.ಕ್ಲಾಸಿಕಲ್‌ ಸಂಸ್ಥೆ ನೀಡಿದ 25ಲಕ್ಷ ರೂ. ದೇಣಿಗೆಯಲ್ಲಿ ಕೈಗೊಂಡ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ನೀರಿಗೆ ತೀವ್ರ ತೊಂದರೆ: ಅರ್ಜುನಬೆಟ್ಟನಹಳ್ಳಿ ಗ್ರಾಮದಲ್ಲಿ 120 ಕುಟುಂಬಗಳಿವೆ. ಕುಡಿಯುವ ನೀರಿಗೆ ತೀವ್ರ ತೊಂದರೆ ಇದೆ. ಹೀಗಾಗಿ, ಮಳೆ ನೀರನ್ನೇ ಬಳಸಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದು, ಒಂದು ಕುಟುಂಬಕ್ಕೆ 25,000 ರೂ. ಖರ್ಚಾಗಲಿದೆ. ಈ ಹಣವನ್ನು ಎಚ್‌.ಎಂ.ಕ್ಲಾಸಿಕಲ್‌ ಕಂಪನಿಯವರೇ ಭರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಮಳೆ ನೀರು ಸಂಗ್ರಹಿಸಿ: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದಲ್ಲಿ ಒಂದು ಕುಟುಂದ ಅಗತ್ಯಕ್ಕೆ ತಕ್ಕಂತೆ ಮಳೆ ನೀರು ಸಂಗ್ರಹಿಸಿಕೊಂಡು ಇಡೀ ವರ್ಷ ಬಳಸುತ್ತಿರುವ ನಿದರ್ಶನ ನಮ್ಮ ಕಣ್ಣ ಮುಂದಿದೆ. ಇದರಿಂದ ಆರೋಗ್ಯ ಸುಧಾರಣೆಯ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಬಗೆಹರಿಲಿದೆ ಎಂದರು.

ಹಣ ನೀಡಿದರೂ ನೀರು ಸಿಗಲ್ಲ: ಕೆರೆಯಲ್ಲಿ ನೀರು ನಿಂತು ಅಂತರ್ಜಲ ಸೇರುತ್ತಿದ್ದ ಮಳೆ ನೀರನ್ನು ಇಷ್ಟು ದಿನ ಕೃಷಿ ಮತ್ತು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗುತ್ತಿತ್ತು. ಆದರೆ, ಈಗ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ಕಂಪನಿಗಳು, ಕೈಗಾರಿಕೆಗಳು ಸಹ ಎಲ್ಲಾ ರೀತಿಯ ಬಳಕೆಗೂ ಅಂತರ್ಜಲವನ್ನೇ ಅವಲಂಬಿಸಿವೆ.

ಹೀಗಾಗಿ, ಕೆರೆಗಳ ಅಭಿವೃದ್ಧಿಗೆ ಕೈಗಾರಿಕೆಗಳು ಉದಾರವಾಗಿ ಆರ್ಥಿಕ ನೆರವು ನೀಡುವ ಮೂಲಕ ಮಳೆ ನೀರು ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಲ್ಲವಾದರೆ ಹಣ ನೀಡಿದರೂ ನೀರು ದೊರೆಯದಂತಹ ಭೀಕರ ದಿನಗಳು ಸಮೀಪದಲ್ಲೇ ಇವೆ ಎಂದು ಎಚ್ಚರಿಕೆ ನೀಡಿದರು.

ಮಳೆ ನೀರು ಸಂಗ್ರಹಕ್ಕಾಗಿ ನೋಟಿಸ್‌: ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಜಿಲ್ಲೆಯಲ್ಲಿನ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಉದ್ದೇಶದ ಕಟ್ಟಡಗಳು ಸೇರಿದಂತೆ ಮನೆಗಳು ಸಹ ಮಳೆ ನೀರು ಸಂಗ್ರಹ ಮಾಡಿಕೊಳ್ಳುವಂತೆ ನೋಟಿಸ್‌ ನೀಡಲಾಗಿದೆ. ಈ ಬಗ್ಗೆ ಕೈಗಾರಿಕೆಗಳ ವ್ಯವಸ್ಥಾಪಕರ ಸಭೆಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೆಲಮಂಗಲ ತಾಲೂಕು ತಹಶೀಲ್ದಾರ್‌ ರಾಜಶೇಖರ್‌, ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಸುನಿತಾ, ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್‌, ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್‌, ಎಚ್‌.ಎಂ.ಕ್ಲಾಸಿಕಲ್‌ ಪ್ರೈವೇಟ್‌ ಲಿಮಿಟೆಡ್‌ನ‌ ಹೆಚ್ಚುವರಿ ವ್ಯವಸ್ಥಾಪಕಿ ರಮಾ ರಾವ್‌, ಸಂತೋಷ್‌ ಕುಮಾರ್‌ ಹೆಗಡೆ, ವ್ಯವಸ್ಥಾಪಕ ರಾಜಶೇಖರ್‌, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಯ್ಯ ಇತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.