ಬಮೂಲ್‌ಗೆ 80 ಕೋಟಿ ರೂ. ನಷ್ಟ


Team Udayavani, Oct 28, 2020, 1:02 PM IST

br-tdy-1

ದೇವನಹಳ್ಳಿ: ಕೋವಿಡ್ ಹಿನ್ನೆಲೆಯಲ್ಲಿ ಬೆಂಗಳೂರು ಹಾಲು ಒಕ್ಕೂಟಕ್ಕೆ ಬರೋಬ್ಬರಿ 80 ಕೋಟಿ ರೂ. ನಷ್ಟವಾಗಿರುತ್ತದೆ. ಕೋವಿಡ್‌-19ರ ಸೋಂಕು ಎಲ್ಲಾ ಕ್ಷೇತ್ರಗಳಲ್ಲಿಯೂ ನಷ್ಟವನ್ನುಂಟು ಮಾಡಿದೆ ಎಂದು ಬೆಂಗಳೂರು ಹಾಲು ಒಕ್ಕೂಟದನಿರ್ದೇಶಕ ಬಿ.ಶ್ರೀನಿವಾಸ್‌ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಕಾರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಸುಗಳಿಗೆ ಸಮತೋಲನ ಆಹಾರ ನೀಡಿದರೆ ಹಾಲಿನಲ್ಲಿ ಫ್ಯಾಟ್‌ ಅಂಶ ಹೆಚ್ಚಾಗುತ್ತದೆ ಎಂದರು.

ಸಹಕಾರ: ದಿನನಿತ್ಯ ಬೆಂಗಳೂರು ಹಾಲು ಒಕ್ಕೂಟಕ್ಕೆ 18 ಲಕ್ಷ ಲೀ.ಹಾಲು ಸಂಗ್ರಹಣೆಯಾಗುತ್ತಿದ್ದು, ಅದರಲ್ಲಿ 6-7ಲಕ್ಷ ಲೀ.ಹಾಲು ಮಾತ್ರ ಮಾರಾಟವಾಗುತ್ತಿದೆ.ನಗರ ಹಾಗೂ ಗ್ರಾಮೀಣ ಭಾಗದ ಹೋಟೆಲ್‌ಗ‌ಳಲ್ಲಿ ಶೇ.75ರಷ್ಟು ಹಾಲು ಖರೀದಿ ಕಡಿಮೆಯಾಗಿದೆ. ಆದರೂ ಸಹ ಹಾಲನ್ನು ಪುಡಿ, ಚೀಸ್‌, ಇತರೆ ಉತ್ಪನ್ನಗಳ ಬಳಕೆ ಮಾಡುತ್ತಿದ್ದರೂ ನಷ್ಟವಾಗುತ್ತಿದೆ. ಸಂಘದ ಅಭಿವೃದ್ಧಿಗೆ ಬಮೂಲ್‌ನಿಂದ ಸಿಗುವ ಎಲ್ಲಾ ರೀತಿಯ ಸಹಕಾರ  ನೀಡಲಾಗುವುದು ಎಂದು ತಿಳಿಸಿದರು.

ಬಮೂಲ್‌ನಿಂದ ಅನುಕೂಲ: ರೈತರು ರಾಸುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ವೈದ್ಯರ ಸಲಹೆಯಂತೆ ನೋಡಿಕೊಳ್ಳಬೇಕು. ಇತರೆ ವೈದ್ಯರು ನೀಡುವ ಸಲಹೆಗಳನ್ನು ಕಡೆಗಣಿಸಬೇಕು. ಉತ್ತಮ ರಾಸುಗಳಿಗೆಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಂಡರೆ, ಲಾಭ ಕಾಣಲು ಸಾಧ್ಯವಾಗುತ್ತದೆ. ಕೋವಿಡ್‌ ಇರುವುದರಿಂದಹಾಲಿನ ಉತ್ಪನ್ನಗಳ ಬೇಡಿಕೆ ಕಡಿಮೆಯಿದ್ದು, ರೈತರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬಮೂಲ್‌ನಿಂದ ಹೆಚ್ಚಿನ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

326 ಸದಸ್ಯರು: ಕಾರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್‌ .ಭೈರೇಗೌಡ ಮಾತನಾಡಿ, ಸಂಘವು 1975ರಲ್ಲಿ ಪ್ರಾರಂಭವಾಗಿ ಇಲ್ಲಿಯವರೆಗೆ 326 ಸದಸ್ಯರನ್ನು ಹೊಂದಿದೆ. ಇದರಲ್ಲಿ 132 ಸಕ್ರಿಯ ಮತ್ತು 194 ಸಕ್ರಿಯರಲ್ಲದ ಸದಸ್ಯರು ಇದ್ದಾರೆ. 106 ಸದಸ್ಯರು ಹಾಲು ಪೂರೈಸುತ್ತಿದ್ದಾರೆ.

