656 ಮಂದಿ ಸ್ವದೇಶಕ್ಕೆ, ಇಬ್ಬರಿಗೆ ಸೋಂಕು


Team Udayavani, May 24, 2020, 5:58 AM IST

6656-reeturn

ದೇವನಹಳ್ಳಿ: ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಜಕಾರ್ತ, ದೋಹಾ, ಕೌಲಾಲಂಪುರ, ಮಾಲೆ ದೇಶಗಳಿಂದ ಸುಮಾರು 656 ಪ್ರಯಾಣಿಕರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಇಬ್ಬರಿಗೆ ಸೋಂಕು ಕಂಡು ಬಂದಿದೆ.  ಅವರನ್ನು ಬೆಂಗಳೂರಿನ ರಾಜೀವ್‌ ಗಾಂಧಿ  ಆಸ್ಪತ್ರೆಗೆ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.

ಮಾಲ್ಡೀವ್ಸ್‌ನ ಮಾಲೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್‌ ಇಂಡಿಯಾ ವಿಮಾನ ನಿಲ್ದಾಣದಲ್ಲಿ  ಗರ್ಭಿಣಿಯರು ಮಕ್ಕಳು ಸೇರಿ ದಂತೆ 152 ಮಂದಿ ಅನಿವಾಸಿ ಭಾರತೀ ಯರು ಬಂದಿದ್ದಾರೆ. 152 ಪ್ರಯಾಣಿಕರಲ್ಲಿ 2 ಗರ್ಭಿಣಿ ಯರು ಮತ್ತು 10 ವರ್ಷದ ಒಂದು ಮಗು  ಸೇರಿದಂತೆ 132 ಪುರುಷರು ಮತ್ತು 20 ಮಹಿಳೆ ಯರು ಇದ್ದಾರೆ.

ತಜ್ಞ ವೈದ್ಯರು ಹಾಗೂ  ಸಿಬ್ಬಂದಿ ಪ್ರಯಾಣಿಕರ ತಪಾಸಣೆ ನಡೆಸಿದ್ದು, ಅದರಲ್ಲಿ ಇಬ್ಬರಿಗೆ ಕೋವಿಡ್‌ 19 ಸೋಂಕು ಕಂಡು ಬಂದ ಹಿನ್ನೆಲೆ ಯಲ್ಲಿ ಅವರನ್ನು ಬೆಂಗಳೂರಿನ ರಾಜೀವ್‌ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್‌ಗೆ ಕಳಿಸಲಾಗಿದೆ. ಕತಾರ್‌ನ  ದೋಹಾದಿಂದ 10ನೇ ಏರ್‌ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು ಮಕ್ಕಳೂ ಸೇರಿದಂತೆ 182 ಅನಿವಾಸಿ ಭಾರತೀ ಯರು ಬಂದಿದ್ದಾರೆ.

ಒಟ್ಟು 182 ಪ್ರಯಾಣಿಕರಲ್ಲಿ  10 ವರ್ಷದ ಒಳಗಿನ ಮಕ್ಕಳು 16, 127ಪುರುಷರು ಮತ್ತು 39  ಮಹಿಳೆಯರು ಇದ್ದಾರೆ. ಪ್ರಯಾಣಿಕರಲ್ಲಿ ಕೋವಿಡ್‌ 19 ಸೋಂಕು ಲಕ್ಷಣಗಳು ಕಂಡು ಬಂದಿಲ್ಲ. ಮಲೇಷ್ಯಾದ ಕೌಲಾಲಂಪುರನಿಂದ 11ನೇ ವಿಮಾನದಲ್ಲಿ 108 ಮಂದಿ ಅನಿ ವಾಸಿ ಭಾರತೀಯರು ಬಂದಿದ್ದಾರೆ. ಒಟ್ಟು 108 ಪ್ರಯಾಣಿಕರಲ್ಲಿ ಒಬ್ಬ ಗರ್ಭಿಣಿ ಇಬ್ಬರು ಮಕ್ಕಳು ಸೇರಿದಂತೆ ಪುರುಷರು 80, 28 ಮಹಿಳೆಯರಿದ್ದಾರೆ.

ಇಂಡೋನೇಷ್ಯಾದ ಜಕಾರ್ತ ದಿಂದ 12ನೇ ವಿಮಾನದಲ್ಲಿ 214 ಅನಿವಾಸಿ ಭಾರತೀಯರು ಇದ್ದಾರೆ. ತಜ್ಞ ವೈದ್ಯರು ಮತ್ತು ಸಿಬ್ಬಂದಿ 214 ಪ್ರಯಾಣಿಕರ ಅರೋಗ್ಯ ತಪಾಸಣೆ  ನಡೆಸಿದ್ದು, ಪ್ರಯಾಣಿಕ ರಲ್ಲಿ ಕೋವಿಡ್‌ 19 ಸೋಂಕು ಲಕ್ಷಣಗಳು ಕಂಡು ಬಂದಿರುವುದಿಲ್ಲ. ಡೀಸಿ ಪಿ.ಎನ್‌.ರವೀಂದ್ರ ಮಾತನಾಡಿ, 4 ದೇಶಗಳಿಂದ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 656 ಪ್ರಯಾ ಣಿಕರು ಬಂದಿದ್ದಾರೆ.

ಎಲ್ಲ  ಪ್ರಯಾಣಿಕರು 14 ದಿನಗಳ ಕ್ವಾರಂಟೈನ್‌ಗೆ ಹೋಟೆಲ್‌ಗ‌ಳಿಗೆ ಕಳಿಸಿಕೊಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿ ಕಾರಿ ಜಗದೀಶ ಕೆ. ನಾಯ್ಕ, ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ, ಪುರಸಭೆ ಮುಖ್ಯಾಧಿ ಕಾರಿ ಎ.ಎಚ್‌.ನಾಗ ರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.