ಒಕ್ಕೂಟದ ನಿರ್ದೇಶಕರ ಅನುದಾನದಲ್ಲಿ ಒಂದು ಮಾದರಿ ದನದ ಕೊಟ್ಟಿಗೆ ನಿರ್ಮಾಣ ಮಾಡಲಾಗುತ್ತಿದೆ. ಒಕ್ಕೂಟದ ಸಹಕಾರದಿಂದ ರಾಸುಗಳ ಆರೋಗ್ಯ ತಪಾಸಣೆ, ಲಸಿಕೆ, ವಿಮಾ ಯೋಜನೆ, ಸಂಘದ ಸದಸ್ಯರಿಗೆ ಶುದ್ಧ ಹಾಗೂ ಗುಣಮಟ್ಟದ ಹಾಲು ಉತ್ಪಾದನೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ರಾಸುಗಳ ಆರೋಗ್ಯಕ್ಕೆ ತುರ್ತು ವೈದ್ಯಕೀಯ ಸೇವೆಯನ್ನು ಸಹ ನೀಡಲಾಗುತ್ತಿದೆ. ಸಂಘದ ಸದಸ್ಯರು ಸಂಘವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗುಣಮಟ್ಟದ ಹಾಲು ಪೂರೈಕೆಗೆ ಒತ್ತು ನೀಡಬೇಕು ಎಂದು ಹೇಳಿದರು.

ನಿರ್ದೇಶಕರಾದ ಕೆ.ಲಕ್ಷ್ಮೀಗೌಡ, ಎಂ.ಮುನಿಕೃಷ್ಣಪ್ಪ, ಬಿ.ಎನ್‌.ಮುನೇಗೌಡ, ಕೆ.ಎಸ್‌.ಮುನೇಗೌಡ, ಕೆ.ಸುನೀಲ್‌, ಎಂ. ವೆಂಕಟೇಶ್‌, ಕಾಂತಮ್ಮ, ನಾಗರತ್ನ, ನಾರಾಯಣಮ್ಮ, ನಾರಾಯಣಸ್ವಾಮಿ, ದೇವನಹಳ್ಳಿ ಶಿಬಿರದ ಬಮೂಲ್‌ ವಿಸ್ತರಣಾಧಿಕಾರಿ ಹೆಚ್‌. ಎಂ.ಅನಿಲ್‌ಕುಮಾರ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್‌.ಮುನಿರಾಜು, ಹಾಲು ಪರೀಕ್ಷಕ ಶಶಿಕುಮಾರ ವಿ., ಸಹಾಯಕಮಂಜುನಾಥ್‌, ಗ್ರಾಪಂ ಮಾಜಿ ಅಧ್ಯಕ್ಷ ಎ.ದೇವರಾಜ್‌, ರಾಜೇಂದ್ರ, ತಾಪಂ ಮಾಜಿ ಉಪಾಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ, ಮುಖಂಡ ಮುನಿಕೃಷ್ಣ, ಸದಸ್ಯರು ಇದ್ದರು.

ಸಂಘವು ಒಕ್ಕೂಟ ಮತ್ತು ಗ್ರಾಮದ ವಿಎಸ್‌ಎಸ್‌ಎನ್‌, ಕೆಜಿಬಿ ಕಾರ್ಪೊರೇಷನ್‌ ಬ್ಯಾಂಕ್‌ ಗಳಲ್ಲಿ ಉಳಿತಾಯ ಖಾತೆ ಮತ್ತು ನಿಶ್ಚಿತ ಠೇವಣಿ ಹೊಂದಿದ್ದು,  ಸಂಘದ ಸದಸ್ಯರ, ಆಡಳಿತ ಮಂಡಳಿಯ, ಒಕ್ಕೂಟ ನಿರ್ದೇಶಕರು, ಅಧಿಕಾರಿ ಗಳ ಸಹಕಾರ ಮತ್ತು ಮಾರ್ಗ ದರ್ಶನದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಎಸ್‌.ಭೈರೇಗೌಡ, ಅಧ್ಯಕ್ಷ ಕಾರಹಳ್ಳಿ ಡೇರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.